'ಸೋನಾಲಿ ಬೇಂದ್ರೆಗೆ ಶ್ರದ್ಧಾಂಜಲಿ' ಬಿಜೆಪಿ ಶಾಸಕನ ಎಡವಟ್ಟು ಟ್ವೀಟ್!
ಮುಂಬೈ, ಸೆಪ್ಟೆಂಬರ್ 08: ವಿವಾದಗಳನ್ನೇ ಹೊದ್ದು ಮಲಗುತ್ತಿರುವ ಬಿಜೆಪಿ ಶಾಸಕ ರಾಮ್ ಕದಮ್, ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಅವರಿಗೆ 'ಶ್ರದ್ಧಾಂಜಲಿ' ಎಂದು ಟ್ವೀಟ್ ಮಾಡಿ, ಭಾರೀ ಆಕ್ರೋಶಕ್ಕೆ ಈಡಾಗಿದ್ದಾರೆ.
"ಅಮೆರಿಕದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಸೋನಾಲಿ ಬೇಂದ್ರೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ನನ್ನ ಸಂತಾಪಗಳು" ಎಂದು ಅವರು ಮರಾಠಿ ಭಾಷೆಯಲ್ಲಿ ಮಾಡಿದ ಟ್ವೀಟ್ ಅನ್ನು ರಾಮ್ ಕದಮ್ ವಿರೋಧಿಗಳು ಟ್ರೋಲ್ ಮಾಡುತ್ತಿದ್ದಾರೆ.
ಜೊತೆಗೆ ಸೋನಾಲಿ ಬೇಂದ್ರೆ ಅವರ ಅಭಿಮಾನಿಗಳು ಕದಮ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೂ ಮೊದಲೇ ಅವರು ನಿಧನರಾಗಿದ್ದಾರೆಂದು ಟ್ವೀಟ್ ಮಾಡಿ ಹಲವು ರಾಜಕಾರಣಿಗಳು ಪ್ರಮಾದ ಎಸಗಿದ್ದರು. ಆದರೆ ನಿಖರ ಮಾಹಿತಿಯೇ ಇಲ್ಲದೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೀಗೆಲ್ಲ ಟ್ವೀಟ್ ಮಾಡುವುದು ಸರಿಯೇ ಎಂದು ಟ್ವಿಟ್ಟರ್ ನಲ್ಲಿ ಕದಮ್ ಅವರನ್ನು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕದಮ್
ಬೇಜವಾಬ್ದಾರಿ ಟ್ವೀಟ್ ಮಾಡಿ ನಂತರ ಅದನ್ನು ಕದಮ್ ಡಿಲೀಟ್ ಮಾಡಿದ್ದಾರಾದರೂ ಅವರ ಟ್ವೀಟ್ ನ ಸ್ಕ್ರೀನ್ ಶಾಟ್ ಅಂತೂ ಟ್ರೋಲ್ ಆಗುತ್ತಲೇ ಇದೆ. ಇತ್ತೀಚೆಗಷ್ಟೇ ಹುಡುಗಿಯರನ್ನು ಕಿಡ್ನ್ಯಾಪ್ ಮಾಡಿ ಮದುವೆ ಮಾಡಿಸುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕದಮ್ ವಿವಾದದ ಪಟ್ಟಿಗೆ ಇದು ಹೊಸ ಸೇರ್ಪಡೆ ಎನ್ನಿಸಿದೆ.
| Array |
ಮೊದಲು ಶ್ರದ್ಧಾಂಜಲಿ, ನಂತರ ಸಮಜಾಯಿಷಿ!
ಮೊದಲು ಶ್ರದ್ಧಾಂಜಲಿ ಟ್ವೀಟ್ ಮಾಡಿ ಪ್ರಮಾದ ಎಸಗಿ, ನಂತರ ಡಿಲೀಟ್ ಮಾಡಿದ್ದಾಯ್ತು. ಕೊನೆಗೆ ಕಳೆದ ಎರಡು ದಿನಗಳಿಂದ ಅವರ ಆರೋಗ್ಯದ ಬಗ್ಗೆ ಕೆಲವು ವದಂತಿ ಹಬ್ಬಿತ್ತು. ನಾನು ಅವರ ಆರೋಗ್ಯ ಸುಧಾರಿಸಲಿ ಮತ್ತು ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.
|
ಇವರೊಬ್ಬ ಶಾಸಕ!
ಸದಾ ವಿವಾದ ಸೃಷ್ಟಿಸುವ ಈ ವ್ಯಕ್ತಿ ಒಬ್ಬ ಶಾಸಕ! ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಮಹಾರಾಷ್ಟ್ರ ಪೊಲೀಸ್ ಯಾಕೆ ಈತನ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ಈತ ಈಗ ನಟಿ ಸೋನಾಲಿ ಬೇಂದ್ರೆ ಇಹಲೋಕ ತ್ಯಜಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇಂಥವರ ವಿರುದ್ಧ ಒದಲು ಕ್ರಮ ಕೈಗೊಳ್ಳಿ ಎಂದಿದ್ದಾರೆ ನೀತಾ ಕೋಲಾಟ್ಕರ್
|
ಕ್ಯಾನ್ಸರ್ ನಿಂದ ಬಳಲುತ್ತಿರುವ ಸೋನಾಲಿಬೇಂದ್ರೆ
ಕ್ಯಾನ್ಸರ್ ನಿಂದ ಬಳಲುತ್ತಿರುವ ಸೋನಾಲಿ ಬೇಂದ್ರೆ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧನಾತ್ಮಕ ಮನೋಭಾವದಿಂದ ಕ್ಯಾನ್ಸರ್ ಅನ್ನು ಗೆಲ್ಲುವ ಪ್ರಯತ್ನದಲ್ಲಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ತಮ್ಮ ಮಾತುಗಳ ಮೂಲಕ, ಅಕ್ಷರಗಳ ಮೂಲಕ ನೂರಾರು ಜನರಲ್ಲಿ ಸ್ಫೂರ್ತಿ ತುಂಬುತ್ತಿರುವ ಅವರ ಕುರಿತು ಇಂಥ ಬೇಜವಾಬ್ದಾರಿ ಹೇಳಿಕೆ ನೀಡೋದು ಸರಿಯೇ?
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications