ನಕಲಿ ಎನ್ ಕೌಂಟರ್ : ಅಮಿತ್ ಶಾಗೆ ಕೋರ್ಟಿನಿಂದ ಕ್ಲೀನ್ ಚಿಟ್
ನವದೆಹಲಿ, ಡಿ.30: ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಲುಕಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಶಾ ಅವರಿಗೆ ಸಿಬಿಐ ನ್ಯಾಯಾಲಯದಿಂದ ಮಂಗಳವಾರ ಕ್ಲೀನ್ ಚಿಟ್ ಸಿಕ್ಕಿದೆ. ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿ ಕೇಸಿನಿಮ್ದ ಖುಲಾಸೆಗೊಳಿಸುವಂತೆ ಶಾ ಅವರು ಅರ್ಜಿ ಹಾಕಿದ್ದರು.
ಎರಡು ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್ ಶಾಗೆ ಸಮನ್ಸ್ ಜಾರಿಯಾಗಿತ್ತು. ಒಮ್ಮೆ ಬಂಧನಕ್ಕೂ ಒಳಪಟ್ಟಿದ್ದರು. ಅದರೆ, ಶಾ ಅರ್ಜಿ ವಿಚಾರಣೆ ನಡೆಸಿದ ಮುಂಬೈನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ ಸರಿಯಾದ ಸಾಕ್ಷಿ ಆಧಾರಗಳು ಲಭ್ಯವಾಗದ ಕಾರಣ ಸೊಹ್ರಾಬುದ್ದೀನ್ ಶೇಖ್, ತುಳಸಿ, ಪ್ರಜಾಪತಿ ನಕಲಿ ಎನ್ ಕೌಂಟರ್ ಪ್ರಕರಣಗಳಿಂದ ಅಮಿತ್ ಶಾ ಹೆಸರನ್ನು ಕೈಬಿಡಲಾಗಿದೆ.
ಅಮಿತ್ ಶಾ ಹಾಗೂ ಇನ್ನಿತರ ಆರೋಪಿಗಳ ವಿರುದ್ಧದ ಪ್ರಕರಣದಲ್ಲಿ ಇದೇ ವರ್ಷ ಗುಜರಾತಿನಿಂದ ಮುಂಬೈಗೆ ವರ್ಗಾಯಿಸಲಾಗಿತ್ತು. ಅಮಿತ್ ಶಾ ಸೇರಿದಂತೆ 37 ಜನರ ವಿರುದ್ಧ ಸಿಬಿಐ ತಂಡ ಚಾರ್ಜ್ ಶೀಟ್ ಸಲ್ಲಿಸಿತ್ತು. [ಅಮಿತ್ ಶಾ ಗೆ ಕ್ಲೀನ್ ಚಿಟ್ ನೀಡಿಲ್ಲ: ಸದಾಶಿವಂ]

2005ರಲ್ಲಿ ಅಮಿತ್ ಶಾ ಅವರು ಗುಜರಾತಿನ ಗೃಹ ಸಚಿವರಾಗಿದ್ದ ಕಾಲದಲ್ಲಿ ನಕಲಿ ಎನ್ ಕೌಂಟರ್ ನಲ್ಲಿ ಪೊಲೀಸರು ಉಗ್ರಗ್ರಾಮಿ ಎಂದು ಹೇಳಿ ಸೊಹ್ರಾಬುದ್ದೀನ್ ಅವರನ್ನು ಹತ್ಯೆ ಮಾಡಿದ್ದರು. ಈ ಪ್ರಕರಣದ ಸಾಕ್ಷಿಯಾಗಿದ್ದ ತುಳಸಿ ಪ್ರಜಾಪತಿ ಅವರು ಮರುವರ್ಷ ಹತ್ಯೆ ಮಾಡಲಾಗಿತ್ತು.
ಸೋಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಆರೋಪಿಯಾದ ಮೇಲೆ ಗುಜರಾತಿನ ಗೃಹ ಸಚಿವ ಸ್ಥಾನಕ್ಕೆ ಅಮಿತ್ ಶಾ ರಾಜೀನಾಮೆ ನೀಡಿ ಸಿಬಿಐ ಮುಂದೆ ಶರಣಾಗತರಾಗಿದ್ದರು. ಅದರೆ, ಒಂದೊಂದಾಗಿ ಪ್ರಕರಣಗಳಿಂದ ಆರೋಪ ಮುಕ್ತರಾಗಿದ್ದರು.
ಈ ಎರಡೂ ಪ್ರಕರಣಗಳಲ್ಲಿ ಕೊಲೆ ಮತ್ತು ಪಿತೂರಿ ನಡೆಸಿದ ಆರೋಪವನ್ನು ಅಲ್ಲಗೆಳೆದು ಅಮಿತ್ ಪರ ವಾದಿಸಿದ್ದ ಉದಯ್ ಯು ಲಲಿತ್ ಅವರನ್ನು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಅಮಿತ್ ಯತ್ನಿಸಿದ ಆರೋಪವೂ ಕೇಳಿ ಬಂದಿತ್ತು. [ವಿವರ ಇಲ್ಲಿ ಓದಿ]
CBI has been used, Amit Shah has been saved with pressure from high up: R Sheikh (Brother of Sohrabuddin Sheikh) pic.twitter.com/fBVOnYljLq
— ANI (@ANI_news) December 30, 2014 ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೊಹ್ರಾಬುದ್ದೀನ್ ಅವರ ಸೋದರ, ಕೇಂದ್ರ ಸರ್ಕಾರದ ಕೈವಾಡ ಇದರಲ್ಲಿ ಸ್ಪಷ್ಟವಾಗಿದೆ. ನಾವು ಮೇಲ್ಮನವಿ ಸಲ್ಲಿಸಿ ಕಾನೂನಿನ ಮೂಲಕ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications