ಬಿಜೆಪಿಯ "ನವ-ಹಿಂದುತ್ವವಾದಿಗಳಿಂದ" ಪೂರ್ವ ವಿಭಜನೆ ವಾತಾವರಣ ಸೃಷ್ಟಿ: ಶಿವಸೇನೆ ವಾಗ್ದಾಳಿ
ಮುಂಬೈ, ಏಪ್ರಿಲ್ 12: ದೇಶದಲ್ಲಿ ಪಸ್ತುತ ನಡೆಯುತ್ತಿರುವ ಕೋಮು ಸಂಘರ್ಷಗಳ ವಿಚಾರದಲ್ಲಿ ಬಿಜೆಪಿಯ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿಯ ಹಿಂದುತ್ವವು ಸ್ವಾರ್ಥದ್ದು ಮತ್ತು ಪೊಳ್ಳು ಎಂದು ಟೀಕೆ ಮಾಡಿರುವ ಬಿಜೆಪಿಯ ಮಾಜಿ ಮಿತ್ರ ಪಕ್ಷ ಶಿವಸೇನೆ, ಬಿಜೆಪಿಯ "ನವ-ಹಿಂದುತ್ವವಾದಿಗಳು" ದೇಶದಲ್ಲಿ ವಿಭಜನೆಯ ಪೂರ್ವ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದೆ.
ಶಿವಸೇನೆಯ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖ ಮಾಡಲಾಗಿದೆ. ಬಿಜೆಪಿಗೂ ಹಿಂದುತ್ವಕ್ಕೂ ಯಾವುದೇ ಸಂಬಂಧವಿಲ್ಲ. ಬಿಜೆಪಿಗೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಬಿರುಕು ಮೂಡಿಸುವುದನ್ನು ಬಿಟ್ಟು ಬೇರೆ ಯಾವುದೇ ಅಜೆಂಡಾ ಇಲ್ಲ ಎಂದು ಆರೋಪ ಮಾಡಿದೆ.
ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಮರಾಠಿ ದೈನಿಕವು 'ಹನುಮಾನ್ ಚಾಲೀಸಾ' (ಹಿಂದೂ ಭಕ್ತಿ ಗೀತೆ) ನುಡಿಸುವ ಕಾರಣದಿಂದಾಗಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ಹಿಂದೆ ಸರಿಯಲು ಹೊರಡುವುದಾದರೆ ಪರವಾಗಿಲ್ಲ ಎಂದು ಹೇಳಿದೆ.

ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾಕ್ಕೆ ಶಿವಸೇನೆ ಟೀಕೆ
ಮಸೀದಿಗಳ ಹೊರಗೆ 'ಹನುಮಾನ್ ಚಾಲೀಸಾ' ನುಡಿಸುವ ಮೂಲಕ ಕಾಶ್ಮೀರಿ ಪಂಡಿತರ ಸಮಸ್ಯೆಗಳು, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಬಹುದೇ ಎಂದು ಪಕ್ಷವು ಪ್ರಶ್ನಿಸಿದೆ. "ಬಿಜೆಪಿಯ ಹಿಂದುತ್ವ ಸ್ವಾರ್ಥ ಉಳ್ಳದ್ದು ಮತ್ತು ಪೊಳ್ಳು ಎಂಬುದು ಸ್ಪಷ್ಟವಾಗಿದೆ. ಚುನಾವಣೆಯ ಮತ ಬ್ಯಾಂಕ್ಗಾಗಿ ಈ ಬಿಜೆಪಿಯ ಜನರು ಗಲಭೆಗಳನ್ನು ರೂಪಿಸುವ ಮತ್ತು ಬಿರುಕು ಸೃಷ್ಟಿಸುವಲ್ಲಿ ತೊಡಗಿದ್ದಾರೆ ಎಂಬ ಅನುಮಾನ ನಿಜವಾಗಿಯೂ ಬಲವಾಗುತ್ತಿದೆ," ಎಂದು ಶಿವಸೇನೆ ಹೇಳಿದೆ.
"ಬಿಜೆಪಿಯ ನವ-ಹಿಂದುತ್ವವಾದಿಗಳು ವಿಭಜನೆಯಂತಹ ಪೂರ್ವಭಾವಿ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ," ಎಂದು ಪ್ರತಿಪಾದಿಸಿದ ಶಿವಸೇನೆ, ಹಿಜಾಬ್ ವಿವಾದ ಮತ್ತು ಮುಸ್ಲಿಮರು ದೇವಾಲಯಗಳ ಹೊರಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂಬಂತಹ ಕೆಲವು ಬಲಪಂಥೀಯ ಗುಂಪುಗಳ ಬೇಡಿಕೆಯನ್ನು ಉಲ್ಲೇಖ ಮಾಡಿದೆ.
ಗಮನಾರ್ಹವಾಗಿ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಇತ್ತೀಚೆಗೆ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಒತ್ತಾಯ ಮಾಡಿದ್ದಾರೆ. ಇದನ್ನು ನಿಲ್ಲಿಸದಿದ್ದರೆ, "ಮಸೀದಿಗಳ ಹೊರಗೆ ಸ್ಪೀಕರ್ಗಳಲ್ಲಿ ಹೆಚ್ಚಿನ ಧ್ವನಿಯಲ್ಲಿ 'ಹನುಮಾನ್ ಚಾಲೀಸಾ' ನುಡಿಸಲಾಗುವುದು," ಎಂದು ಹೇಳಿದ್ದಾರೆ.

ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನ
ಭಾನುವಾರ ರಾಮನವಮಿಯಲ್ಲಿ ಮಾಂಸಾಹಾರ ಬಡಿಸುವ ವಿಚಾರದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಘರ್ಷಣೆಯನ್ನು ಉಲ್ಲೇಖಿಸಿ ಶಿವಸೇನೆಯ ಸಂಪಾದಕೀಯವು ಹಣದುಬ್ಬರ ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದೆ.
"ಧರ್ಮವು ಒಂದು ಅಫೀಮು ಮತ್ತು ಅದು ಭಾರತದಲ್ಲಿ ಪ್ರತಿದಿನವೂ ಕಂಡುಬರುವುದಿಲ್ಲ. ಜೆಎನ್ಯುನಲ್ಲಿ ಮಾಂಸಾಹಾರದ ಕಾರಣದಿಂದ ಹಿಂಸಾಚಾರ ನಡೆದಿದೆ. ಆದರೆ ಬಿಜೆಪಿಯು ಭಗವಾನ್ ರಾಮನ ಹೆಸರನ್ನು ಕೆಡಿಸುತ್ತಿದೆ," ಎಂದು ಶಿವಸೇನೆ ಪ್ರತಿಪಾದಿಸಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಜಯ್ ರಾವತ್
ಈ ಹಿಂದೆ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ಪ್ರಚಾರ ಮಾಡುತ್ತಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಭಾನುವಾರ ಆರೋಪ ಮಾಡಿದ್ದಾರೆ. ಚಿತ್ರದಲ್ಲಿ ಹಲವಾರು "ಕಠಿಣ ಸತ್ಯಗಳನ್ನು" ಹತ್ತಿಕ್ಕುವ ಪ್ರಯತ್ನವನ್ನು ಮಾಡಲಾಗಿದೆ ಎಂದು ಕೂಡಾ ಆರೋಪಿಸಿದ್ದಾರೆ.
ಶಿವಸೇನೆಯ ಮುಖವಾಣಿ 'ಸಾಮ್ನಾ'ದಲ್ಲಿ ತಮ್ಮ ಸಾಪ್ತಾಹಿಕ ಅಂಕಣ 'ರೋಖ್ಥೋಕ್'ನಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್, ಕಾಶ್ಮೀರಕ್ಕೆ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ಹಿಂದಿರುಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಬಿಜೆಪಿಯ ಭರವಸೆಯಾಗಿದೆ. ಆದರೆ 370 ನೇ ವಿಧಿಯನ್ನು ರದ್ದುಗೊಳಿಸಿದರೂ ಅದೇ ಸಂಭವಿಸಿಲ್ಲ. ಅದು ಯಾರ ವೈಫಲ್ಯ ಎಂದು ತಿಳಿಯಬೇಕು," ಎಂದು ಉಲ್ಲೇಖ ಮಾಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications