ಲೋಕ ಸಮರ: ಬಿಜೆಪಿ-ಶಿವಸೇನಾ ಮೈತ್ರಿ, ಅಮಿತ್ ಶಾ ಚಾಣಾಕ್ಷ ನಡೆ
ಮುಂಬೈ, ಫೆಬ್ರವರಿ 18: ಮಹಾರಾಷ್ಟ್ರದಲ್ಲಿ ಎನ್ಡಿಎ ಮಿತ್ರಪಕ್ಷಗಳಲ್ಲಿ ಭಾರಿ ಬಿರುಕು, ಬಿಜೆಪಿ ಶಿವಸೇನಾ ನಡುವೆ ಮೈತ್ರಿ ಇನ್ನಿಲ್ಲ ಎಂಬ ಸುದ್ದಿಗಳು ಹಲವು ಬಾರಿ ಕೇಳಿ ಬಂದಿತ್ತು. ಶಿವಸೇನಾ ಕೂಡಾ ಬಿಜೆಪಿ ವಿರೋಧಿ ಹೇಳಿಕೆಗಳ ಮೂಲಕ ಅಚ್ಚರಿ ಮೂಡಿಸಿತ್ತು.
ಆದರೆ, ಲೋಕ ಸಮರ ಹತ್ತಿರವಾಗುತ್ತಿದ್ದಂತೆ ಮತ್ತೊಮ್ಮೆ ಬಿಜೆಪಿ ಜತೆ ಮರಾಠಿ ನಾಯಕರು ಕೈ ಜೋಡಿಸಿದ್ದಾರೆ. ಇದೆಲ್ಲವೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಚಾಣಕ್ಷ ನಡೆಯ ಫಲವಾಗಿದೆ.
ಅಮಿತ್ ಶಾ ಹಾಗೂ ಉದ್ಧವ್ ಠಾಕ್ರೆ ಅವರು ಫೋನ್ ಮೂಲಕ ನಿರಂತರವಾಗಿ ಸಂಭಾಷಣೆಯಲ್ಲಿ ತೊಡಗಿದ್ದಾರೆ. ಸಣ್ಣ ಪುಟ್ಟ ಬೇಡಿಕೆಗಳು, ಮುನಿಸು, ಮನಸ್ತಾಪವನ್ನು ಬದಿಗೊತ್ತಿ ಸಮರ್ಥ ದೇಶ ನಿರ್ಮಿಸುವತ್ತ ಹೆಜ್ಜೆ ಹಿಡಬೇಕಿದೆ. ಇದಕ್ಕೆ ನಿಮ್ಮ ಸಹಕಾರ ಬೇಕಿದೆ ಎಂದು ಉದ್ಧವ್ ಅವರ ಮನ ಓಲೈಕೆ ಮಾಡುವಲ್ಲಿ ಅಮಿತ್ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿಯಿದೆ.

ಜೈಪುರದಲ್ಲಿ ಪಕ್ಷದ ಸಭೆ ಮುಗಿಸಿಕೊಂಡು ಅಮಿತ್ ಶಾ ಅವರು ಮುಂಬೈಗೆ ತೆರಳಲಿದ್ದು, ಮಾತುಕತೆಗೆ ಅಂತಿಮ ರೂಪ ನೀಡಿ, ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಾಗೂ ಶಿವಸೇನಾ ಮೈತ್ರಿ ಬಗ್ಗೆ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಸೀಟು ಹಂಚಿಕೆ ಹೇಗೆ?: ಸದ್ಯದ ಮಾಹಿತಿಯಂತೆ 50:50 ರ ಅನುಪಾತದಂತೆ ಸೀಟು ಹಂಚಿಕೆಗೆ ಉಭಯ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನ, ಬದಲಿ ಸಿಎಂ ವ್ಯವಸ್ಥೆ ಹೀಗೆ ವಿವಿಧ ರೀತಿ ಬೇಡಿಕೆಗಳು ಬಿಜೆಪಿ ಮುಂದಿವೆ. ಶಿವಸೇನಾಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ.
48 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಹಿಡಿತದಲ್ಲಿರುವ ಪಲ್ಘಾರ್(ಮೀಸಲು) ಕ್ಷೇತ್ರ ಬಿಟ್ಟುಕೊಡುವಂತೆ ಶಿವಸೇನಾ ಬೇಡಿಕೆ ಇಟ್ಟಿದೆ. ಕಳೆದ ಬಾರಿಗೆ ಶಿವಸೇನಾಗೆ 22 ಕ್ಷೇತ್ರಗಳು ದಕ್ಕಿತ್ತು. ಈ ಬಾರಿ ಇನ್ನು ಹೆಚ್ಚಿನ ಕ್ಷೇತ್ರಗಳು ಲಭಿಸುವ ಸಾಧ್ಯತೆಯಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications