ಬಿಜೆಪಿ -ಶಿವಸೇನಾ ಜಂಟಿ ಪ್ರಚಾರ ಕಾರ್ಯಕ್ಕೆ ಮೋದಿ ಸ್ಟಾರ್ ಪ್ರಚಾರಕ
ಮುಂಬೈ, ಮಾರ್ಚ್ 13: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿಯನ್ನು ಪುನಃ ಸ್ಥಾಪಿಸಿಕೊಂಡಿರುವ ಬಿಜೆಪಿ ಹಾಗೂ ಶಿವಸೇನಾ ಈಗ ಜಂಟಿಯಾಗಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಸಿದ್ಧತೆ ನಡೆಸಿವೆ. ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಸ್ಟಾರ್ ಪ್ರಚಾರಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಸದ್ಯಕ್ಕೆ ಲಭ್ಯ ಮಾಹಿತಿಯಂತೆ, ಪ್ರಧಾನಿ ನರೇಂದ್ರ ಮೋದಿ ಅಲ್ಲದೆ,ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಉತ್ತರಪ್ರದೇಶ ಸಿಎಂ ಯೋಗಿ ಅದಿತ್ಯನಾಥ್ ಅವರು ಸ್ಟಾರ್ ಪ್ರಚಾರಕರಾಗಿ ಭಾಗವಹಿಸಲಿದ್ದು, ಮಾರ್ಚ್ 24ರಿಂದ ಜಂಟಿ ಸಮಾವೇಶಗಳು ಆರಂಭವಾಗಲಿವೆ.
ಬಿಜೆಪಿ ಹಾಗೂ ಶಿವಸೇನಾ ನಡುವಿನ ಸೀಟು ಹಂಚಿಕೆ ಪೂರ್ಣಗೊಂಡರೂ ಜಲ್ನಾ ಹಾಗೂ ಈಶಾನ್ಯ ಮುಂಬೈ ಲೋಕಸಭೆ ಚುನಾವಣೆ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆ ಮುಂದುವರೆದಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 24 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಇನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಸ್ಥಾನದಲ್ಲಿ ಸ್ಪರ್ಧಿಸಿತ್ತು. 4 ಸ್ಥಾನಗಳನ್ನು ಇತರ ಮಿತ್ರ ಪಕ್ಷಗಳಿಗೆ ಬಿಟ್ಟುಕೊಡಲಾಗಿತ್ತು. ಆದರೆ 2014ರಲ್ಲೇ ನಡೆದ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. 2014ರಲ್ಲಿ ಬಿಜೆಪಿ 23 ಹಾಗೂ 18 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದವು.

ಒಟ್ಟು 288 ಸ್ಥಾನಗಳ ಪೈಕಿ 260 ಸ್ಥಾನಗಳಲ್ಲಿ ಬಿಜೆಪಿ ಹಾಗೂ ಶಿವಸೇನೆ 282ರಲ್ಲಿ ಸ್ಪರ್ಧಿಸಿದ್ದವು. ಆ ಪೈಕಿ ಬಿಜೆಪಿ 122 ಮತ್ತು ಶಿವಸೇನೆ 63ರಲ್ಲಿ ಜಯ ಸಾಧಿಸಿದ್ದರೆ, ಆ ನಂತರ ಒಟ್ಟಾಗಿ ಸರಕಾರ ರಚಿಸಿದ್ದವು. ಆದರೆ, ಅದು ಸಲೀಸಾಗಿ ಸಾಗುತ್ತಿಲ್ಲ. ಈ ಬಾರಿ ಒಟ್ಟು 48 ಲೋಕಸಭಾ ಕ್ಷೇತ್ರಗಳಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ 25 ಸ್ಥಾನಗಳಿಗೆ ಹಾಗೂ ಶಿವಸೇನೆ 23 ಸ್ಥಾನಗಳಿಗೆ ಸ್ಪರ್ಧೆ ಮಾಡಲಿವೆ. ಮಹಾರಾಷ್ಟ್ರದಲ್ಲಿ ಒಟ್ಟು ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 11ರಿಂದ ಆರಂಭಗೊಳ್ಳಲಿದೆ. ಮುಂಬೈನಲ್ಲಿ ಏಪ್ರಿಲ್ 29ಕ್ಕೆ ಮತದಾನ ನಿಗದಿಯಾಗಿದೆ. ಮೇ 23ಕ್ಕೆ ಫಲಿತಾಂಶ ಬರಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications