ಮಹಾರಾಷ್ಟ್ರದಲ್ಲಿ ಗೆಲುವಿನತ್ತ ಬಿಜೆಪಿ, ಶಿವಸೇನೆ: ಬಿಜೆಪಿಗೆ ವೈಯಕ್ತಿಕ ಹಿನ್ನಡೆ
ಮುಂಬೈ, ಅಕ್ಟೋಬರ್ 24: ಹರ್ಯಾಣಾ ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ದೊಡ್ಡ ರಾಜ್ಯ ಮಹಾರಾಷ್ಟ್ರದಲ್ಲಿ ಮಾತ್ರ ಸ್ಪಷ್ಟ ಗೆಲುವಿನತ್ತ ದಾಪುಗಾಲು ಹಾಕಿದೆ.
ಮತೆಣಿಕೆ ಪ್ರಾರಂಭವಾಗಿ 3 ಗಂಟೆ ಬಳಿಕ ಬಿಜೆಪಿ, ಶಿವಸೇನೆ ಮೈತ್ರಿಯು 182 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದೆ. ಕಾಂಗ್ರೆಸ್, ಎನ್ಸಿಪಿ ಮೈತ್ರಿಯು 87 ಸ್ಥಾನಗಳಲ್ಲಿಯಷ್ಟೆ ಮುನ್ನಡೆ ಸಾಧಿಸಿ ಹಿಂದುಳಿದಿದೆ. ಇನ್ನುಳಿದ ಸ್ಥಾನಗಳಲ್ಲಿ ಇತರೆ ಪಕ್ಷ ಹಾಗೂ ಪಕ್ಷೇತರರು ಮುನ್ನಡೆಯಲ್ಲಿದ್ದಾರೆ.
ಬಿಜೆಪಿ ಮತ್ತು ಶಿವಸೇನೆಯ ಮೈತ್ರಿ ಸ್ಪಷ್ಟ ಬಹುಮತಗಳಿಸುವತ್ತ ದಾಪುಗಾಲು ಹಾಕಿದೆಯಾದರೂ ಏಕೈಕ ಪಕ್ಷವಾಗಿ ಬಿಜೆಪಿ ಹಿಂದೆ ಉಳಿದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 122 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 100 ಕ್ಕಿಂತ ಹೆಚ್ಚು ಗೆಲ್ಲುವುದು ಕಷ್ಟವಾಗಲಿದೆ.

ಬಿಜೆಪಿ ಮೈತ್ರಿ ಪಕ್ಷ ಶಿವಸೇನೆ ಉತ್ತಮವಾಗಿ ಮುನ್ನುಗ್ಗುತ್ತಿದ್ದ 11 ಗಂಟೆ ವೇಳೆಗೆ ಶಿವಸೇನೆಯು ಏಕೈಕ ಪಕ್ಷವಾಗಿ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ವಿಧಾನಸಭೆ ಚುನಾವಣೆಗಿಂತಲೂ ಇದು ಉತ್ತಮ ಪ್ರದರ್ಶನವಾಗಿದೆ.
ಶಿವಸೇನೆ ಗೆಲ್ಲುವ ಸ್ಥಾನಗಳು ಬಿಜೆಪಿ ಸ್ಥಾನಗಳಿಗೂ ಹೆಚ್ಚು ಅಂತರ ಇಲ್ಲದಿದ್ದ ಪಕ್ಷದಲ್ಲಿ ಬಿಜೆಪಿಗೆ ಸರ್ಕಾರ ನಡೆಸುವುದು ಕಷ್ಟಕರವಾಗಲಿದೆ. ಸರ್ಕಾರದ ಮೂಗುದಾರ ಶಿವಸೇನೆ ಪಾಲಾಗಲಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಮೈತ್ರಿ ನಿರೀಕ್ಷೆಯಂತೆಯೇ ಹಿಂದೆ ಉಳಿದಿದೆ. ಎರಡೂ ಪಕ್ಷ ಸೇರಿ 100 ಕ್ಕಿಂತ ಸ್ವಲ್ಪ ಹೆಚ್ಚು ಸ್ಥಾನಗಳಲ್ಲಿ ಅಷ್ಟೆ ಮುನ್ನಡೆ ಸಾಧಿಸಿದೆ. ಏಕೈಕ ಪಕ್ಷವಾಗಿ ಕಾಂಗ್ರೆಸ್ಗಿಂತಲೂ ಎನ್ಸಿಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಲಕ್ಷಣಗಳು ಗೋಚರಿಸುತ್ತಿವೆ.
ಏಕೈಕ ಪಕ್ಷವಾಗಿ ಕಾಂಗ್ರೆಸ್ 40 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದ್ದರೆ, ಎನ್ಸಿಪಿಯು 53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು 11 ಗಂಟೆಯ ಮತೆಣಿಕೆ ಟ್ರೆಂಡ್ ಹೇಳುತ್ತಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications