ಮಹಾರಾಷ್ಟ್ರದಲ್ಲಿ ಗೆಲುವಿನತ್ತ ಬಿಜೆಪಿ, ಶಿವಸೇನೆ: ಬಿಜೆಪಿಗೆ ವೈಯಕ್ತಿಕ ಹಿನ್ನಡೆ
ಮುಂಬೈ, ಅಕ್ಟೋಬರ್ 24: ಹರ್ಯಾಣಾ ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ದೊಡ್ಡ ರಾಜ್ಯ ಮಹಾರಾಷ್ಟ್ರದಲ್ಲಿ ಮಾತ್ರ ಸ್ಪಷ್ಟ ಗೆಲುವಿನತ್ತ ದಾಪುಗಾಲು ಹಾಕಿದೆ.
ಮತೆಣಿಕೆ ಪ್ರಾರಂಭವಾಗಿ 3 ಗಂಟೆ ಬಳಿಕ ಬಿಜೆಪಿ, ಶಿವಸೇನೆ ಮೈತ್ರಿಯು 182 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದೆ. ಕಾಂಗ್ರೆಸ್, ಎನ್ಸಿಪಿ ಮೈತ್ರಿಯು 87 ಸ್ಥಾನಗಳಲ್ಲಿಯಷ್ಟೆ ಮುನ್ನಡೆ ಸಾಧಿಸಿ ಹಿಂದುಳಿದಿದೆ. ಇನ್ನುಳಿದ ಸ್ಥಾನಗಳಲ್ಲಿ ಇತರೆ ಪಕ್ಷ ಹಾಗೂ ಪಕ್ಷೇತರರು ಮುನ್ನಡೆಯಲ್ಲಿದ್ದಾರೆ.
ಬಿಜೆಪಿ ಮತ್ತು ಶಿವಸೇನೆಯ ಮೈತ್ರಿ ಸ್ಪಷ್ಟ ಬಹುಮತಗಳಿಸುವತ್ತ ದಾಪುಗಾಲು ಹಾಕಿದೆಯಾದರೂ ಏಕೈಕ ಪಕ್ಷವಾಗಿ ಬಿಜೆಪಿ ಹಿಂದೆ ಉಳಿದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 122 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 100 ಕ್ಕಿಂತ ಹೆಚ್ಚು ಗೆಲ್ಲುವುದು ಕಷ್ಟವಾಗಲಿದೆ.

ಬಿಜೆಪಿ ಮೈತ್ರಿ ಪಕ್ಷ ಶಿವಸೇನೆ ಉತ್ತಮವಾಗಿ ಮುನ್ನುಗ್ಗುತ್ತಿದ್ದ 11 ಗಂಟೆ ವೇಳೆಗೆ ಶಿವಸೇನೆಯು ಏಕೈಕ ಪಕ್ಷವಾಗಿ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ವಿಧಾನಸಭೆ ಚುನಾವಣೆಗಿಂತಲೂ ಇದು ಉತ್ತಮ ಪ್ರದರ್ಶನವಾಗಿದೆ.
ಶಿವಸೇನೆ ಗೆಲ್ಲುವ ಸ್ಥಾನಗಳು ಬಿಜೆಪಿ ಸ್ಥಾನಗಳಿಗೂ ಹೆಚ್ಚು ಅಂತರ ಇಲ್ಲದಿದ್ದ ಪಕ್ಷದಲ್ಲಿ ಬಿಜೆಪಿಗೆ ಸರ್ಕಾರ ನಡೆಸುವುದು ಕಷ್ಟಕರವಾಗಲಿದೆ. ಸರ್ಕಾರದ ಮೂಗುದಾರ ಶಿವಸೇನೆ ಪಾಲಾಗಲಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಮೈತ್ರಿ ನಿರೀಕ್ಷೆಯಂತೆಯೇ ಹಿಂದೆ ಉಳಿದಿದೆ. ಎರಡೂ ಪಕ್ಷ ಸೇರಿ 100 ಕ್ಕಿಂತ ಸ್ವಲ್ಪ ಹೆಚ್ಚು ಸ್ಥಾನಗಳಲ್ಲಿ ಅಷ್ಟೆ ಮುನ್ನಡೆ ಸಾಧಿಸಿದೆ. ಏಕೈಕ ಪಕ್ಷವಾಗಿ ಕಾಂಗ್ರೆಸ್ಗಿಂತಲೂ ಎನ್ಸಿಪಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಲಕ್ಷಣಗಳು ಗೋಚರಿಸುತ್ತಿವೆ.
ಏಕೈಕ ಪಕ್ಷವಾಗಿ ಕಾಂಗ್ರೆಸ್ 40 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದ್ದರೆ, ಎನ್ಸಿಪಿಯು 53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು 11 ಗಂಟೆಯ ಮತೆಣಿಕೆ ಟ್ರೆಂಡ್ ಹೇಳುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications