ವಿಜಯ ಮಲ್ಯ ಬಿಜೆಪಿಯ ಬ್ರಾಂಡ್ ಅಂಬಾಸೆಡರ್ ಆಗಲಿ: ಶಿವಸೇನಾ
ಮುಂಬೈ, ಜುಲೈ 16: ಬಿಜೆಪಿಯು ಮದ್ಯದ ದೊರೆ ವಿಜಯ ಮಲ್ಯ ಅವರನ್ನು ತನ್ನ ಬ್ರಾಂಡ್ ಅಂಬಾಸೆಡರ್ ಅನ್ನಾಗಿ ಮಾಡಿಕೊಕೊಳ್ಳಬೇಕು ಎಂದು ಶಿವಸಸೇನೆ ಹೇಳಿದೆ.
ಶಿವಸೇನಾ ಮುಖವಾಣಿ 'ಸಾಮ್ನಾ'ದಲ್ಲಿ ಕುರಿತು ಬರೆಯಲಾಗಿದ್ದು, 'ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣಗಳಲ್ಲಿ ಯಾವಾಗಲೂ ಭ್ರಷ್ಟಾಚಾರ ನಿರ್ಮೂಲನೆಯ ಬಗ್ಗೆ ಮಾತನಾಡುತ್ತಾರೆ. ಆದರೆ ಅವರದೇ ಪಕ್ಷದ ಕೆಲವು ನಾಯಕರು, ವಂಚನೆ ಪ್ರಕರಣದ ಆರೋಪಿಗಳನ್ನು ತಮ್ಮ ಆದರ್ಶ' ಎನ್ನುತ್ತಾರೆ ಎಂದು ಶಿವಸೇನೆ ಹೇಳಿದೆ.
ಇತ್ತೀಚೆಗಷ್ಟೇ ಬಿಜೆಪಿ ನಾಯಕ ಜುವಾಲ್ ಓರಮ್ ಅವರು, 'ವಿಜಯ ಮಲ್ಯ ಅವರನ್ನು ಸ್ಮಾರ್ಟ್(ಚಾಣಾಕ್ಷ) ಎಂದು ಕರೆದಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ 'ಸಾಮ್ನಾ', 'ದೇಶದ್ರೋಹಿಗಳನ್ನು ಸ್ಮಾರ್ಟ್ ಎಂದು ಕರೆಯುವ ನೀವು ಅವರನ್ನೇ ನಿಮ್ಮ ಮೇಕ್ ಇನ್ ಇಂಡಿಯಾ ಮತ್ತು ಸ್ಟಾರ್ಟ್ ಅಪ್ ಇಂಡಿಯಾದ ಬ್ರಾಂಡ್ ಅಂಬಾಸೆಡರ್ ಅನ್ನಾಗಿ ಮಾಡಿಕೊಳ್ಳಿ' ಎಂದು ಬರೆದಿದೆ.

'ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಷದ ಜನರಿಗೆ ನಾಲಿಗೆಯ ಮೇಲೆ ಹಿಡಿತ ಇಟ್ಟುಕೊಳ್ಳಿ ಎಂದಿದ್ದಾರೆ. ಆದರೆ ಕೆಲವರು ಸಾರ್ವಜನಿಕ ಸಭೆಗಳಲ್ಲೂ ಬಾಯಿಗೆ ಬಂದಂತೆ ಮಾತನಾಡುತ್ತಾರೆ' ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications