ಸಾಮ್ನಾದಲ್ಲಿ ಬಿಜೆಪಿಯನ್ನು ಮೊಘಲರಿಗೆ ಹೋಲಿಸಿದ ಶಿವಸೇನಾ
ಮುಂಬೈ, ನವೆಂಬರ್ 02: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಬಿಜೆಪಿ ಹಾಗೂ ಶಿವಸೇನಾ ನಡುವೆ ಸಿಎಂ ಪಟ್ಟಕ್ಕಾಗಿ ಕಿತ್ತಾಟ ಜೋರಾಗುತ್ತಿದೆ. ಉಭಯ ಪಕ್ಷಗಳ ನಾಯಕರ ವಾಕ್ಸಮರ ಹೆಚ್ಚಾಗುತ್ತಿದ್ದು, ಬಿಜೆಪಿ ಮುಖಂಡರ ಹೇಳಿಕೆಗೆ ಶಿವಸೇನಾ ತನ್ನ ಮುಖವಾಣಿ ಸಾಮ್ನಾ ಮೂಲಕ ತಕ್ಕ ಪ್ರತಿಕ್ರಿಯೆ ನೀಡಿದೆ.
ಬಿಜೆಪಿ ಸರ್ಕಾರದ ವಿತ್ತ ಸಚಿವ ಸುಧೀರ್ ಮುಂಗಾಂತಿವರ್ ಅವರು ಶುಕ್ರವಾರದಂದು 'ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ' ಎಂದು ಹಾಕಿದ ಬೆದರಿಕೆ ಮಾತನ್ನು ಶಿವಸೇನಾ ತೀವ್ರವಾಗಿ ಖಂಡಿಸಿದೆ. "ಇದು ರಾಜ್ಯ ಮತ್ತು ಜನರಿಗೆ ಮಾಡಿದ ಅವಮಾನವಾಗಿದ್ದು, ರಾಷ್ಟ್ರಪತಿಯವರೇನು ನಿಮ್ಮ ಜೇಬಿನಲ್ಲಿದ್ದಾರೆಯೇ?" ಎಂದು ಸಾಮ್ನಾದಲ್ಲಿ ಪ್ರಶ್ನಿಸಲಾಗಿದೆ.
"ನವೆಂಬರ್ 8ರಂದು ಈಗಿನ ಸರ್ಕಾರದ ಅವಧಿ ಮುಗಿಯುತ್ತದೆ. ನವೆಂಬರ್ 7ರೊಳಗೆ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಆಗದಿದ್ದರೆ, ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ" ಸುಧೀರ್ ಹೇಳಿದ್ದರು.
'ಸಾಮ್ನಾ' ಪತ್ರಿಕೆಯಲ್ಲಿ ಸುಧೀರ್ ಅವರ ಹೇಳಿಕೆ ಖಂಡಿಸಲಾಗಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗಿದ್ದು, ನಿಮ್ಮ ನಿಯಂತ್ರಣದಲ್ಲಿರುವ ರಾಷ್ಟ್ರಪತಿ ಅಥವಾ ಬಿಜೆಪಿ ಕಚೇರಿಯಲ್ಲಿರುವ ರಾಷ್ಟ್ರಪತಿಗಳ ಸ್ಟ್ಯಾಂಪ್ ಎರಡರಲ್ಲಿ ಯಾವುದನ್ನು ಬಳಸುತ್ತೀರಾ? ಎಂದು ಪ್ರಶ್ನೆ ಮಾಡಲಾಗಿದೆ.

ರಾಷ್ಟ್ರಪತಿ ಆಳ್ವಿಕೆ ಬೆದರಿಕೆ ಹಾಕುವುದು
"ರಾಷ್ಟ್ರಪತಿ ಆಳ್ವಿಕೆ ಬೆದರಿಕೆ ಹಾಕುವುದು ಮೊಘಲ್ ರೀತಿಯ ದಬ್ಬಾಳಿಕೆಯಾಗಿದೆ, ಕಾನೂನು ಹಾಗೂ ಸಂವಿಧಾನ ಯಾರ ಅಡಿಯಾಳಾಗಿಲ್ಲ, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಷಯದಲ್ಲಿ ಗೊಂದಲ ಮೂಡಿಸುತ್ತಿರುವವರು ಯಾರು ಎಂಬುದು ಜನರಿಗೆ ತಿಳಿದಿದೆ. ಬಹುತೇಕ ಸಿಗದಿದ್ದರೂ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಮಾಡಬೇಕು ಎನ್ನುತ್ತಿದ್ದಾರೆ" ಟೀಕೆ ಮಾಡಿದ್ದಾರೆ.

2019ರ ಚುನಾವಣೆ ಫಲಿತಾಂಶ
2014ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ 2019ರಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದುಕೊಂಡಿದೆ. 1995 ರಿಂದ 1999ರ ಸೇನಾ- ಬಿಜೆಪಿ ಸರ್ಕಾರದ ಮೇಲೆ ಸೇನಾದ ಬಾಳಾ ಠಾಕ್ರೆ ಹೇಗೆ ಹಿಡಿತ ಹೊಂದಿದ್ದರೋ ಅದೇ ರೀತಿ ಈ ಬಾರಿಯೂ ಹಿಡಿತ ಸಿಕ್ಕಿದೆ ಎಂದು ಘೋಷಿಸಿಕೊಂಡಿದೆ. 2014ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ 122 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 105 ಸ್ಥಾನ ಗಳಿಸಿದೆ. 288 ವಿಧಾನಸಭಾ ಸ್ಥಾನಗಳುಳ್ಳ ಮಹಾರಾಷ್ಟ್ರದಲ್ಲಿ ಅಧಿಕಾರ ಸ್ಥಾಪಿಸಲು 146 ಸ್ಥಾನಗಳು ಅವಶ್ಯ. ಸೇನಾ ಕೂಡಾ 2014ರಲ್ಲಿ 63 ಸ್ಥಾನ ಗೆದ್ದಿತ್ತು. ಈ ಬಾರಿ 56 ಸ್ಥಾನ ಗೆದ್ದಿದೆ. ಎನ್ಸಿಪಿ 54 ಹಾಗೂ ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.

ಚುನಾವಣಾ ಪೂರ್ವ ಮೈತ್ರಿಯ ಒಪ್ಪಂದ
ಚುನಾವಣಾ ಪೂರ್ವ ಮೈತ್ರಿಯ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಶ್ವಾಸನೆ ನೀಡಿದಂತೆ 50:50 ಅನುಪಾತದಲ್ಲಿ ಅಧಿಕಾರ ಹಂಚಿಕೆಯಾಗಬೇಕು. ಅಧಿಕಾರ ಅವಧಿ ಸಮನಾಗಿ ಹಂಚಿಕೆಯಾಗಬೇಕು, ಉನ್ನತ ಸ್ಥಾನಗಳು ಸಿಗಬೇಕು, 2.5 ವರ್ಷ ಬಿಜೆಪಿಯಿಂದ ಸಿಎಂ ಹಾಗೂ 2.5 ವರ್ಷ ಶಿವಸೇನಾದಿಂದ ಸಿಎಂ ಎಂದು ಶಿವಸೇನಾ ತನ್ನ ಬೇಡಿಕೆ ಬಗ್ಗೆ ಲಿಖಿತ ಒಪ್ಪಂದವಾಗಬೇಕು ಎಂದು ಶಿವಸೇನಾ ಪಟ್ಟು ಹಿಡಿದಿದೆ. ಮುಖ್ಯಮಂತ್ರಿ ಸ್ಥಾನ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ಅನಗತ್ಯ, ಈ ಬಗ್ಗೆ ಯಾವುದೆ ಒಪ್ಪಂದವಾಗಿಲ್ಲ ಎಂದು ಬಿಜೆಪಿಯ ಸಿಎಂ ಅಭ್ಯರ್ಥಿ ದೇವೇಂದ್ರ ಫಡ್ನವೀಸ್ ಇಂದು ಸ್ಪಷ್ಟಪಡಿಸಿದ್ದಾರೆ.

ಸಂಜಯ್ ರಾವತ್ ಹೇಳಿಕೆ
"ಅಕಸ್ಮಾತ್ ಶಿವಸೇನೆ ಮನಸ್ಸು ಮಾಡಿದರೆ ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸುವುದು ಕಷ್ಟವಿಲ್ಲ. ಆದರೆ ಜನರು ಕೊಟ್ಟಿರುವ ಜನಾದೇಶಕ್ಕೆ ವಿರುದ್ಧವಾಗಿ ಹೋಗಲು ನಾಯು ಇಷ್ಟಪಡುವುಸಿಲ್ಲ. ಬಿಜೆಪಿಗೆ ನಾವೇನು ಗಡುವು ನೀಡಿಲ್ಲ. 50:50 ಸೂತ್ರಕ್ಕೆ ಅವರು ಸಿದ್ಧವಿದ್ದರೆ ಈಗಲೇ ಸರ್ಕಾರ ರಚನೆಗೆ ನಮ್ಮ ಅಭ್ಯಂತರವಿಲ್ಲ" ಎಂದು ಸಂಜಯ್ ರಾವತ್ ಹೇಳಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications