Get Updates
Get notified of breaking news, exclusive insights, and must-see stories!

ರಾಮ ಮಂದಿರ ನಿರ್ಮಿಸದಿದ್ದರೆ, ಬಿಜೆಪಿ ನಿರ್ನಾಮ : ಶಿವಸೇನೆ

ಮುಂಬೈ, ಅಕ್ಟೋಬರ್ 09: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸರಣಿ ವಾಗ್ದಾಳಿ ಆರಂಭಿಸಿರುವ ಶಿವಸೇನೆ, ಮಂಗಳವಾರದಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಖಡಕ್ ಎಚ್ಚರಿಕೆ ಸಂದೇಶವೊಂದನ್ನು ಬಿಜೆಪಿಗೆ ನೀಡಿದೆ.

ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಏನಾದರೂ ಮಾತಿಗೆ ತಪ್ಪಿದರೆ, ಪಕ್ಷ ನಿರ್ನಾಮವಾಗಲಿದೆ ಎಂದು ಬರೆಯಲಾಗಿದೆ.

'Ram Mandir Banao, nahi toh Ram naam satya hai' ಎಂಬ ಶೀರ್ಷಿಕೆಯೊಂದಿಗೆ ಸಾಮ್ನಾದಲ್ಲಿ ಕಟು ಶಬ್ದಗಳಿಂದ ಎಚ್ಚರಿಕೆ ನೀಡಲಾಗಿದೆ.

BJP will be dethroned if Ram Temple is not built, warns Shiv Sena

ಕೇಂದ್ರ ಹಾಗೂ ಉತ್ತರಪದೇಶದಲ್ಲಿ ಅಧಿಕಾರಕ್ಕೆ ಬರಲು ಹಿಂದುತ್ವ ಹಾಗೂ ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡುತ್ತಾ ಬಂದ ಬಿಜೆಪಿ ತನ್ನ ಮಾತಿಗೆ ತಪ್ಪಿದೆ. ರಾಮ ಮಂದಿರ ನಿರ್ಮಾಣ ಬರಿ ಚುನಾವಣೆ ಸಂದರ್ಭದ ಆಶ್ವಾಸನೆಯಾಗಿ ಉಳಿದಿದೆ,ರಾಮಮಂದಿರ ನಿರ್ಮಾಣ ಪರ ಹೋರಾಟ ಮಾಡುವವರಿಗೂ ಸರ್ಕಾರದಿಂದ ತೊಂದರೆಗಳಾಗುತ್ತಿವೆ ಎಂದು ಬರೆಯಲಾಗಿದೆ.

ಪಕ್ಷದ ನಾಯಕ ಸಂಜಯ್ ರಾವತ್ ಮಾತನಾಡಿ, ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಅಯೋಧ್ಯದ ವಿವಾದ ಸ್ಥಳಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ರಾಮ್ ಜನ್ಮಭೂಮಿ ಟ್ರಸ್ಟಿನ ಜನಮೇಜಯ ಶರಣ್ ಜಿ ಅವರು ಈ ಬಗ್ಗೆ ಆಹ್ವಾನ ನೀಡಲಿದ್ದಾರೆ ಎಂದರು.

ಮೊಘಲ್ ದೊರೆ ಬಾಬರ್ ಅವರು ಅಯೋಧ್ಯಾದಲ್ಲಿ 1528ರಲ್ಲಿ ಬಾಬ್ರಿ ಮಸೀದಿ ನಿರ್ಮಿಸಿದ್ದ . ಡಿಸೆಂಬರ್ 06,1992ರಂದು ಬಾಬ್ರಿ ಮಸೀದಿಯನ್ನು ಹಿಂದೂ ಕಾರ್ಯಕರ್ತರು ಕೆಡವಿದ ಆರೋಪವಿದೆ. ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+