ರಾಮ ಮಂದಿರ ನಿರ್ಮಿಸದಿದ್ದರೆ, ಬಿಜೆಪಿ ನಿರ್ನಾಮ : ಶಿವಸೇನೆ
ಮುಂಬೈ, ಅಕ್ಟೋಬರ್ 09: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸರಣಿ ವಾಗ್ದಾಳಿ ಆರಂಭಿಸಿರುವ ಶಿವಸೇನೆ, ಮಂಗಳವಾರದಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಖಡಕ್ ಎಚ್ಚರಿಕೆ ಸಂದೇಶವೊಂದನ್ನು ಬಿಜೆಪಿಗೆ ನೀಡಿದೆ.
ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಏನಾದರೂ ಮಾತಿಗೆ ತಪ್ಪಿದರೆ, ಪಕ್ಷ ನಿರ್ನಾಮವಾಗಲಿದೆ ಎಂದು ಬರೆಯಲಾಗಿದೆ.
'Ram Mandir Banao, nahi toh Ram naam satya hai' ಎಂಬ ಶೀರ್ಷಿಕೆಯೊಂದಿಗೆ ಸಾಮ್ನಾದಲ್ಲಿ ಕಟು ಶಬ್ದಗಳಿಂದ ಎಚ್ಚರಿಕೆ ನೀಡಲಾಗಿದೆ.

ಕೇಂದ್ರ ಹಾಗೂ ಉತ್ತರಪದೇಶದಲ್ಲಿ ಅಧಿಕಾರಕ್ಕೆ ಬರಲು ಹಿಂದುತ್ವ ಹಾಗೂ ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡುತ್ತಾ ಬಂದ ಬಿಜೆಪಿ ತನ್ನ ಮಾತಿಗೆ ತಪ್ಪಿದೆ. ರಾಮ ಮಂದಿರ ನಿರ್ಮಾಣ ಬರಿ ಚುನಾವಣೆ ಸಂದರ್ಭದ ಆಶ್ವಾಸನೆಯಾಗಿ ಉಳಿದಿದೆ,ರಾಮಮಂದಿರ ನಿರ್ಮಾಣ ಪರ ಹೋರಾಟ ಮಾಡುವವರಿಗೂ ಸರ್ಕಾರದಿಂದ ತೊಂದರೆಗಳಾಗುತ್ತಿವೆ ಎಂದು ಬರೆಯಲಾಗಿದೆ.
ಪಕ್ಷದ ನಾಯಕ ಸಂಜಯ್ ರಾವತ್ ಮಾತನಾಡಿ, ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಅಯೋಧ್ಯದ ವಿವಾದ ಸ್ಥಳಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ರಾಮ್ ಜನ್ಮಭೂಮಿ ಟ್ರಸ್ಟಿನ ಜನಮೇಜಯ ಶರಣ್ ಜಿ ಅವರು ಈ ಬಗ್ಗೆ ಆಹ್ವಾನ ನೀಡಲಿದ್ದಾರೆ ಎಂದರು.
ಮೊಘಲ್ ದೊರೆ ಬಾಬರ್ ಅವರು ಅಯೋಧ್ಯಾದಲ್ಲಿ 1528ರಲ್ಲಿ ಬಾಬ್ರಿ ಮಸೀದಿ ನಿರ್ಮಿಸಿದ್ದ . ಡಿಸೆಂಬರ್ 06,1992ರಂದು ಬಾಬ್ರಿ ಮಸೀದಿಯನ್ನು ಹಿಂದೂ ಕಾರ್ಯಕರ್ತರು ಕೆಡವಿದ ಆರೋಪವಿದೆ. ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications