ರಾಮ ಮಂದಿರ ನಿರ್ಮಿಸದಿದ್ದರೆ, ಬಿಜೆಪಿ ನಿರ್ನಾಮ : ಶಿವಸೇನೆ
ಮುಂಬೈ, ಅಕ್ಟೋಬರ್ 09: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸರಣಿ ವಾಗ್ದಾಳಿ ಆರಂಭಿಸಿರುವ ಶಿವಸೇನೆ, ಮಂಗಳವಾರದಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಖಡಕ್ ಎಚ್ಚರಿಕೆ ಸಂದೇಶವೊಂದನ್ನು ಬಿಜೆಪಿಗೆ ನೀಡಿದೆ.
ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಏನಾದರೂ ಮಾತಿಗೆ ತಪ್ಪಿದರೆ, ಪಕ್ಷ ನಿರ್ನಾಮವಾಗಲಿದೆ ಎಂದು ಬರೆಯಲಾಗಿದೆ.
'Ram Mandir Banao, nahi toh Ram naam satya hai' ಎಂಬ ಶೀರ್ಷಿಕೆಯೊಂದಿಗೆ ಸಾಮ್ನಾದಲ್ಲಿ ಕಟು ಶಬ್ದಗಳಿಂದ ಎಚ್ಚರಿಕೆ ನೀಡಲಾಗಿದೆ.

ಕೇಂದ್ರ ಹಾಗೂ ಉತ್ತರಪದೇಶದಲ್ಲಿ ಅಧಿಕಾರಕ್ಕೆ ಬರಲು ಹಿಂದುತ್ವ ಹಾಗೂ ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡುತ್ತಾ ಬಂದ ಬಿಜೆಪಿ ತನ್ನ ಮಾತಿಗೆ ತಪ್ಪಿದೆ. ರಾಮ ಮಂದಿರ ನಿರ್ಮಾಣ ಬರಿ ಚುನಾವಣೆ ಸಂದರ್ಭದ ಆಶ್ವಾಸನೆಯಾಗಿ ಉಳಿದಿದೆ,ರಾಮಮಂದಿರ ನಿರ್ಮಾಣ ಪರ ಹೋರಾಟ ಮಾಡುವವರಿಗೂ ಸರ್ಕಾರದಿಂದ ತೊಂದರೆಗಳಾಗುತ್ತಿವೆ ಎಂದು ಬರೆಯಲಾಗಿದೆ.
ಪಕ್ಷದ ನಾಯಕ ಸಂಜಯ್ ರಾವತ್ ಮಾತನಾಡಿ, ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಅಯೋಧ್ಯದ ವಿವಾದ ಸ್ಥಳಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ರಾಮ್ ಜನ್ಮಭೂಮಿ ಟ್ರಸ್ಟಿನ ಜನಮೇಜಯ ಶರಣ್ ಜಿ ಅವರು ಈ ಬಗ್ಗೆ ಆಹ್ವಾನ ನೀಡಲಿದ್ದಾರೆ ಎಂದರು.
ಮೊಘಲ್ ದೊರೆ ಬಾಬರ್ ಅವರು ಅಯೋಧ್ಯಾದಲ್ಲಿ 1528ರಲ್ಲಿ ಬಾಬ್ರಿ ಮಸೀದಿ ನಿರ್ಮಿಸಿದ್ದ . ಡಿಸೆಂಬರ್ 06,1992ರಂದು ಬಾಬ್ರಿ ಮಸೀದಿಯನ್ನು ಹಿಂದೂ ಕಾರ್ಯಕರ್ತರು ಕೆಡವಿದ ಆರೋಪವಿದೆ. ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications