ಯಡಿಯೂರಪ್ಪ ನೀರಿನ ಭರವಸೆ ನೀಡಿದ್ದ ಜತ್ನಲ್ಲಿ ಬಿಜೆಪಿ ಗೆಲುವು
ಮುಂಬೈ, ಅಕ್ಟೋಬರ್ 24: ಬಿಜೆಪಿಯನ್ನು ಗೆಲ್ಲಿಸಿದರೆ ಕರ್ನಾಟಕದಿಂದ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದ ಜತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಚುನಾವಣಾ ಪ್ರಚಾರಕ್ಕೆ ಮಹಾರಾಷ್ಟ್ರಕ್ಕೆ ಹೋಗಿದ್ದ ಯಡಿಯೂರಪ್ಪ ತಮ್ಮ ಪ್ರಚಾರ ಭಾಷಣದಲ್ಲಿ, ಜತ್ ತಾಲೂಕಿನ ಹೆಚ್ಚು ಜನರು ಕನ್ನಡ ಭಾಷಿಕರು.
ಕೃಷಿ ಮತ್ತು ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ಇವತ್ತು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಕ್ಕೆ ತಲುಪಿದೆ. ಈ ಗ್ರಾಮದಿಂದ 8-10 ಕಿಮೀ ದೂರದಲ್ಲಿ ಹರಿಯುತ್ತಿರುವ ಬೋರಾ ನದಿಗೆ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಹರಿಸುವುದರಿಂದ 30-40 ಗ್ರಾಮಗಳಿಗೆ 1 ಲಕ್ಷಕ್ಕೂ ಹೆಚ್ಚು ಜನರಿಗೆ ಇದರಿಂದ ಅನುಕೂಲ ಆಗುತ್ತದೆ ಎಂದು ಭರವಸೆ ನೀಡಿದ್ದರು.

ಯಡಿಯೂರಪ್ಪ ಅವರ ಈ ಹೇಳಿಕೆ ಕರ್ನಾಟಕದ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು, ಕಳಸಾ ಬಂಡೂರಿ, ಮಹಾದಾಯಿ ವಿಚಾರದ ಕುರಿತು ಮುಖ್ಯಮಂತ್ರಿ ಭೇಟಿ ಮಾಡಲು ಹೋದರೆ ಉತ್ತರ ಕರ್ನಾಟಕದಿಂದ ನೀರು ಹರಿಸುವಂತೆ ಭರವಸೆ ನೀಡಿ ಬಂದಿದ್ದಾರೆ ಎಂದು ದೂರಿದ್ದರು.
Recommended Video
ಇದೇ ಭಾಗದ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಕೂಡ ಪ್ರಚಾರ ನಡೆಸಿದ್ದರು ಆದರೆ ಕಾಂಗ್ರೆಸ್ ಸೋತಿದೆ. ಸಿದ್ದರಾಮಯ್ಯ ಅವರು ಜತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿಕ್ರಮ್ ಸಾವಂತ್ ಪರ ಮತಯಾಚಿಸಿದ್ದರು. ಅಂದು ಸಿದ್ದರಾಮಯ್ಯ ಅವರ ಭಾಷಣ ಕೇಳಲು ಸಾವಿರಾರು ಮಂದಿ ಸಭೆ ಸೇರಿದ್ದರು.
ನಿಮಗೆ ಯಾವ ರೀತಿ ಅನುಕೂಲ ಮಾಡಲು ಸಾಧ್ಯ ಇದೆಯೋ, ಚರ್ಚೆ ಮಾಡಿ ಸಹಕಾರ ಕೊಡುತ್ತೇನೆ. ಯಡಿಯೂರಪ್ಪ ಬಂದಿದ್ದಕ್ಕೆ, ಇಲ್ಲಿ ಮಾತನಾಡಿದ್ದಕ್ಕೆ ಹಿಂದಿನ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಡಬೇಕು ಎಂದು ಮತದಾರರಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದರು.
ನಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಹಾರಾಷ್ಟ್ರ ಸಿಎಂ ಘಡ್ನವೀಸ್ ಜೊತೆಗೂ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಬೇರೆ, ಕರ್ನಾಟಕ ಬೇರೆಯಲ್ಲ. ನೀರಿಲ್ಲದಿದ್ದರೆ ಬದುಕಲು ಆಗಲ್ಲ.
ರೈತರ ಹೊಲಕ್ಕೆ ನೀರು ಬೇಕು, ರೈತರ ಬೆಳೆದಂತಹ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕು. ರೈತರ ಉತ್ಪನ್ನ 2 ಪಟ್ಟು ಹೆಚ್ಚಾಗಬೇಕು ಅಂತಾ ಪ್ರಧಾನಿ ಮೋದಿ ಅಪೇಕ್ಷೆ ಇದೆ. ಇದನ್ನು ಪೂರೈಸಲು ನಮ್ಮ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದಿದ್ದರು.
ಇದೀಗ ಯಡಿಯೂರಪ್ಪ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳುತ್ತಾರಾ ಎನ್ನುವ ಕುತೂಹಲ ಮೂಡಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications