ಟಿಆರ್ಪಿ ಹಗರಣ; ಅರ್ನಬ್ ಬಂಧನಕ್ಕೆ ಮುನ್ನ ನೋಟಿಸ್ ನೀಡಲು ಸೂಚನೆ
ಮುಂಬೈ, ಮಾರ್ಚ್ 24: ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿ ಸಂಪಾದಕ, ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವ ಪ್ರಸಂಗ ಎದುರಾದರೆ, ಬಂಧನಕ್ಕೆ ಮೂರು ದಿನದ ಮುನ್ನವೇ ನೋಟಿಸ್ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.
ರಿಪಬ್ಲಿಕ್ ಟಿ.ವಿ, ರಿಪಬ್ಲಿಕ್ ಚಾನೆಲ್ಗಳ ನಿರ್ವಹಣೆ ಉಸ್ತುವಾರಿ ಹೊತ್ತ ಎಆರ್ಜಿ ಔಟ್ಲಿಯರ್ ಮೀಡಿಯಾ ಒಳಗೊಂಡಂತೆ ಇತರೆ ಟಿ.ವಿ ಚಾನೆಲ್ಗಳ ವಿರುದ್ಧದ ತನಿಖೆಯು 12 ವಾರಗಳಲ್ಲಿಯೇ ಪೂರ್ಣಗೊಳ್ಳಬೇಕು ಎಂಬ ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ನ್ಯಾಯಾಧೀಶ ಎಸ್.ಎಸ್.ಶಿಂದೆ, ಮನೀಶ್ ಪಿಟಾಲೆ ಅವರನ್ನೊಳಗೊಂಡ ಪೀಠ ಸಮ್ಮತಿಸಿದೆ.
ನಕಲಿ ಟಿಆರ್ಪಿ ಪ್ರಕರಣ ಸಂಬಂಧ ಗೋಸ್ವಾಮಿ ಹಾಗೂ ಎಆರ್ಜಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ನಡೆಸಿದ್ದು, ಪೊಲೀಸರಿಗೆ ಸೂಚನೆ ನೀಡಿದೆ.

ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲದಿದ್ದರೂ ಮುಂಬೈ ಪೊಲೀಸ್ ಅಪರಾಧ ವಿಭಾಗವು ಚಾರ್ಜ್ಶೀಟ್ನಲ್ಲಿ ತಮ್ಮನ್ನು ಶಂಕಿತರೆಂದು ನಮೂದಿಸಿ ಸುಮ್ಮನೆ ತನಿಖೆ ನಡೆಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.
ಸೋಮವಾರ ನಡೆದ ವಿಚಾರಣೆಯಲ್ಲಿಯೂ ಕೋರ್ಟ್ ಮುಂಬೈ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣದಲ್ಲಿ ಯಾರನ್ನೂ ಆರೋಪಿಗಳೆಂದು ಹೆಸರಿಸದೇ ತಿಂಗಳುಗಟ್ಟಲೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಪೊಲೀಸರಿಗೆ ಗೋಸ್ವಾಮಿ ವಿರುದ್ಧದ ದಾಖಲೆಗಳಲ್ಲಿ ಯಾವುದೇ ಗಣನೀಯ ಮಾಹಿತಿ ದೊರೆತಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.
2020ರ ಅಕ್ಟೋಬರ್ನಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನಾವೀಗ 2021ರ ಮಾರ್ಚ್ ತಿಂಗಳಲ್ಲಿ ಇದ್ದೇವೆ. ಈ ವಿಚಾರದಲ್ಲಿ ಎಲ್ಲವನ್ನೂ ಕಲಸು ಮೇಲೋಗರ ಮಾಡಿರುವಂತಿರುವುದು ಕಾಣಿಸುತ್ತಿದೆ. ಅವರ ತಲೆಯ ಮೇಲೆ ಏಕೆ ಕತ್ತಿಯನ್ನು ನೇತುಹಾಕಿರಿಸಿದ್ದೀರಿ? ಕಳೆದ ಮೂರು ತಿಂಗಳಿನಿಂದ ತನಿಖೆ ನಡಸುತ್ತಿದ್ದೀರಿ ಮತ್ತು ಅವರ ವಿರುದ್ಧ ಯಾವ ಪುರಾವೆಯೂ ಸಿಕ್ಕಿಲ್ಲ. ಅವರ ಉದ್ಯೋಗಿಗಳ ವಿರುದ್ಧ ಈ ಹಿಂದೆ ತೆಗೆದುಕೊಂಡ ಕ್ರಮದಂತೆ ಯಾವಾಗ ಬೇಕಾದರೂ ಯಾವುದಾದರೂ ಕ್ರಮ ತೆಗೆದುಕೊಳ್ಳಬಹುದು ಎಂಬ ಭಯ ಅವರಲ್ಲಿದೆ' ಎಂದು ಕೋರ್ಟ್ ಹೇಳಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications