ವಂಚನೆ ಕೇಸ್: ಸೆನ್ಸಾರ್ ಬೋರ್ಡ್ ರಾಕೇಶ್ ಗೆ ಜಾಮೀನು
ಮುಂಬೈ, ಅ.12: ಪ್ರಾದೇಶಿಕ ಚಿತ್ರವೊಂದಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಲಂಚ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಸೆನ್ಸಾರ್ ಮಂಡಳಿಯಿಂದ ಅಮಾನತಾಗಿರುವ ಸಿಇಒ ರಾಕೇಶ್ ಕುಮಾರ್ ಅವರಿಗೆ ಜಾಮೀನು ಮಂಜೂರಾಗಿದೆ. ರಾಕೇಶ್ ಕುಮಾರ್ ಅವರಿಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಚಲನಚಿತ್ರಗಳ ಬಿಡುಗಡೆಯ ಪರವಾನಿಗೆಗಾಗಿ ಸುಮಾರು ಲಂಚ ಪಡೆದುಕೊಂಡ ಆರೋಪದಲ್ಲಿ ಕಳೆದ ಆಗಸ್ಟ್ ತಿಂಗಳಿನಲ್ಲಿ ಬಂಧನಕ್ಕೊಳಗಾಗಿದ್ದ ಸೆನ್ಸಾರ್ ಬೋರ್ಡ್ನ ಅಮಾನತುಗೊಂಡಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಕೇಶ್ ಕುಮಾರ್ರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ರೂ.ಗಳ ಭದ್ರತಾ ಠೇವಣಿ ಹಾಗೂ ಇಬ್ಬರ ವೈಯಕ್ತಿಕ ಶ್ಯೂರಿಟಿ ಸಲ್ಲಿಸಬೇಕು, ತನಿಖೆ ಮುಗಿಯುವವರೆಗೆ ಮುಂಬೈ ಹಾಗೂ ಚೆನ್ನೈಯಲ್ಲಿರುವ ಸೆನ್ಸಾರ್ ಮಂಡಳಿಯ ಯಾವುದೇ ಕಚೇರಿಗೂ ಭೇಟಿ ನೀಡುವಂತಿಲ್ಲ ಮುಂತಾದ ಷರತ್ತುಗಳನ್ನು ರಾಕೇಶ್ ಕುಮಾರ್ ಅವರಿಗೆ ನ್ಯಾ.ಸಾಧನಾ ಜಾಧವ್ ಕುಮಾರ್ ಅವರು ಸೂಚಿಸಿದ್ದಾರೆ.

ಅ.29ರಿಂದ ಪ್ರತಿ ಬುಧವಾರ, ಶುಕ್ರವಾರ ಮುಂಬೈಯ ತನಿಖಾಧಿಕಾರಿಗೆ ಹೇಳಿಕೆಯನ್ನು ನೀಡಬೇಕು ಹಾಗೂ ತನಿಖಾ ತಂಡದೊಡನೆ ಸಹಕರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಆರೋಪಿ ರಾಕೇಶ್ ಕುಮಾರ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಹೀಗಾಗಿ ಜಾಮೀನು ನೀಡಬಾರದು ಎಂದು ಸಿಬಿಐ ತಂಡ ಕೋರ್ಟಿನಲ್ಲಿ ವಾದಿಸಿತ್ತು. ಅದರೆ, ಕೋರ್ಟ್ ವಿಧಿಸಿದ್ದ 60 ದಿನಗಳ ಚಾರ್ಜ್ಶೀಟ್ ಸಲ್ಲಿಸಲು ಅಸಾಧ್ಯ ಸಿಬಿಐ ಕೋರ್ಟಿಗೆ ಹೇಳಿಕೆ ನೀಡಿತ್ತು. ನಿಗದಿತ ಸಮಯದೊಳಗೆ ಚಾರ್ಜ್ಶೀಟ್ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಂಶವನ್ನು ಪರಿಗಣಿಸಿದ ಕೋರ್ಟ್ ಹೆಚ್ಚಿನ ತನಿಖೆ ನಡೆಸುವಂತೆ ತನಿಖಾ ಏಜೆನ್ಸಿಗೆ ಸೂಚಿಸಿ ರಾಕೇಶ್ ಗೆ ಜಾಮೀನು ಮಂಜೂರು ಮಾಡಿದೆ.
ಪ್ರಾದೇಶಿಕ ಚಿತ್ರವೊಂದಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು 70 ಸಾವಿರ ರೂ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಸಿಇಒ ರಾಕೇಶ್ ಕುಮಾರ್ ಅವರನ್ನು ಕಳೆದ ಆಗಸ್ಟ್ ತಿಂಗಳಿನಲ್ಲಿ ಸಿಬಿಐ ತಂಡ ಬಂಧಿಸಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications