ವಂಚನೆ ಕೇಸ್: ಸೆನ್ಸಾರ್ ಬೋರ್ಡ್ ರಾಕೇಶ್ ಗೆ ಜಾಮೀನು
ಮುಂಬೈ, ಅ.12: ಪ್ರಾದೇಶಿಕ ಚಿತ್ರವೊಂದಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಲಂಚ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಸೆನ್ಸಾರ್ ಮಂಡಳಿಯಿಂದ ಅಮಾನತಾಗಿರುವ ಸಿಇಒ ರಾಕೇಶ್ ಕುಮಾರ್ ಅವರಿಗೆ ಜಾಮೀನು ಮಂಜೂರಾಗಿದೆ. ರಾಕೇಶ್ ಕುಮಾರ್ ಅವರಿಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಚಲನಚಿತ್ರಗಳ ಬಿಡುಗಡೆಯ ಪರವಾನಿಗೆಗಾಗಿ ಸುಮಾರು ಲಂಚ ಪಡೆದುಕೊಂಡ ಆರೋಪದಲ್ಲಿ ಕಳೆದ ಆಗಸ್ಟ್ ತಿಂಗಳಿನಲ್ಲಿ ಬಂಧನಕ್ಕೊಳಗಾಗಿದ್ದ ಸೆನ್ಸಾರ್ ಬೋರ್ಡ್ನ ಅಮಾನತುಗೊಂಡಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಕೇಶ್ ಕುಮಾರ್ರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ರೂ.ಗಳ ಭದ್ರತಾ ಠೇವಣಿ ಹಾಗೂ ಇಬ್ಬರ ವೈಯಕ್ತಿಕ ಶ್ಯೂರಿಟಿ ಸಲ್ಲಿಸಬೇಕು, ತನಿಖೆ ಮುಗಿಯುವವರೆಗೆ ಮುಂಬೈ ಹಾಗೂ ಚೆನ್ನೈಯಲ್ಲಿರುವ ಸೆನ್ಸಾರ್ ಮಂಡಳಿಯ ಯಾವುದೇ ಕಚೇರಿಗೂ ಭೇಟಿ ನೀಡುವಂತಿಲ್ಲ ಮುಂತಾದ ಷರತ್ತುಗಳನ್ನು ರಾಕೇಶ್ ಕುಮಾರ್ ಅವರಿಗೆ ನ್ಯಾ.ಸಾಧನಾ ಜಾಧವ್ ಕುಮಾರ್ ಅವರು ಸೂಚಿಸಿದ್ದಾರೆ.

ಅ.29ರಿಂದ ಪ್ರತಿ ಬುಧವಾರ, ಶುಕ್ರವಾರ ಮುಂಬೈಯ ತನಿಖಾಧಿಕಾರಿಗೆ ಹೇಳಿಕೆಯನ್ನು ನೀಡಬೇಕು ಹಾಗೂ ತನಿಖಾ ತಂಡದೊಡನೆ ಸಹಕರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಆರೋಪಿ ರಾಕೇಶ್ ಕುಮಾರ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಹೀಗಾಗಿ ಜಾಮೀನು ನೀಡಬಾರದು ಎಂದು ಸಿಬಿಐ ತಂಡ ಕೋರ್ಟಿನಲ್ಲಿ ವಾದಿಸಿತ್ತು. ಅದರೆ, ಕೋರ್ಟ್ ವಿಧಿಸಿದ್ದ 60 ದಿನಗಳ ಚಾರ್ಜ್ಶೀಟ್ ಸಲ್ಲಿಸಲು ಅಸಾಧ್ಯ ಸಿಬಿಐ ಕೋರ್ಟಿಗೆ ಹೇಳಿಕೆ ನೀಡಿತ್ತು. ನಿಗದಿತ ಸಮಯದೊಳಗೆ ಚಾರ್ಜ್ಶೀಟ್ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಂಶವನ್ನು ಪರಿಗಣಿಸಿದ ಕೋರ್ಟ್ ಹೆಚ್ಚಿನ ತನಿಖೆ ನಡೆಸುವಂತೆ ತನಿಖಾ ಏಜೆನ್ಸಿಗೆ ಸೂಚಿಸಿ ರಾಕೇಶ್ ಗೆ ಜಾಮೀನು ಮಂಜೂರು ಮಾಡಿದೆ.
ಪ್ರಾದೇಶಿಕ ಚಿತ್ರವೊಂದಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು 70 ಸಾವಿರ ರೂ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಸಿಇಒ ರಾಕೇಶ್ ಕುಮಾರ್ ಅವರನ್ನು ಕಳೆದ ಆಗಸ್ಟ್ ತಿಂಗಳಿನಲ್ಲಿ ಸಿಬಿಐ ತಂಡ ಬಂಧಿಸಿತ್ತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications