ಆದರ್ಶ್ ಹೌಸಿಂಗ್ ಸೊಸೈಟಿ ಕಟ್ಟಡ ನೆಲಸಮಕ್ಕೆ ಆದೇಶ
ಮುಂಬೈ, ಏಪ್ರಿಲ್ 29: ಆದರ್ಶ್ ಹೌಸಿಂಗ್ ಸೊಸೈಟಿ ಫ್ಲಾಟ್ ಹಗರಣ ಮತ್ತೆ ಸುದ್ದಿಯಲ್ಲಿದೆ. ಆದರ್ಶ್ ಹೌಸಿಂಗ್ ಸೊಸೈಟಿ ಕಟ್ಟಡವನ್ನು ನೆಲಸಮ ಮಾಡುವಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದಲ್ಲಿ ಸಿಲುಕಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಚವಾಣ್ ರಾಜೀನಾಮೆ ನೀಡಿದ್ದರು. ಕೊಲಬಾದಲ್ಲಿರುವ 31 ಮಹಡಿಯ ಕಟ್ಟಡ ನೆಲಸಮ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು 12 ವಾರಗಳ ಕಾಲಾವಕಾಶ ನೀಡಲಾಗಿದೆ.
ಅಶೋಕ್ ಅವರು ತಮ್ಮ ಅತ್ತೆ ಹಾಗೂ ಇಬ್ಬರು ಸಂಬಂಧಿಕರಿಗೆ ಆದರ್ಶ್ ಸೊಸೈಟಿ ಫ್ಲ್ಯಾಟ್ ಗಳನ್ನು ಕೊಡಿಸಿರುವ ಹಗರಣ ಬೆಳಕಿಗೆ ಬಂದ ನಂತರ, ಮಹಾ ಸಿಎಂ ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿತ್ತು.
ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ 31 ಮಹಡಿಯ ಆದರ್ಶ್ ಸೊಸೈಟಿ ಫ್ಲ್ಯಾಟ್ ಗಳನ್ನು ಕಾರ್ಗಿಲ್ ಸಮರದ ಹೀರೋಗಳು ಹಾಗೂ ಮೃತ ಯೋಧರ ಪತ್ನಿಯರಿಗೆ ನೀಡುವ ಸಲುವಾಗಿ ನಿರ್ಮಿಸಲಾಗಿತ್ತು, ಆದರೆ, ಇದನ್ನು ರಾಜಕಾರಣಿಗಳು ಹಾಗೂ ಅವರ ಸಂಬಂಧಿಗಳು, ನಿವೃತ್ತ ಸೇನಾಧಿಕಾರಿಗಳು ಬಳಸುತ್ತಿದ್ದರು. ಇದರಿಂದ ವಿವಾದ ಹುಟ್ಟಿಕೊಂಡಿತ್ತು.

ಸೇನೆಯ ಹಿರಿಯ ಅಧಿಕಾರಿಗಳ ಮೇಲೂ ಆರೋಪ
ಭೂ ಸೇನೆಯ ಹಿರಿಯ ಅಧಿಕಾರಿಗಳಾದ ಎನ್ ಸಿ ವಿಜ್, ದೀಪಕ್ ಕಪೂರ್, ಮಾಧವೇಂದ್ರ ಸಿಂಗ್, ರಾಜಕಾರಣಿ ಶರದ್ ಪವಾರ್ ಸೇರಿದಂತೆ ಸುಮಾರು 103ಕ್ಕೂ ಅಧಿಕ ಗಣ್ಯರ ಹೆಸರು ಈ ಹಗರಣದಲ್ಲಿ ಸಿಲುಕಿಕೊಂಡಿತ್ತು. ಇಲ್ಲಿ ಫ್ಲ್ಯಾಟ್ ಹೊಂದಿದ್ದ ಸೇನೆಯ ನಿವೃತ್ತ ಅಧಿಕಾರಿಗಳು, ಕಾರ್ಗಿಲ್ ಹುತಾತ್ಮರ ಕುಟುಂಬಗಳಿಗೆ ಮರಳಿಸಿದ್ದರು. ಈ ನಡುವೆ ಫ್ಲ್ಯಾಟ್ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿತ್ತು

ಕಾಂಗ್ರೆಸ್ ಶಾಸಕರು, ಅಧಿಕಾರಿಗಳು ಕೂಡಾ ಶಾಮೀಲು
ಮಹಾರಾಷ್ಟ್ರದ ಆರ್ಥಿಕ ಕಾರ್ಯದರ್ಶಿ ಪ್ರದೀಪ್ ವ್ಯಾಸ್, ಪಿವಿ ದೇಶ್ ಮುಖ್, ನಿವೃತ್ತ ಬ್ರಿಗೇಡಿಯರ್ ಎಂ ಎಂ ವಾಂಚೂ, ಮಾಜಿ ಡಿಫೇನ್ಸ್ ಎಸ್ಟೇಸ್ಟ್ ಅಧಿಕಾರಿ ಆರ್ ಸಿ ಥಾಕೂರ್, ನಿವೃತ್ತ ಮೇಜರ್ ಜನರಲ್ ಎಆರ್ ಕುಮಾರ್, ನಿವೃತ್ತ ಮೇಜರ್ ಜನರಲ್ ಟಿಕೆ ಕೌಲ್, ಜೈರಾಜ್ ಪಾಠಕ್, ರಾಮಚಂದ್ ತಿವಾರಿ ಹಾಗೂ ಮಾಜಿ ಕಾಂಗ್ರೆಸ್ ಶಾಸಕ ಕೆಎಲ್ ಗಿಡ್ವಾಣಿ ಅವರು ಜಾಮೀನು ಪಡೆದಿದ್ದರು.

ಮಹಾರಾಷ್ಟ್ರದ ಮುಖಂಡ ಅಶೋಕ್ ರಾಜೀನಾಮೆ
ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರ ಸಿಎಂ ಅಶೋಕ್ ಚವಾಣ್ ತಲೆದಂಡದ ನಂತರ ಸಿಬಿಐ ಈ ಪ್ರಕರಣದ ತನಿಖೆ ಆರಂಭಿಸಿ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ವಿಲಾಸ್ ರಾವ್ ದೇಶ್ ಮುಖ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಸಿಬಿಐ ಸಲ್ಲಿಸಲಿರುವ ದೋಷಾರೋಪಣ ಪಟ್ಟಿಯಲ್ಲಿ ಇನ್ನು ಗಣ್ಯರ ಹೆಸರು ಸೇರ್ಪಡೆಗೊಂಡಿತ್ತು. ಕಾಂಗ್ರೆಸ್ ಪಕ್ಷಕ್ಕೆ ಈ ಹಗರಣ ತೀವ್ರ ಮುಖಭಂಗ ತಂದಿತ್ತು.

2010 ರಿಂದ 2016ರ ತನಕ ಪ್ರಕರಣ
2011 ರಲ್ಲಿ ನೆಲಸಮಕ್ಕೆ ಆದೇಶ ಸಿಕ್ಕಿತ್ತು. ಆದರೆ, ಸಾಧ್ಯವಾಗಿರಲಿಲ್ಲ.ಕಾರ್ಗಿಲ್ ಹುತಾತ್ಮರ ಕುಟುಂಬಕ್ಕೆ ಸೇರಬೇಕಿದ್ದ 6 ಅಂತಸ್ತಿನ ಕಟ್ಟಡ ಆದರ್ಶ್ ಫ್ಲಾಟ್ 31 ಮಹಡಿ ಕಟ್ಟಡವಾಗಿ ಬೆಳೆಯಿತು. ಈಗ ಜಸ್ಟೀಸ್ ಆರ್ ವಿ ಮೋರೆ, ಜಸ್ಟೀಸ್ ಆರ್ ಜಿ ಕೆಟ್ಕರ್ ಅವರಿದ್ದ ವಿಭಾಗೀಯ ಪೀಠ ಕಟ್ಟಡ ನೆಲಸಮಕ್ಕೆ ಆದೇಶಿಸಿದ್ದಲ್ಲದೆ, ರಾಜಕಾರಣಿಗಳು, ಅಧಿಕಾರಗಳ ಮೇಲೆ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications