ಮರಾಠಿಗರಿಗೆ ಮೀಸಲಾತಿಗೆ ಕೋರ್ಟ್ ಸಮ್ಮತಿ; 13 ಪರ್ಸೆಂಟ್ ಗೆ ಇಳಿಸಲು ಸೂಚನೆ
ಮುಂಬೈ, ಜೂನ್ 27: ಸರಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮರಾಠಿಗರಿಗೆ ಮೀಸಲಾತಿ ಸಾಂವಿಧಾನಿಕ ಮಾನ್ಯತೆ ನೀಡುವ ವಿಚಾರವನ್ನು ಬಾಂಬೆ ಹೈ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ. ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಭಾರತಿ ಡಾಂಗ್ರೆ ಅವರ ವಿಭಾಗೀಯ ಪೀಠವು ಮೀಸಲಾತಿಯ ಪ್ರಮಾಣವನ್ನು 16 ಪರ್ಸೆಂಟ್ ನಿಂದ 12 ಅಥವಾ 13 ಪರ್ಸೆಂಟ್ ಗೆ ಇಳಿಸುವಂತೆ ಹೇಳಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸಿನಂತೆ ಮೀಸಲಾತಿ ಜಾರಿಗೆ ತರುವಂತೆ ಸೂಚಿಸಿದೆ. ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗದವರಿಗೆ ರಾಜ್ಯ ಸರಕಾರವು ಮೀಸಲಾತಿ ಒದಗಿಸುವುದನ್ನು ನಾವು ಒಪ್ಪುತ್ತೇವೆ ಹಾಗೂ ಆ ನಿರ್ಧಾರ ಎತ್ತಿ ಹಿಡಿಯುತ್ತೇವೆ. ಆದರೆ 16 ಪರ್ಸೆಂಟ್ ಬದಲಿಗೆ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸಿನಂತೆ 12 ಅಥವಾ 13 ಪರ್ಸೆಂಟ್ ಗೆ ಇಳಿಸಬೇಕು ಎಂದು ಕೋರ್ಟ್ ತಿಳಿಸಿದೆ.
ಸರಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮರಾಠಿಗರಿಗೆ 16 ಪರ್ಸೆಂಟ್ ಮೀಸಲಾತಿ ನೀಡುವ ಮಹಾರಾಷ್ಟ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ, ಸಾಕಷ್ಟು ಅರ್ಜಿಗಳು ಬಂದಿದ್ದವು. ಮಹಾರಾಷ್ಟ್ರದಲ್ಲಿ ಈಗಾಗಲೇ 52 ಪರ್ಸೆಂಟ್ ನಷ್ಟು ಮೀಸಲಾತಿ ಇದ್ದು, 16 ಪರ್ಸೆಂಟ್ ಹೆಚ್ಚುವರಿಯಾಗಿ ಮರಾಠಿಗರಿಗೆ ಮೀಸಲಾತಿ ಸೇರಿ 68 ಪರ್ಸೆಂಟ್ ಗೆ ಏರಿಕೆ ಆಗಲಿದೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯಾವುದೇ ರಾಜ್ಯದಲ್ಲಿ ಮೀಸಲಾತಿ ಪ್ರಮಾಣವು ಐವತ್ತು ಪರ್ಸೆಂಟ್ ಮೀರುವಂತಿಲ್ಲ. ಆದ್ದರಿಂದ ಈ ಆದೇಶವನ್ನು ಮಹಾರಾಷ್ಟ್ರ ಸರಕಾರ ಮೀರಿದೆ ಎಂದು ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications