ಅಬು ಸಲೇಂ ಮದುವೆಗೆ ಪೆರೋಲ್ ನಿರಾಕರಿಸಿದ ಬಾಂಬೆ ಹೈಕೋರ್ಟ್
ಮುಂಬೈ, ಆಗಸ್ಟ್ 7: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಅಬು ಸಲೇಂ, ತನ್ನ ಮದುವೆಗೆ ಕೋರಿ ಸಲ್ಲಿಸಿದ್ದ 45 ದಿನಗಳ ಪೆರೋಲ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ತನ್ನ ಎರಡನೆಯ ಮದುವೆಗಾಗಿ ಅಬು ಸಲೇಂ 45 ದಿನಗಳ ಪೆರೋಲ್ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದ. ಏಪ್ರಿಲ್ 21ರಂದು ಸಲ್ಲಿಸಿದ್ದ ಅರ್ಜಿಯನ್ನು ನವಿ ಮುಂಬೈ ಕಮಿಷನರ್ ತಿರಸ್ಕರಿಸಿದ್ದರು. ಬಳಿಕ ಸಲೇಂ, ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದ.
247 ಮಂದಿಯ ಸಾವು ಹಾಗೂ 713 ಜನರು ಗಾಯಾಳುವಾಗಲು ಕಾರಣವಾಗಿದ್ದ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ದಾಳಿಯಲ್ಲಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದಲ್ಲದೆ 2002ರ ಸುಲಿಗೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಆತನಿಗೆ ಏಳು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು.

ತಲೋಜಾ ಜೈಲ್ನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಲೇಂ, ಮುಂಬೈ ನಿವಾಸಿ ಕೌಸರ್ ಬಹಾರ್ ಜತೆ ವಿವಾಹವಾಗಲು ಬಯಸಿದ್ದಾನೆ.
ಇದಕ್ಕೂ ಮೊದಲು 2014ರಲ್ಲಿ ತನ್ನನ್ನು ಲಕ್ನೋದಲ್ಲಿ ಕೋರ್ಟ್ ವಿಚಾರಣೆಗೆ ಕರೆದೊಯ್ಯುವ ರೈಲು ಪ್ರಯಾಣದ ವೇಳೆ ಫೋನ್ನಲ್ಲಿಯೇ ಕೌಸರ್ಳನ್ನು ಮದುವೆಯಾಗಿದ್ದಾಗಿ ಸಲೇಂ ಹೇಳಿಕೊಂಡಿದ್ದ.
ಜೈಲಿನಲ್ಲಿರುವ ಭೂಗತ ಪಾತಕಿಯನ್ನು ಮದುವೆಯಾಗಲು ಅನುಮತಿ ನೀಡದೆ ಇದ್ದರೆ ತನ್ನನ್ನು ತಾನೇ ಕೊಂದುಕೊಳ್ಳುವುದಾಗಿ ಕೌಸರ್, ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಬೆದರಿಕೆ ಒಡ್ಡಿದ್ದಳು. ಸಲೇಂ ಜತೆ ಮದುವೆಯಾಗಿದೆ ಎಂಬ ವರದಿಗಳು ತನ್ನ ಮಾನಹಾನಿ ಉಂಟುಮಾಡಿವೆ ಎಂದು ಆರೋಪಿಸಿದ್ದಳು.
2005ರಲ್ಲಿ ಪೋರ್ಚುಗಲ್ನಿಂದ ಗಡಿಪಾರಾಗಿ ಭಾರತಕ್ಕೆ ಬಂದಾಗಿನಿಂದಲೂ ಅಬು ಸಲೇಂ ಜೈಲಿನಲ್ಲಿದ್ದಾನೆ. 25 ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿ ಇರಿಸಬಾರದು ಎಂಬ ಒಪ್ಪಂದದೊಂದಿಗೆ ಪೋರ್ಚುಗಲ್ ಸಲೇಂನನ್ನು ಭಾರತಕ್ಕೆ ಹಸ್ತಾಂತರಿಸಿತ್ತು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications