ಪತ್ನಿ ಶ್ರೀದೇವಿ ಬಗ್ಗೆ ಭಾವುಕರಾಗಿ ಪತ್ರ ಬರೆದ ಬೋನಿಕಪೂರ್
ಮುಂಬೈ, ಮಾರ್ಚ್ 01: "ಈ ಜಗತ್ತಿಗೆ ಶ್ರೀದೇವಿ ಚಾಂದಿನಿ ಇರಬಹುದು. ಆದರೆ ನನ್ನ ಪ್ರೀತಿ, ನನ್ನ ಸಂಗಾತಿ, ನನ್ನ ಕುಟುಂಬಕ್ಕೆ ಆಕೆ ರಕ್ಷಾ ರೇಖೆ" ಎಂದು ಭಾವುಕರಾಗಿ ಪತ್ರ ಬರೆದಿದ್ದಾರೆ ಶ್ರೀದೇವಿ ಅವರ ಪತಿ ಬೋನಿ ಕಪೂರ್.
ಶ್ರೀದೇವಿ ಪಂಚಭೂತಗಳಲ್ಲಿ ಲೀನರಾಗಿ, ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಚಾಂದಿನಿಯಾಗಿ ಉಳಿದಿದ್ದಾರೆ. ಫೆಬ್ರವರಿ 24 ರಂದು ದುಬೈನ ಹೊಟೇಲ್ ವೊಂದರ ಬಾತ್ ಟಬ್ಬಿನಲ್ಲಿ ಮುಳುಗಿ ಇಹಲೋಕ ತ್ಯಜಿಸಿದ ಚಾಂದಿನಿ ಶ್ರೀದೇವಿ ಇನ್ನು ನೆನಪು ಮಾತ್ರವೆಂದರೆ ನಂಬುವುದು ಕಷ್ಟ. ಭಾರತೀಯ ಚಿತ್ರರಂಗದ ಮೊಟ್ಟ ಮೊದಲ ಮಹಿಳಾ ಸೂಪರ್ ಸ್ಟಾರ್ ಎಂಬ ಖ್ಯಾತಿಯ ಶ್ರೀದೇವಿ ಅವರ ಅಂತಿಮ ಸಂಸ್ಕಾರ ನಿನ್ನೆ(ಫೆ.28) ಮುಂಬೈಯಲ್ಲಿ ನಡೆದಿದೆ.
ಇದುವರೆಗೂ ಪತ್ನಿಯ ನಿಧನದ ಕುರಿತು ಯಾವುದೇ ಹೇಳಿಕೆ ನೀಡಿರದ ಬೋನಿಕಪೂರ್, ಶ್ರೀದೇವಿಯವರ ಟ್ವಿಟ್ಟರ್ ಖಾತೆಯ ಮೂಲಕ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಬದುಕಿನಲ್ಲಿ ಶ್ರೀದೇವಿಯವರ ಪಾತ್ರವೇನು ಎಂಬುದನ್ನು ಭಾವುಕರಾಗಿ ವಿವರಿಸಿದ್ದಾರೆ. ಆ ಪತ್ರದ ಸಾರಾಂಶ ಇಲ್ಲಿದೆ....
— SRIDEVI BONEY KAPOOR (@SrideviBKapoor) February 28, 2018 |
ಲೋಕಕ್ಕೆ ಆಕೆ ಚಾಂದಿನಿ, ನನಗೆ ಪ್ರೀತಿ!
"ಈ ಲೋಕಕ್ಕೆ ಶ್ರೀದೇವಿ ಎಂದರೆ ಚಾಂದಿನಿ, ಅತ್ಯುತ್ತಮ ನಟಿ, ಅವರ ಶ್ರೀದೇವಿ... ಆದರೆ ನನಗೆ ಆಕೆ ಎಂದರೆ ಪ್ರೀತಿ, ನನ್ನ ಸಂಗಾತಿ, ನನ್ನ ಮಕ್ಕಳಿಗೆ ತಾಯಿ, ನನ್ನ ಸ್ನೇಹಿತೆ. ನನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಆಕೆಯೇ ಎಲ್ಲವೂ ಆಗಿದ್ದಳು! ಅವರ ಬದುಕೂ ಅವಳೇ ಆಗಿತ್ತು. ನಮ್ಮ ಸಂಸಾರದ ಶ್ರೀರಕ್ಷೆಯಾಗಿದ್ದಳು ಅವಳು"

ನಮ್ಮೊಂದಿಗೆ ನಿಂತ ಎಲ್ಲರಿಗೂ ತುಂಬು ಕೃತಜ್ಞತೆಗಳು
"ಈ ಸಂಕಷ್ಟದ ಸಮಯದಲ್ಲಿ ನಮ್ಮೊಂದಿಗೆ ನಿಂತ ಎಲ್ಲರಿಗೂ ನಮ್ಮ ತುಂಬು ಕೃತಜ್ಞತೆಗಳು. ಅರ್ಜುನ್, ಅಂಶುಲಾ, ಖುಷಿ, ಜಾನ್ವಿ ಎಲ್ಲರ ಬೆಂಬಲಕ್ಕೆ ನಾನು ಋಣಿಯಾಗಿದ್ದೇನೆ. ನೀವು ನನ್ನ ಬದುಕಿನ ಆಧಾರ ಸ್ತಂಬಗಳು. ನಾವೆಲ್ಲರೂ ಒಂದಾಗಿ ಈ ಕೆಟ್ಟ ಘಳಿಗೆಯನ್ನು ಎದುರಿಸಲು ಪ್ರಯತ್ನಿಸೋಣ. ಆಕೆಯ ಅಗಲಿಕೆ ನಮ್ಮ ಕುಟುಂಬಕ್ಕೆ ಭರಿಸಲಾಗದ ನಷ್ಟ"
— Anil Kapoor (@AnilKapoor) February 28, 2018 |
ಕಪೂರ್ ಮತ್ತು ಅಯ್ಯಪ್ಪನ್ ಕುಟುಂಬದ ಪತ್ರ
ಶ್ರೀದೇವಿ ಅವರ ಅಗಲಿಕೆಯ ಸಮಯದಲ್ಲಿ ಕಪೂರ್ ಮತ್ತು ಅಯ್ಯಪ್ಪನ್ ಕುಟುಂಬದೊಡನೆ ನಿಂತ ಎಲ್ಲರಿಗೂ ಕಪೂರ್ ಮತ್ತು ಅಯ್ಯಪ್ಪನ್ ಕುಟುಂಬ ಕೃತಜ್ಞತೆ ಅರ್ಪಿಸಿದೆ. ಕುಟುಂಬದ ಪರವಾಗಿ ನಟ ಅನಿಲ್ ಕಪೂರ್ ಅವರು ತಮ್ಮ ಟ್ವಿಟ್ಟರ್ ಖಅತೆಯಲ್ಲಿ ಪತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ.

ಆಕೆಯೊಂದು ದಂತಕತೆ
ಶ್ರೀದೇವಿ ಅವರೊಂದು ದಂತಕತೆ. ಆ ಸುಂದರ ಆತ್ಮ ನಮ್ಮನ್ನು ಬಹಳ ಬೇಗ ತೊರೆದು ಹೋಗಿದೆ. ಈ ಸಮಯದಲ್ಲಿ ನಮ್ಮೊಂದಿಗೆ ನಿಂತ ಕೋಟ್ಯಂತರ ಅಭಿಮಾನಿಗಳಿಗೆ, ಸ್ನೇಹಿತರು, ಹಿತೈಷಿ ಸಂಬಂಧಿಗಳಿಗೆ ನಾವು ಸದಾ ಋಣಿ ಎಂದು ಈ ಪತ್ರದಲ್ಲಿ ಬರೆಯಲಾಗಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications