ಡಾ. ಅಂಬೇಡ್ಕರ್ ಮನೆಗೆ ಕೆಲ್ಲೆಸೆತ, ಎಫ್ಐಆರ್ ದಾಖಲು
ಮುಂಬೈ, ಜುಲೈ 8: ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ಅವರ ಮನೆ ''ರಾಜ್ ಗೃಹ'' ಕ್ಕೆ ಕೆಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
Recommended Video
ಮಂಗಳವಾರ ಸಂಜೆ ನಡೆದ ಈ ಕೃತ್ಯವನ್ನು ಖಂಡಿಸಿ, ಅನೇಕ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿರುವ ವಿಷಯ ತಿಳಿದ ಪ್ರಕಾಶ್ ಅಂಬೇಡ್ಕರ್ ಅವರು ಸಮುದಾಯಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.
राज्यातील सर्व आंबेडकरवाद्यांनी शांतता राखावी. 'राजगृह' आपल्या सर्वांसाठी आदराचे ठिकाण आहे. माझे आपल्या सर्वांना आवाहन आहे की, आपण शांतता राखावी. pic.twitter.com/P31MTvJhb4
— Prakash Ambedkar (@Prksh_Ambedkar) July 7, 2020
ಕೆಲ ದುಷ್ಕರ್ಮಿಗಳಿಂದ ಅಚಾತುರ್ಯ ನಡೆದಿದೆ. ಶಾಂತಿ, ಸಹನೆಯಿಂದ ಎಲ್ಲರೂ ಇರಬೇಕು ಎಂದು ಈ ಮೂಲಕ ಕೋರುತ್ತೇನೆ. ಘಟನೆ ಬಗ್ಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ಬಗ್ಗೆ ಮಾತನಾಡಿದ್ದೇನೆ, ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.

ಘಟನೆಯನ್ನು ಖಂಡಿರುವ ಗೃಹ ಸಚಿವ ಅನಿಲ್ ದೇಶ್ ಮುಖ್, ಈ ಬಗ್ಗೆ ತನಿಖೆ ಆರಂಭಗೊಂಡಿದ್ದು, ಎಫ್ ಐಆರ್ ಹಾಕಲಾಗಿದೆ ಎಂದಿದ್ದಾರೆ.
ವಂಚಿತ್ ಬಹುಜನ್ ಅಘಾಡಿ ಅಧ್ಯಕ್ಷ, ಡಾ. ಅಂಬೇಡ್ಕರ್ ಅವರ ಮೊಮ್ಮಗ ಸುಜಾತ್ ಅವರು ದಿ ಕ್ವಿಂಟ್ ಜೊತೆ ಮಾತನಾಡಿ, ಬಾಬಾಸಾಹೇಬ್ ಅವರ ಕುಟುಂಬ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಗಳು ಏಕಾಏಕಿ ಎರಡು ರೂಮ್ ಗಳ ಮೇಲೆ ಕಲ್ಲೆಸೆದಿದ್ದಾರೆ. ಮ್ಯೂಸಿಯಂ ಹಾಗೂ ಫೋಟೋ ಗ್ಯಾಲರಿ, ಬಾಬಾಸಾಹೇಬ್ ಪುಸ್ತಕ ಇನ್ನಿತರ ಅಮೂಲ್ಯ ವಸ್ತುಗಳಿದ್ದ ರೂಮ್ ಹಾಗೂ ಇನ್ನೊಂದು ಪಕ್ಷದ ಕಚೇರಿ, ಮೀಟಿಂಗ್ ರೂಮ್ ಮೇಲೆ ಕಲ್ಲು ಎಸೆಯಲಾಗಿದೆ ಎಂದು ಹೇಳಿದ್ದಾರೆ.












Click it and Unblock the Notifications