ವಿಡಿಯೋ: ಪಕ್ಷದ ಪ್ರಮುಖ ನಾಯಕನಿಗೆ ಥಳಿಸಿದ ಬಿಎಸ್ಪಿ ಕಾರ್ಯಕರ್ತರು
ಅಮರಾವತಿ (ಮಹಾರಾಷ್ಟ್ರ), ಜೂನ್ 18: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಕರೆಯಲಾಗಿದ್ದ ಅತ್ಮಾವಲೋಕನ ಸಭೆಯಲ್ಲಿ ರೊಚ್ಚಿಗೆದ್ದ ಕಾರ್ಯಕರ್ತರು ತಮ್ಮ ರಾಜ್ಯ ಮಟ್ಟದ ನಾಯಕನ್ನೇ ಓಡಾಡಿಸಿಕೊಂಡು ಹೊಡೆದಿದ್ದಾರೆ.
ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದ್ದು, ಸೋಲಿನಿಂದ ಕುಪಿತರಾಗಿದ್ದ ಬಿಎಸ್ಪಿ ಕಾರ್ಯಕರ್ತರು ತಮ್ಮ ಪಕ್ಷದ ಮಹಾರಾಷ್ಟ್ರ ರಾಜ್ಯ ಕಾರ್ಯದರ್ಶಿ ಸಂದೀಪ್ ತಾಜ್ನೆ ಅವರನ್ನು ಥಳಿಸಿದ್ದಾರೆ. ಸಂದೀಪ್ ಹಾಗೋ ಹೀಗೋ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಗಲಾಟೆಯ ವಿಡಿಯೋ ಇದೀಗ ವೈರಲ್ ಆಗಿದೆ.
#WATCH: A ruckus broke during a review meeting of Bahujan Samaj Party (BSP) in Amravati. #Maharashtra (17 June) pic.twitter.com/S3ut5zNKXv
— ANI (@ANI) June 18, 2019
ಸಂದೀಪ್ ತಾಜ್ನೆ ಅವರು ಚುನಾವಣೆ ಸಮಯದಲ್ಲಿ ನಡೆದಿದ್ದ ಸಮಾವೇಶದಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು, ಅಂತಹ ಪ್ರಮುಖ ಮುಖಂಡನ ವಿರುದ್ಧವೇ ಕಾರ್ಯಕರ್ತರು ಕ್ರೋದಾಗ್ನಿ ಪ್ರದರ್ಶಿಸಿದ್ದಾರೆ.

ಘಟನೆಯ ವಿಡಿಯೋ ಒಂದು ಹರಿದಾಡುತ್ತಿದ್ದು, ಕಾರ್ಯಕರ್ತರು ಮೊದಲಿಗೆ ಸಿಟ್ಟಿನಿಂದ ಮಾತನಾಡಿ ಆ ನಂತರ ಸಂದೀಪ್ ಅವರನ್ನು ಥಳಿಸಲು ಪ್ರಾರಂಭಿಸುತ್ತಾರೆ, ನಂತರ ಕುರ್ಚಿಗಳಿಂದ ಹೊಡೆಯುತ್ತಾರೆ, ಹಾಗೋ-ಹೀಗೋ ಸಂದೀಪ್ ಅವರು ಹರಿದ ಶರ್ಟ್ನಲ್ಲಿಯೇ ಜಾಗ ಬಿಟ್ಟು ಪಲಾಯನ ಮಾಡುತ್ತಾರೆ.
ಮಹಾರಾಷ್ಟ್ರದಲ್ಲಿ ಬಿಎಸ್ಪಿಯ ಪ್ರದರ್ಶನ ತೀವ್ರ ಕುಸಿತವಾಗಿದ್ದು, ಕಳೆದ ಬಾರಿಗಿಂತಲೂ ಅತ್ಯಂತ ಕಡಿಮೆ ಮತ ಈ ಬಾರಿ ಬಿಎಸ್ಪಿಗೆ ಬಂದಿದೆ. ಹಾಗಾಗಿ ಕಾರ್ಯಕರ್ತರು ಇದಕ್ಕೆ ಮುಖಂಡರೇ ಕಾರಣ ಎಂದು ದೂರಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications