ಕಾಡಿನಲ್ಲಿ ಧ್ಯಾನ ಮಾಡಲು ಹೋಗಿ ಚಿರತೆಗೆ ಬಲಿಯಾದ ಬೌದ್ಧ ಬಿಕ್ಕು
ಮುಂಬೈ, ಡಿಸೆಂಬರ್ 13: ಸಂರಕ್ಷಿತ ಅರಣ್ಯವೊಂದರಲ್ಲಿ ಕುಳಿತು ಧ್ಯಾನ ಮಾಡುತ್ತಿದ್ದ ಬೌದ್ಧ ಬಿಕ್ಕು ಚಿರತೆಯ ದಾಳಿಗೆ ಬಲಿಯಾದ ಘಟನೆ ಮಹಾರಾಷ್ಟ್ರದ ರಾಮ್ದೇಗಿಯಲ್ಲಿ ನಡೆದಿದೆ.
ರಾಹುಲ್ ವಾಲ್ಕೆ ಬೋಧಿ (35) ಅವರು ಮಂಗಳವಾರ ಬೆಳಿಗ್ಗೆ ಮರವೊಂದರ ಕೆಳಗೆ ಕುಳಿತು ಧ್ಯಾನ ಮಾಡುತ್ತಿದ್ದರು. ಆಗ ಚಿರತೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಬಳಿಕ ಮೃತಪಟ್ಟರು.
ರಾಹುಲ್ ಅವರೊಂದಿಗೆ ಇನ್ನೂ ಇಬ್ಬರು ಬಿಕ್ಕುಗಳು ಧ್ಯಾನ ನಿರತರಾಗಿದ್ದರು. ಅವರಿಬ್ಬರೂ ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದರು. ಅರಣ್ಯಕ್ಕೆ ಧಾವಿಸಿದ ಪೊಲೀಸರು ರಾಹುಲ್ ಅವರ ದೇಹ ಪತ್ತೆಗೆ ಹುಡುಕಾಟ ನಡೆಸಿದರು.

'ಅವರ ದೇಹವನ್ನು ಚಿರತೆ ಎಳೆದುಕೊಂಡು ಕಾಡಿನ ಒಳಭಾಗಕ್ಕೆ ಒಯ್ಯಲು ಪ್ರಯತ್ನಿಸಿದೆ. ಆಗ ಅವರ ದೇಹ ಅನೇಕ ಕಡೆ ಹರಿದುಹೋಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಕೃಷ್ಣ ತಿವಾರಿ ತಿಳಿಸಿದ್ದಾರೆ.
ಈ ಕಾಡು ಚಿರತೆಗಳ ಸಂರಕ್ಷಿತ ಪ್ರದೇಶವಾಗಿದ್ದು, ಇಲ್ಲಿ ಈ ತಿಂಗಳಿನಲ್ಲಿ ನಡೆದ ಐದನೆಯ ಚಿರತೆ ದಾಳಿ ಇದಾಗಿದೆ.
ವಾರ್ಷಿಕ ಪ್ರಾರ್ಥನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಹುಲ್ ಮತ್ತು ಇತರೆ ಬೌದ್ಧ ಬಿಕ್ಕುಗಳು ಅಲ್ಲಿಗೆ ಆಗಮಿಸಿದ್ದರು. ಕಾಡಿನಲ್ಲಿ ತೀರಾ ಒಳಭಾಗಕ್ಕೆ ಹೋಗದಂತೆ ಸ್ಥಳೀಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ, ಅವರು ಅದನ್ನು ಅಲಕ್ಷಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅರಣ್ಯದ ಹೊರವಲಯದಲ್ಲಿರುವ ತಮ್ಮ ಅಂಗಡಿಯ ಮುಂದೆ ಸಂದೀಪ್ ಅರ್ಜುನ್ ಎಂಬುವವರು ಸೋಮವಾರ ಚಿರತೆ ದಾಳಿಗೆ ಬಲಿಯಾಗಿದ್ದರು. ಇದೇ ಚಿರತೆಯೇ ಅವರ ಮೇಲೆ ದಾಳಿ ನಡೆಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications