ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು, 12 ಮಂದಿ ರಕ್ಷಣೆ
ಮುಂಬೈ, ಜೂನ್ 28: ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ 11.30ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಶೇಷಗಳಿಂದ 12 ಜನರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಬೃಹತ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಘಾಟ್ಕೋಪರ್ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಕರೆತಂದವರ ಪೈಕಿ, ಓರ್ವ ವ್ತಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಸೋಮವಾರ ರಾತ್ರಿ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ತಂಡದಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಅವಲೋಕನ ನಡೆಸಿದರು.

"ಬಿಎಂಸಿ ನೊಟೀಸ್ ನೀಡಿದಾಗ ತಾವಾಗಿಯೇ ಇಂತಹ ಕಟ್ಟಡಗಳಿಂದ ತೆರವುಗೊಳ್ಳಬೇಕು. ಇಲ್ಲದಿದ್ದರೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ, ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವುದು ಮುಖ್ಯ" ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದ್ದಾರೆ.
"ಎಲ್ಲಾ ನಾಲ್ಕು ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ, ಆದರೆ ಜನರು ಅಲ್ಲಿ ವಾಸಿಸುತ್ತಿದ್ದಾರೆ. ಎಲ್ಲರನ್ನೂ ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ, ಈ ಕಟ್ಟಡಗಳ ತೆರವುಗೊಳಿಸುವುದು ಮತ್ತು ನೆಲಸಮ ಮಾಡುವುದರ ಬಗ್ಗೆ ಪರಿಶೀಲನೆ ನಡೆಸುತ್ತೇವೆ, ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುವುದಿಲ್ಲ" ಎಂದು ಅವರು ತಿಳಿಸಿದ್ದಾರೆ.

ಕಟ್ಟಡ ತೆರವು ಮಾಡಲು ನೊಟೀಸ್ ನೀಡಿದ್ದ ಬಿಎಂಸಿ
ಸ್ಥಳೀಯ ಮಾಜಿ ಕಾರ್ಪೊರೇಟರ್ ಪ್ರವೀಣ ಮೊರಜಕರ್ ಮಾತನಾಡಿ, "ಕಟ್ಟಡದ ನಿವಾಸಿಗಳು ಮತ್ತು ಇತರ ಮೂವರಿಗೆ ಕಟ್ಟಡವನ್ನು ತೆರವು ಮಾಡುವಂತೆ ನೋಟಿಸ್ ನೀಡಲಾಗಿತ್ತು, ಆದರೆ ಬಾಡಿಗೆಯಲ್ಲಿದ್ದವರು ಇದಕ್ಕೆ ಅವಕಾಶ ನೀಡಿರಲಿಲ್ಲ. ಕಟ್ಟಡದ ಮಾಲೀಕರು ಯಾರು ಎಂದು ಇನ್ನೂ ತಿಳಿದಿಲ್ಲ," ಎಂದು ಅವರು ಹೇಳಿದರು.
"ಕಟ್ಟಡದಲ್ಲಿ ಸುಮಾರು 21 ಮಂದಿ ಇದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಬದಿ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸಂಪರ್ಕಿತ ರೆಕ್ಕೆ ಕುಸಿಯುವ ಸಾಧ್ಯತೆಯಿದೆ," ಎಂದು ಹೇಳಿದರು.
ಎರಡು ರಕ್ಷಣಾ ವ್ಯಾನ್ಗಳು ಮತ್ತು ಇತರ ಅಗ್ನಿಶಾಮಕ ದಳದ ಉಪಕರಣಗಳೊಂದಿಗೆ ಹನ್ನೆರಡು ಅಗ್ನಿಶಾಮಕ ಎಂಜಿನ್ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications