ಪ್ರಧಾನಿ ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆಗೆ ಹಿನ್ನಡೆ: ಭೂಮಿ ಹಸ್ತಾಂತರಿಸಲು ಥಾಣೆ ಮಹಾನಗರ ಪಾಲಿಕೆ ನಕಾರ
ಮುಂಬೈ, ಡಿಸೆಂಬರ್ 25: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಅಹಮದಾಬಾದ್-ಮುಂಬೈ ನಡುವಿನ ಬುಲೆಟ್ ಟ್ರೈನ್ ಯೋಜನೆಗೆ ಕೊಂಚ ಹಿನ್ನಡೆಯಾಗಿದೆ. ಶಿವಸೇನೆ ನೇತೃತ್ವದ ಥಾಣೆ ಮಹಾನಗರಪಾಲಿಕೆಯು ಭೂಮಿಯನ್ನು ಹಸ್ತಾಂತರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದೆ.
ಕಾಂಜುರ್ಮಾರ್ಗ್ನಲ್ಲಿ ಮುಂಬೈ ಮೆಟ್ರೋ ಯೋಜನೆಗೆ ಭೂಮಿ ಹಂಚಿಕೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಮತ್ತು ಶಿವಸೇನಾ ನೇತೃತ್ವದ ಮಹಾರಾಷ್ಟ್ರ ನಡುವಿನ ವಿವಾದದ ನಡುವೆ ಈ ನಿರ್ಧಾರ ಹೊರಬಿದ್ದಿದೆ.
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿ) 3,800 ಚದರ ಮೀಟರ್ ಭೂಮಿಯನ್ನು ನೀಡುವಂತೆ ಥಾಣೆ ಮಹಾನಗರಪಾಲಿಗೆ ಕೇಳಿಕೊಂಡಿತ್ತು. ಆದರೆ ಬುಧವಾರ ಟಿಎಂಸಿಯ ಸಾಮಾನ್ಯ ಸಂಸ್ಥೆಯ ಸಭೆಯಲ್ಲಿ ತಿರಸ್ಕರಿಸಿದೆ ಎಂದು ಹೇಳಲಾಗಿದೆ.

ಎನ್ಎಚ್ಎಸ್ಆರ್ಸಿ ಟಿಎಂಸಿಗೆ 6 ಕೋಟಿ ರೂ.ಗಳ ಪರಿಹಾರಕ್ಕಾಗಿ ಭೂಮಿಯನ್ನು ಹಸ್ತಾಂತರಿಸುವಂತೆ ಕೋರಿತ್ತು. ಈ ಸಂಬಂಧ ಪ್ರಸ್ತಾವನೆ ಬುಧವಾರ ಐದನೇ ಬಾರಿಗೆ ಸಾಮಾನ್ಯ ಮಂಡಳಿಯ ಮುಂದೆ ಬಂದು ತಿರಸ್ಕರಿಸಲ್ಪಟ್ಟಿತು.
ಮುಂಬೈ ಮೆಟ್ರೊಗೆ ಕಾರ್ ಶೆಡ್ ಇರುವ ಸ್ಥಳವನ್ನು ಪೂರ್ವ ಮುಂಬಯಿಯ ಕಾಂಜುರ್ಮಾರ್ಗ್ಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಆದರೆ ಕೇಂದ್ರ ಸರ್ಕಾರವು ಭೂಮಿ ತನ್ನ ಇಲಾಖೆಗೆ ಸೇರಿದೆ ಎಂದು ಹೈಕೋರ್ಟ್ಗೆ ಮೊರೆ ಹೋಗಿದ್ದು, ಭೂಮಿ ಹಂಚಿಕೆಯನ್ನು ಹೈಕೋರ್ಟ್ ತಡೆಹಿಡಿದಿದೆ.
-
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications