ಸಿದ್ಧಾರ್ಥ ಸಾವು: ಉದ್ಯಮಿಗಳಿಗೆ ಆನಂದ್ ಮಹೀಂದ್ರಾ ಎಚ್ಚರಿಕೆಯ ಮಾತು
ಮುಂಬೈ, ಜುಲೈ 31: 'ಬದುಕಿಬರಬಹುದು' ಎಂದು ಎಲ್ಲೋ ಒಂದು ಕಡೆ ಮಿನುಗುತ್ತಿದ್ದ ಆಸೆ ಕೊನೆಗೂ ಹುಸಿಯಾಗಿದೆ. ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಅವರ ಪಾರ್ಥಿವ ಶರೀರ ಬುಧವಾರ ಬೆಳಗ್ಗಿನ ಜಾವ ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಎಲ್ಲ ಉದ್ಯಮಿಗಳಿಗೂ ಎಚ್ಚರಿಕೆ ಮಾತು ಹೇಳಿದ್ದಾರೆ.
"ನನಗೆ ಅವರ ಪರಿಚಯವಿರಲಿಲ್ಲ. ಅವರ ಹಣಕಾಸಿನ ಸ್ಥಿತಿ ಹೇಗಿತ್ತು ಎಂಬುದೂ ನನಗೆ ಗೊತ್ತಿರಲಿಲ್ಲ. ಆದರೆ ನನಗೆ ಗೊತ್ತಿರುವುದಿಷ್ಟೇ, ಉದ್ಯಮಿಯಾದವನೊಬ್ಬ ತನ್ನ ಉದ್ಯಮದ ವೈಫಲ್ಯದಿಂದ ಆತ್ಮಗೌರವವನ್ನು ನಾಶಮಾಡಿಕೊಳ್ಳುವಂಥ ಕೆಲಸಕ್ಕೆ ಕೈಹಾಕಬಾರದು. ಅದು ವ್ಯಕ್ತಿಯ ಸಾವಲ್ಲ, ಉದ್ಯಮಶೀಲತೆಯ ಸಾವು" ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.
ಕೆಫೆ ಕಾಫಿ ಡೇ ಎಂಬ ಸಾಮ್ರಾಜ್ಯ ಕಟ್ಟಿ ದೇಶ-ವಿದೇಶಗಳಲ್ಲಿ ಭಾರತದ ಕಾಫಿಯ ರುಚಿಯನ್ನು ಪ್ರಸಿದ್ಧಗೊಳಲಿಸಿದ, ಸಾವಿರಾರು ಜನಕ್ಕೆ ಉದ್ಯೋಗ ನೀಡಿದ ಯಶಸ್ವೀ ಉದ್ಯಮಿ ಎನ್ನಿಸಿಕೊಂಡಿದ್ದ ಕನ್ನಡಿಗ ಸಿದ್ಧಾರ್ಥ ಸೋಮವಾರ ಸಂಜೆ ಮಂಗಳೂರಿಗೆ ಪ್ರಯಾಣಿಸುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಇಂದು ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದ್ದು, ಇಂದು ಚಿಕ್ಕಮಗಳೂರಿನಲ್ಲಿ ಪಾರ್ತಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತ್ಯಕ್ರಿಯೆಯೂ ಇಂದು ಮಧ್ಯಾಹ್ನ ಚಿಕ್ಕಮಗಳೂರಿನಲ್ಲಿ ನಡೆಯಲಿದೆ.

ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟದ ತನಿಖೆಯ ಸಾರಾಂಶ. ಅವರು ಇತ್ತೀಚೆಗೆ ತಮ್ಮ ಉದ್ಯೋಗಿಗಳಿಗೆ ಮಾಡಿದ್ದ ಇಮೇಲ್ ಗಳು ಅವರು ಸಾಲದ ಸುಳಿಯಲ್ಲಿ ಸಿಕ್ಕಿ ನರಳುತ್ತಿರುವ ಬಗ್ಗೆ ಸ್ಪಷ್ಟಪಡಿಸಿವೆ. ಆದರೆ 60 ವರ್ಷ ವಯಸ್ಸಿನ ಸಿದ್ಧಾರ್ಥ ಸೋಲಿನಿಂದಾಗಿ ಸಾಯುವ ಮಟ್ಟಕ್ಕೆ ಇಳಿಯುವವರಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರ ಮಾತು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications