ಸಿಎಎ ಕುರಿತು ಜಾಗೃತಿ: ಶಾಲೆಗೆ ನೋಟಿಸ್ ನೀಡಿದ 'ಮಹಾ' ಸರ್ಕಾರ
ಮುಂಬೈ, ಜನವರಿ.13: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಮಹಾರಾಷ್ಟ್ರದಲ್ಲಿ ಸರ್ಕಾರವೇ ಶಾಲಾ ಆಡಳಿತ ಮಂಡಳಿಗೆ ನೋಟಿಸ್ ಜಾರಿಗೊಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಕಿಡಿ ಕಾರಿದ್ದಾರೆ.
ಪೌರತ್ವ ತಿದ್ದುಪಡಿಗೆ ಕೇಂದ್ರ ಸಂಸತ್ ನಲ್ಲಿ ಅನುಮೋದನೆ ದೊರೆತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಂಕಿತ ಸಿಕ್ಕಿದ್ದು ಕಾಯ್ದೆಯಾಗಿ ಮಾರ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವುದು ತಪ್ಪೇ ಎಂದು ಪ್ರಶ್ನೆ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ: ಪ್ರಧಾನಿಗೆ ಪಿ.ಚಿದಂಬರಂ ಡಿಫರೆಂಟ್ ಸಲಹೆ
ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿರುವ ದಯಾನಂದ ಶಾಲೆಯಲ್ಲಿ ಮಕ್ಕಳಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ. ಹೀಗಾಗಿ ಸರ್ಕಾರದ ಶಾಲಾ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ ಎಂದು ಹೇಳಲಾಗುತ್ತಿದೆ.
Its unfortunate Thackeray Sarkar issued Notice to Dayanand School of Mumbai for education program on #CAA , CAA passed by Parliament. President gave assent. Implementation started now. We condemn Maharashtra's Shivsena NCP Congress Govt action @BJP4Maharashtra @BJP4India pic.twitter.com/gNz7b59EHv
— Kirit Somaiya (@KiritSomaiya) January 13, 2020
'ಮಹಾ' ಸರ್ಕಾರದ ನಡೆಗೆ ಖಂಡನೆ:
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿ ಕೇಂದ್ರ ಸಚಿವಾಲಯವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿ ಆಗಿದೆ. ಸಿಎಎಯನ್ನು ಅನುಷ್ಠಾನಗೊಳಿಸಲು ಎಲ್ಲೆಡೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದರೆ, ಮಹಾರಾಷ್ಟ್ರ ಸರ್ಕಾರದ ನಡೆ ಸಂಪೂರ್ಣ ವಿರುದ್ಧವಾಗಿದೆ ಎಂದು ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ವಾಗ್ದಾಳಿ ನಡೆಸಿದ್ದಾರೆ.