ಭಾರತದಲ್ಲಿ ಸುರಕ್ಷತೆಯಿಲ್ಲ, ನಾನು ಬರಲಾರೆ: ನೀರವ್ ಮೋದಿ
ಮುಂಬೈ, ಜನವರಿ 5: ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರಕರಣದ ಪ್ರಮುಖ ಆರೋಪಿ, ವಜ್ರ ವ್ಯಾಪಾರಿ ನೀರವ್ ಮೋದಿ, ಸುರಕ್ಷತೆಯ ಕಾರಣದಿಂದ ಭಾರತಕ್ಕೆ ಮರಳಲು ಸಾಧ್ಯವಿಲ್ಲ ಎಂದು ಮುಂಬೈ ನ್ಯಾಯಾಲಯಕ್ಕೆ ಶನಿವಾರ ತಿಳಿಸಿದ್ದಾರೆ.
ಅಲ್ಲದೆ, ತಮ್ಮ ಪ್ರಕರಣವನ್ನು ರಾಜಕೀಯಕರಣಗೊಳಿಸಲಾಗದಿದೆ ಎಂದೂ ಅವರು ಆರೋಪಿಸಿದ್ದಾರೆ.
ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ (ಎಫ್ಇಒಎ) ನೀರವ್ ಮೋದಿ ಅವರನ್ನು ದೇಶಭ್ರಷ್ಟ ಎಂದು ಘೋಷಿಸುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕೋರಿ ಸಲ್ಲಿಸಿರುವ ಅರ್ಜಿಗೆ ನೀರವ್ ಮೋದಿ ಪರ ವಕೀಲರು ಪ್ರತಿಕ್ರಿಯೆ ಸಲ್ಲಿಸಿದ್ದಾರೆ.

ತಮ್ಮ ಭಾವಚಿತ್ರಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇದರಿಂದ ತಮ್ಮ ಮೇಲೆ ಹಿಂಸಾತ್ಮಕ ಬೆದರಿಕೆಗಳಿವೆ. ಸುರಕ್ಷತೆಯ ಕುರಿತು ಭಯವಿದೆ. ಎಲ್ಲ ರಾಜಕೀಯ ಪಕ್ಷಗಳು ನೀಡಿರುವ ಹೇಳಿಕೆಗಳು ತಾವು ತಪ್ಪಿತಸ್ಥನೆಂದು ಅವರೇ ತೀರ್ಪು ಕೊಟ್ಟಂತಿವೆ. ತಮ್ಮ ಪ್ರಕರಣವನ್ನು ರಾಜಕೀಯ ಕಾರಣಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ನೀರವ್ ಅಭಿಪ್ರಾಯಪಟ್ಟಿದ್ದಾರೆ.
ಇ.ಡಿ,ಯು ತಮ್ಮ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳ ಆಧಾರದಲ್ಲಿ ಸುಳ್ಳು ಮೊಕದ್ದಮೆಯನ್ನು ದಾಖಲಿಸಲು ಪ್ರಯತ್ನಿಸಿತ್ತು. ಇ.ಡಿ.ಯ ಸಮನ್ಸ್ಗಳಿಗೆ ಸೂಕ್ತ ಉತ್ತರ ನೀಡಲಾಗಿತ್ತು ಎಂದು ವಿವರಿಸಿದ್ದಾರೆ.
ಮೂರು ಬಾರಿ ಸಮನ್ಸ್ ನೀಡಿದ್ದರೂ ಅದಕ್ಕೆ ನೀರವ್ ಮೋದಿ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಇ.ಡಿ. ಕೋರ್ಟ್ಗೆ ತಿಳಿಸಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications