ಗೆಳತಿ ಮೇಲೆ ಹಲ್ಲೆ ಮಾಡಿದ ಬಿಗ್ ಬಾಸ್ ಖ್ಯಾತಿಯ ನಟ!
ಮುಂಬೈ, ಜೂನ್ 05: ತನ್ನ ಉಗ್ರ ಕೋಪದ ಮೂಲಕವೇ ಕುಖ್ಯಾತಿ ಗಳಿಸಿದ್ದ ಬಿಗ್ ಬಾಸ್ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ, ನಟ ಅರ್ಮಾನ್ ಕೊಹ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಕೊಹ್ಲಿ ಅವರು ತಮ್ಮ ಗರ್ಲ್ ಫ್ರೆಂಡ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗರ್ಲ್ ಫ್ರೆಂಡ್ ಮೇಲೆ ದೈಹಿಕ ಹಲ್ಲೆ ನಡೆಸಿದ 'ಬಿಗ್ ಬಾಸ್' ಸ್ಪರ್ಧಿ
ಅರ್ಮಾನ್ ಕೋಪಕ್ಕೆ ತುತ್ತಾಗಿರುವ ಗೆಳತಿ ಮೀನು ರಂದಾವಾ ಅವರು ಸದ್ಯ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಿತ್ತಾಟ, ಹೊಡೆದಾಟ, ಹಲ್ಲೆ ಮಾಡುವುದು ಅರ್ಮಾನ್ ಗೆ ಸಾಮಾನ್ಯ ಸಂಗತಿಯಾಗಿದ್ದು, ಈ ಹಿಂದೆ ಕೂಡಾ ಈ ರೀತಿ ಅನೇಕ ಪ್ರಕರಣಗಳು ಬೆಳಕಿಗೆ ಬಂದಿತ್ತು.

2015ರಿಂದ ಇಬ್ಬರು ಲಿವ್ ಇನ್ ಸಂಬಂಧದಲ್ಲಿದ್ದಾರೆ. ಆರ್ಥಿಕ ವ್ಯವಹಾರಕ್ಕೆ ಕುರಿತಂತೆ ಇಬ್ಬರಿಗೂ ಜೋರು ಜಗಳವಾಗಿದೆ. ಈ ಸಂದರ್ಭದಲ್ಲಿ ಸಿಟ್ಟಿನಿಂದ ಮೀನು ಮೇಲೆ ಅರ್ಮಾನ್ ಹಲ್ಲೆ ಮಾಡಿದ್ದಾರೆ.
2014: ಲೈಂಗಿಕ ಕಿರುಕುಳ : ನಟ ಅರ್ಮಾನ್ ಕೊಹ್ಲಿ ಬಂಧನ
'ನನ್ನ ತಲೆ ಕೂದಲು ಹಿಡಿದು, ಮಹಡಿ ಮೇಲಿಂದ ಕೆಳಗೆ ದೂಡಿದ್ದಾನೆ, ನನ್ನ ಮೇಲೆ ಹಲ್ಲೆ ಮಾಡಿ, ನಿಂದಿಸಿದ್ದಾನೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಆತನ ವಿರುದ್ಧ ಕ್ರಮ ಜರುಗಿಸಿ' ಎಂದು ಫ್ಯಾಷನ್ ವಿನ್ಯಾಸಕಿ ಮೀನು ರಾಂದವಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿರುವ ಸಾಂತಾ ಕ್ರೋಜ್ ಪೊಲೀಸರು, ಐಪಿಸಿ ಸೆಕ್ಷನ್ 323, 326,504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಅರ್ಮಾನ್ ಅವರು ಮೀನು ಅವರಿಗೂ ಮುನ್ನ ಅಲ್ಲ. 2008ರಲ್ಲಿ ಮುನ್ಮುನ್ ಜೊತೆ ಸಂಬಂಧ ಹೊಂದಿದ್ದರು ನಂತರ. 2013ರಲ್ಲಿ ಬಿಗ್ ಬಾಸ್ ಮನೆಯಲ್ಲಿ ನಟಿ ಕಾಜೋಲ್ ಸಹೋದರಿ ತನೀಶಾ ಮುಖರ್ಜಿ ಜೊತೆ ಸ್ನೇಹ ಬೆಳೆಸಿದ್ದರು. ಆದರೆ, ಒಂದು ವರ್ಷದಲ್ಲೇ ಈ ಸಂಬಂಧ ಮುರಿದು ಬಿದ್ದಿತು. ಪ್ರೇಮ್ ರತನ್ ಧನ್ ಪಾಯೋ ಚಿತ್ರದ ಸಂದರ್ಭದಲ್ಲಿ ಮೀನು ಹಾಗೂ ಅರ್ಮಾನ್ ನಡುವೆ ಗೆಳೆತನ ಬೆಳೆಯಿತು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications