ವಿಡಿಯೋ ː ಅಂಬೋಲಿ ಘಾಟಿನಲ್ಲಿ ಪ್ರಪಾತಕ್ಕೆ ಹಾರಿದ ಯುವಕರು
ಮುಂಬೈ, ಆಗಸ್ಟ್ 04: ಇಬ್ಬರು ಯುವಕರು ಮಹಾರಾಷ್ಟ್ರದ ಅಂಬೋಲಿ ಘಾಟ್ ನ ಕವಲೆ ಪಾಯಿಂಟ್ ನಿಂದ ಪ್ರಪಾತಕ್ಕೆ ಹಾರುವ ದೃಶ್ಯಾವಳಿ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರಪಾತ ವೀಕ್ಷಣೆ, ಪರಿಸರ ವೀಕ್ಷಣೆಗಾಗಿ ನಿಂತಿದ್ದ ಇಬ್ಬರು ಯುವಕರು ಮೇಲಿಂದ ಹಾರಿ ಸುಮಾರು 2000 ಅಡಿ ಪ್ರಪಾತಕ್ಕೆ ಬಿದ್ದಿದ್ದಾರೆ. ಆದರೆ, ಇದು ಆಕಸ್ಮಿಕವೋ, ಆತ್ಮಹತ್ಯೆಯೋ ತಿಳಿದು ಬಂದಿಲ್ಲ. ಪಿಕ್ನಿಕ್ ಗಾಗಿ ಗೆಳೆಯರೊಡನೆ ಬಂದಿದ್ದವರು ಈ ರೀತಿ ಮಾಡಿಕೊಂಡಿದ್ದಾರೆ.

ಅಂಬೋಲಿ ಘಾಟ್ ನ ಕವಲೆ ಸಾದ್ ಪಾಯಿಂಟ್ ನಲ್ಲಿ ಆಗಸ್ಟ್ 01 ರಂದು ಈ ಘಟನೆ ನಡೆದಿದ್ದು, ಮೃತಪಟ್ಟವರನ್ನು ಇಮ್ರಾನ್ ಗರಡಿ(26) ಹಾಗೂ ಪ್ರತಾಪ್ ರಾಥೋಡ್ (21) ಎಂದು ಗುರುತಿಸಲಾಗಿದೆ.
ಕಣಿವೆ ಪ್ರದೇಶದಲ್ಲಿ ಪಿಕ್ನಿಕ್ ಗಾಗಿ ಏಳು ಜನರ ತಂಡ ಬಂದಿತ್ತು. ಇವರೆಲ್ಲರೂ ಕೊಲ್ಹಾಪುರದ ಪೌಲ್ಟ್ರಿ ಫಾರ್ಮ್ ನಲ್ಲಿ ಕೆಲಸ ಮಾಡುವವರು ಎಂದು ಸವಂತವಾಡಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಸುನಿಲ್ ಧನಾವಾಡೆ ಹೇಳಿದ್ದಾರೆ.
ಮೃತಪಟ್ಟವರ ಶವ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಸ್ಥಳೀಯರು, ನುರಿತ ಟ್ರೆಕ್ಕರ್ಸ್ ನೆರವು ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಸುನಿಲ್ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications