ತೀಸ್ತಾ ಸೆಟಲ್ವಾಡ್ ಎನ್ ಜಿಒ ವಿರುದ್ಧ ಚಾರ್ಜ್ ಶೀಟ್
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ವಿರುದ್ಧ ಸಿಬಿಐ ತಂಡ ಚಾರ್ಜ್ ಶೀಟ್ ಸಲ್ಲಿಸಿದೆ. ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ಲೈಸನ್ಸ್ ರದ್ದುಗೊಳಿಸಿದೆ
ಮುಂಬೈ, ಜನವರಿ 03: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ವಿರುದ್ಧ ಸಿಬಿಐ ತಂಡ ಚಾರ್ಜ್ ಶೀಟ್ ಸಲ್ಲಿಸಿದೆ. ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ಲೈಸನ್ಸ್ ರದ್ದುಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಸಂಗ್ರಹಿಸಿದ ಆರೋಪವನ್ನು ತೀಸ್ತಾ ಅವರು ಎದುರಿಸುತ್ತಿದ್ದಾರೆ.
ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ವಿರುದ್ಧ ಅಕ್ರಮ ದೇಣಿಗೆ ಸಂಗ್ರಹ ಆರೋಪ ಹೊರೆಸಿ ಎಫ್ ಸಿಆರ್ ಎ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಅಧಿಕೃತ ದೂರನ್ನು ನೀಡಿತ್ತು. ತನಿಖೆ ಆರಂಭಿಸಿದ ಸಿಬಿಐ, ಎನ್ ಜಿಒ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ದೋಷಾರೋಪಣ ಪಟ್ಟಿ ಸಿದ್ಧಪಡಿಸಿದೆ.[ಸೆಟಲ್ವಾಡ್ ಅವರ ಎನ್ ಜಿಒ ಲೈಸನ್ಸ್ ರದ್ದು]

ಎಫ್ ಸಿಆರ್ ಎ ಸೆಕ್ಷನ್ 8(1) ಕಾಯ್ಡೆ ಉಲ್ಲಂಘನೆ ಹೊತ್ತಿರುವ ಸಭ್ರಂಗ್ ಟ್ರಸ್ಟ್ ಗೆ ಬಂದಿರುವ ವಿದೇಶಿ ದೇಣಿಗೆಯನ್ನು ದುರ್ಬಳಕೆ ಮಾಡಿದ ಆರೋಪ ಹೊತ್ತಿದ್ದಾರೆ. ನಿಯಮದ ಪ್ರಕಾರ ದೇಣಿಗೆ ಮೊತ್ತದ ಶೇ 50ರಷ್ಟು ಮಾತ್ರ ಆಡಳಿತಾತ್ಮಕ ನಿರ್ವಹಣಾ ವೆಚ್ಚವಾಗಿ ಖರ್ಚು ಮಾಡಬಹುದಾಗಿದೆ.
ತೀಸ್ತಾ ವಿರುದ್ಧ ಪ್ರಕರಣಗಳು: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಹಾಗೂ ಆಕೆ ಪತಿ ಜಾವೇದ್ ಆನಂದ್ ವಿರುದ್ಧ ಎಫ್ ಸಿಆರ್ ಎ ಉಲ್ಲಂಘನೆ ಆರೋಪಿಸಿ ಪ್ರಕರಣ ದಾಖಲಾಗಿದೆ. ಉದ್ಯಮಿ ಗುಲಾಂ ಮೊಹಮ್ಮದ್ ಹಾಗೂ ಎನ್ ಜಿಎಒ ಸಭ್ರಂಗ್ ಕಮ್ಯೂನಿಕೇಷನ್ ವಿರುದ್ಧ ಕೂಡಾ ಪ್ರಕರಣ ಬುಕ್ ಆಗಿದೆ.
ಸಭ್ರಂಗ್ ಟ್ರಸ್ಟಿಗೆ ವಿದೇಶದಿಂದ ಸುಮಾರು 1 ಕೋಟಿ ರು ಗೂ ಅಧಿಕ ದೇಣಿಗೆ ಬಂದಿದ್ದು ಇದನ್ನು ಎನ್ ಜಿಒನ ಇತರೆ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಈ ಬಗ್ಗೆ ಗುಜರಾತ್ ಸರ್ಕಾರ ಈ ಹಿಂದೆ ಆರೋಪ ಹೊರೆಸಿತ್ತು.ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ಗೃಹ ಸಚಿವಾಲಯ ವಹಿಸಿತ್ತು. (ಒನ್ಇಂಡಿಯಾ ಸುದ್ದಿ)
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications