ತೀಸ್ತಾ ಸೆಟಲ್ವಾಡ್ ಎನ್ ಜಿಒ ವಿರುದ್ಧ ಚಾರ್ಜ್ ಶೀಟ್
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ವಿರುದ್ಧ ಸಿಬಿಐ ತಂಡ ಚಾರ್ಜ್ ಶೀಟ್ ಸಲ್ಲಿಸಿದೆ. ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ಲೈಸನ್ಸ್ ರದ್ದುಗೊಳಿಸಿದೆ
ಮುಂಬೈ, ಜನವರಿ 03: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ವಿರುದ್ಧ ಸಿಬಿಐ ತಂಡ ಚಾರ್ಜ್ ಶೀಟ್ ಸಲ್ಲಿಸಿದೆ. ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ಲೈಸನ್ಸ್ ರದ್ದುಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಸಂಗ್ರಹಿಸಿದ ಆರೋಪವನ್ನು ತೀಸ್ತಾ ಅವರು ಎದುರಿಸುತ್ತಿದ್ದಾರೆ.
ಸಭ್ರಂಗ್ ಟ್ರಸ್ಟ್ ಸರ್ಕಾರೇತರ ಸಂಸ್ಥೆ ವಿರುದ್ಧ ಅಕ್ರಮ ದೇಣಿಗೆ ಸಂಗ್ರಹ ಆರೋಪ ಹೊರೆಸಿ ಎಫ್ ಸಿಆರ್ ಎ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಅಧಿಕೃತ ದೂರನ್ನು ನೀಡಿತ್ತು. ತನಿಖೆ ಆರಂಭಿಸಿದ ಸಿಬಿಐ, ಎನ್ ಜಿಒ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ದೋಷಾರೋಪಣ ಪಟ್ಟಿ ಸಿದ್ಧಪಡಿಸಿದೆ.[ಸೆಟಲ್ವಾಡ್ ಅವರ ಎನ್ ಜಿಒ ಲೈಸನ್ಸ್ ರದ್ದು]

ಎಫ್ ಸಿಆರ್ ಎ ಸೆಕ್ಷನ್ 8(1) ಕಾಯ್ಡೆ ಉಲ್ಲಂಘನೆ ಹೊತ್ತಿರುವ ಸಭ್ರಂಗ್ ಟ್ರಸ್ಟ್ ಗೆ ಬಂದಿರುವ ವಿದೇಶಿ ದೇಣಿಗೆಯನ್ನು ದುರ್ಬಳಕೆ ಮಾಡಿದ ಆರೋಪ ಹೊತ್ತಿದ್ದಾರೆ. ನಿಯಮದ ಪ್ರಕಾರ ದೇಣಿಗೆ ಮೊತ್ತದ ಶೇ 50ರಷ್ಟು ಮಾತ್ರ ಆಡಳಿತಾತ್ಮಕ ನಿರ್ವಹಣಾ ವೆಚ್ಚವಾಗಿ ಖರ್ಚು ಮಾಡಬಹುದಾಗಿದೆ.
ತೀಸ್ತಾ ವಿರುದ್ಧ ಪ್ರಕರಣಗಳು: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಹಾಗೂ ಆಕೆ ಪತಿ ಜಾವೇದ್ ಆನಂದ್ ವಿರುದ್ಧ ಎಫ್ ಸಿಆರ್ ಎ ಉಲ್ಲಂಘನೆ ಆರೋಪಿಸಿ ಪ್ರಕರಣ ದಾಖಲಾಗಿದೆ. ಉದ್ಯಮಿ ಗುಲಾಂ ಮೊಹಮ್ಮದ್ ಹಾಗೂ ಎನ್ ಜಿಎಒ ಸಭ್ರಂಗ್ ಕಮ್ಯೂನಿಕೇಷನ್ ವಿರುದ್ಧ ಕೂಡಾ ಪ್ರಕರಣ ಬುಕ್ ಆಗಿದೆ.
ಸಭ್ರಂಗ್ ಟ್ರಸ್ಟಿಗೆ ವಿದೇಶದಿಂದ ಸುಮಾರು 1 ಕೋಟಿ ರು ಗೂ ಅಧಿಕ ದೇಣಿಗೆ ಬಂದಿದ್ದು ಇದನ್ನು ಎನ್ ಜಿಒನ ಇತರೆ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಈ ಬಗ್ಗೆ ಗುಜರಾತ್ ಸರ್ಕಾರ ಈ ಹಿಂದೆ ಆರೋಪ ಹೊರೆಸಿತ್ತು.ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ಗೃಹ ಸಚಿವಾಲಯ ವಹಿಸಿತ್ತು. (ಒನ್ಇಂಡಿಯಾ ಸುದ್ದಿ)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications