ಇಂಡೋನೇಷಿಯಾದಿಂದ 'ಛೋಟಾ' ಇಂಡಿಯಾಕ್ಕೆ: ಸಿಬಿಐ
ಮುಂಬೈ, ನ.01: ಇಂಡೋನೇಷಿಯಾ ಪೊಲೀಸರ ವಶದಲ್ಲಿರುವ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ಛೋಟಾ ರಾಜನ್ ನನ್ನು ಭಾರತಕ್ಕೆ ಕರೆ ತರುವ ಪ್ರಕ್ರಿಯೆಗೆ ಸಿಬಿಐ ಚಾಲನೆ ನೀಡಿದೆ. ಬಾಲಿ ದ್ವೀಪಕ್ಕೆ ಭಾರತದಿಂದ ಸಿಬಿಐ ತಂಡ ತೆರಳಿದ್ದು, ರಾಜನ್ ನನ್ನು ಕರೆ ತರಲು ಬೇಕಾಗುವ ಕಡತಗಳನ್ನು ಸಿದ್ಧಪಡಿಸಿಕೊಂಡಿದೆ.
ಸಿಬಿಐ ಮುಂಬೈ ಹಾಗೂ ದೆಹಲಿ ಪೊಲೀಸ್ ಅಧಿಕಾರಿಗಳಿಂದ ಕೂಡಿದ ಜಂಟಿ ತಂಡ ಭಾನುವಾರ ಇಂಡೋನೇಷಿಯಾಗೆ ತೆರಳಿದೆ. ಸೋಮವಾರದಂದು ಭಾರತೀಯ ದೂತಾವಾಸದ ಅಧಿಕಾರಿಗಳನ್ನು ಭೇಟಿ ಈ ಬಗ್ಗೆ ಮಾತುಕತೆ ನಡೆಸಲಿದೆ.
55 ವರ್ಷ ವಯಸ್ಸಿನ ಛೋಟಾರಾಜನ್ನೊಂದಿಗೆ ಇಂಡೋನೇಷಿಯಾದಲ್ಲಿರುವ ಭಾರತೀಯ ದೂತಾವಾಸದ ಅಧಿಕಾರಿ ಸಂಜೀವ್ ಅಗರವಾಲ್ ಅವರು 45ಕ್ಕೂ ಹೆಚ್ಚು ನಿಮಿಷಗಳು ಮಾತನಾಡಿದ್ದಾರೆ. [ಛೋಟಾ ರಾಜನ್ : ಡಾನ್ ಆಗಿದ್ದು ಹೇಗೆ?]

ರಾಜನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಯಾವ ಷರತ್ತುಗಳನ್ನು ಇಂಡೋನೇಷಿಯಾ ವಿಧಿಸಲಿದೆ ಎಂಬುದರ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಕಾನೂನು ಪ್ರಕ್ರಿಯೆ ಮುಗಿದ ಬಳಿಕ ರಾಜನ್ ನನ್ನು ನೇರವಾಗಿ ಮುಂಬೈಯ ವಿಶೇಷ ತನಿಖಾ ಕೇಂದ್ರಕ್ಕೆ ಕರೆದೊಯ್ಯಲಾಗುತ್ತದೆ. [ಭಾರತಕ್ಕೆ ಹೋದ್ರೆ ನಾನು ಫಿನಿಷ್: ರಾಜನ್]
ಕೊಲೆ, ಸುಲಿಗೆ, ಬೆದರಿಕೆ, ಬಾಂಬ್ ಸ್ಫೋಟದ ಸಂಚು ಸೇರಿದಂತೆ ರಾಜನ್ ವಿರುದ್ಧ ಮುಂಬೈ ಪೊಲೀಸರು 75ಕ್ಕೂ ಅಧಿಕ ಕೇಸುಗಳನ್ನು ದಾಖಲಿಸಿದ್ದಾರೆ.ದೆಹಲಿ ಪೊಲೀಸರು 6 ಪ್ರಮುಖ ಪ್ರಕರಣಗಳಲ್ಲಿ ರಾಜನ್ ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಛೋಟಾ ರಾಜನ್ ನಂತರ 1993ರ ಮುಂಬೈ ಸರಣಿ ಸ್ಫೋಟದ ಆರೋಪಿ ದಾವೂದ್ ಇಬ್ರಾಹಿಂ ನಮ್ಮ ಟಾರ್ಗೆಟ್ ಎಂದು ಸಚಿವ ಕೀರೆನ್ ಹೇಳಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿ ಅಡಗಿ ಕುಳಿತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡ ಛೋಟಾ ರಾಜನ್ ರೀತಿಯಲ್ಲೇ ಬಂಧಿಸಿ ಭಾರತಕ್ಕೆ ಕರೆತರಲಾಗುವುದು ಎಂದಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications