ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಮನೆ ಮೇಲೆ ಸಿಬಿಐ ದಾಳಿ
ಮುಂಬೈ, ಜುಲೈ 14: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ತಂಡ ಮಂಗಳವಾರ ದಾಳಿ ನಡೆಸಿ ಹಲವಾರು ಕಡತಗಳನ್ನು ವಶಪಡಿಸಿಕೊಂಡಿದೆ. ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಸಂಗ್ರಹಿಸಿದ ಆರೋಪವನ್ನು ತೀಸ್ತಾ ಅವರು ಎದುರಿಸುತ್ತಿದ್ದಾರೆ.
ವಿದೇಶಿ ಮೂಲಗಳ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ ಸಿಆರ್ಎ) ಉಲ್ಲಂಘನೆ ಮಾಡಿರುವ ತೀಸ್ತಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಿಬಿಐ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ದಾಳಿಗಳನ್ನು ನಡೆಸಲು ಸಿಬಿಐ ತಂಡ ಮುಂದಾಗಿದೆ. ನಿಯಮ ಉಲ್ಲಂಘಿಸಿದ ತೀಸ್ತಾ ಅವರ ಮೇಲಿನ ಆರೋಪ ಸಾಬೀತುಪಡಿಸಲು ಕೆಲ ದಾಖಲೆಗಳು ಬೇಕಾಗಿದೆ. ಈ ಸಂಬಂಧ ದಾಳಿ ನಡೆಸಲಾಗುತ್ತಿದೆ.

ತೀಸ್ತಾ ಅವರಿಂದ ಖಂಡನೆ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಸಂಪೂರ್ಣ ಸಹಕಾರ ನೀಡಲು ಸಿದ್ಧ ಎಂದು ಪತ್ರ ಬರೆದಿದ್ದೆ. ಅದರೂ ಸುಮಾರು 15-16 ಜನ ಅಧಿಕಾರಿಗಳು ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಏಕೆ ಎಂದು ತೀಸ್ತಾ ಪ್ರಶ್ನಿಸಿದ್ದಾರೆ.
ವ್ಯಾಪಂ ಹಗರಣದಲ್ಲಿ 60 ಮಂದಿ ಬಲಿಯಾಗಿದ್ದಾರೆ, ಆದರೆ ಸಿಬಿಐ ನನ್ನ ನಿವಾಸ, ಕಚೇರಿ ಮೇಲೆ ದಾಳಿ ನಡೆಸುತ್ತಿರುವುದು ಪೂರ್ವಾಗ್ರಜ ಪೀಡಿತ ಬಿಜೆಪಿ ಸರ್ಕಾರದ ಕ್ರಮಕ್ಕೆ ಧಿಕ್ಕಾರ ಎಂದಿದ್ದಾರೆ.
ತೀಸ್ತಾ ಅವರ ಸರ್ಕಾರೇತರ ಸಂಸ್ಥೆ ಸಬ್ರಂಗ್ ಕಮ್ಯೂನಿಕೇಷನ್ ಅಂಡ್ ಪಬ್ಲೀಶಿಂಗ್ ಪ್ರೈ ಲಿ ನ ಬ್ಯಾಂಕ್ ಖಾತೆ ವಿವರಗಳನ್ನು ಸಿಬಿಐ ಕಲೆ ಹಾಕುತ್ತಿದೆ. 2006-07 ರಿಂದ 201-15ರ ತನಕ ಬ್ಯಾಂಕ್ ಖಾತೆಗೆ ಬಂದಿರುವ ದೇಣಿಗೆ ಮೊತ್ತದ ಲೆಕ್ಕಾಚಾರ ನಡೆಸಲಾಗುತ್ತಿದೆ.
ತೀಸ್ತಾ ವಿರುದ್ಧ ಪ್ರಕರಣಗಳು:
ಐದು ದಿನಗಳ ಹಿಂದೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಹಾಗೂ ಆಕೆ ಪತಿ ಜಾವೇದ್ ಆನಂದ್ ವಿರುದ್ಧ ಎಫ್ ಸಿಆರ್ ಎ ಉಲ್ಲಂಘನೆ ಆರೋಪಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉದ್ಯಮಿ ಗುಲಾಂ ಮೊಹಮ್ಮದ್ ಹಾಗೂ ಎನ್ ಜಿಎಒ ಸಭ್ರಂಗ್ ಕಮ್ಯೂನಿಕೇಷನ್ ವಿರುದ್ಧ ಕೂಡಾ ಪ್ರಕರಣ ಬುಕ್ ಆಗಿದೆ. [ಲಾಟರಿ ಹಗರಣದ ತನಿಖೆ ಸಿಬಿಐ ನಡೆಸೋಲ್ಲ?]
ಸಭ್ರಂಗ್ ಟ್ರಸ್ಟಿಗೆ ವಿದೇಶದಿಂದ ಸುಮಾರು 1 ಕೋಟಿ ರು ಗೂ ಅಧಿಕ ದೇಣಿಗೆ ಬಂದಿದ್ದು ಇದನ್ನು ಎನ್ ಜಿಒನ ಇತರೆ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಈ ಬಗ್ಗೆ ಗುಜರಾತ್ ಸರ್ಕಾರ ಈ ಹಿಂದೆ ಆರೋಪ ಹೊರೆಸಿತ್ತು.ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ಗೃಹ ಸಚಿವಾಲಯ ವಹಿಸಿತ್ತು. (ಒನ್ ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications