ಟ್ರಂಪ್ ಎದುರು ಗುಲಾಮಗಿರಿ ಮನಸ್ಥಿತಿ ಪ್ರದರ್ಶಿಸಿದರಾ ಪ್ರಧಾನಿ ಮೋದಿ?
ಮುಂಬೈ, ಫೆಬ್ರವರಿ.17: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನಕ್ಕೆ ಭಾರತದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಗಮನಿಸಿದಾಗ ಕೇಂದ್ರ ಸರ್ಕಾರದ ಗುಲಾಮಗಿರಿ ಮನಸ್ಥಿತಿಯ ಅರಿವಾಗುತ್ತದೆ ಎಂದು ಶಿವಸೇನೆ ಕಿಡಿ ಕಾರಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವರದಿಯೊಂದು ಪ್ರಕಟವಾಗಿದೆ. ಡೊನಾಲ್ಡ್ ಟ್ರಂಪ್ ರನ್ನು 'ಬಾದ್ ಶಾ' ರೀತಿಯಲ್ಲಿ ಬಿಂಬಿಸಲಾಗುತ್ತಿದ್ದು ಭಾರತೀಯರನ್ನು ಗುಲಾಮರಂತೆ ತೋರಿಸಲು ಸರ್ಕಾರ ಮುಂದಾಗಿದೆ ಎಂದು ದೂಷಿಸಲಾಗಿದೆ.
ಫೆಬ್ರವರಿ.24ರಂದು ಅಹ್ಮದಾಬಾದ್ ನ ಸಬರ್ ಮತಿ ಆಶ್ರಮಕ್ಕೆ ಡೊನೊಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಂತರದ ನಡೆಯುವ ರೋಡ್ ಶೋ ನಲ್ಲಿ ಇಬ್ಬರೂ ನಾಯಕರು ಒಟ್ಟಾಗಿ ಸಾಗಲಿದ್ದು, ಬಳಿಕ ಕೆಮ್ ಛೋ ಟ್ರಂಪ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಜಕೀಯ ಲೆಕ್ಕಾಚಾರ ಎಂದು ದೂಷಿಸಿದ ಶಿವಸೇನೆ
ಇನ್ನು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಹಿಂದೆ ರಾಜಕೀಯ ಲೆಕ್ಕಾಚಾರ ಅಡಗಿದೆ ಎಂದು ಶಿವಸೇನೆ ಆರೋಪಿಸಿದೆ. ಕಳೆದ ವರ್ಷ ಅಮೆರಿಕಾದಲ್ಲಿ ಹೌಡಿ ಮೋದಿ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಅದೇ ತರನಾದ ಕಾರ್ಯಕ್ರಮವನ್ನು ಅಹ್ಮದಾಬಾದ್ ನಲ್ಲಿ ಈಗ ಆಯೋಜಿಸಲಾಗಿದೆ. "ಕೆಮ್ ಛೋ ಟ್ರಂಪ್" ಕಾರ್ಯಕ್ರಮ ಆಯೋಜಿಸಿದ್ದು, ಗುಜರಾತಿಯಲ್ಲಿ ಕೆಮ್ ಛೋ ಟ್ರಂಪ್ ಎಂದರೆ "How Are You Trump" ಎಂಬ ಅರ್ಥ ಬರುತ್ತದೆ.

ಗರೀಬಿ ಹಟಾವೋ ಅಲ್ಲ, ಇದು ಗರೀಬಿ ಚುಪಾವೋ ನೀತಿ
ದೇಶವನ್ನು ಆಳಿದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಗರೀಬಿ ಹಟಾವೋ ಎಂಬ ಘೋಷಣೆಯೊಂದಿಗೆ ಬಡತನವನ್ನು ಓಡಿಸಲು ಪಣ ತೊಟ್ಟಿದ್ದರು. ಆದರೆ, ಈಗಿನ ಸರ್ಕಾರದಲ್ಲಿ ಎಲ್ಲವೂ ಉಲ್ಟಾ-ಪಲ್ಟಾ ಆಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಗರೀಬಿ ಚುಪಾವೋ ನೀತಿ ಅನುಸರಿಸುತ್ತಿದ್ದಾರೆ. ಹೀಗಾಗಿ ಬಡತನವನ್ನು ಬಡವರನ್ನು ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಾಮ್ನಾದಲ್ಲಿ ಆರೋಪಿಸಲಾಗಿದೆ.

ಟ್ರಂಪ್ ನೀಡುವ 3 ಗಂಟೆಯ ಭೇಟಿಗೆ 100 ಕೋಟಿ ಖರ್ಚು
ಭಾರತದಲ್ಲಿ ಗೋಡೆ ನಿರ್ಮಾಣಕ್ಕೆ ಎಂದು ಅಮೆರಿಕಾ ಸರ್ಕಾರವೇನಾದರೂ ಅನುದಾನವನ್ನು ನೀಡಿದೆಯಾ ಹೇಗೆ. ಅಧ್ಯಕ್ಷ ಡೊನೊಲ್ಡ್ ಟ್ರಂಪ್ ಅಹ್ಮದಾಬಾದ್ ಭೇಟಿ ನೀಡುವುದೇ ಕನಿಷ್ಠ 3 ಗಂಟೆ. ಈ 3 ಗಂಟೆಯ ಭೇಟಿಗಾಗಿ ಬರೋಬ್ಬರಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಗೋಡೆ ನಿರ್ಮಾಣ ಮಾಡುವ ಅಗತ್ಯವಾದರೂ ಏನಿತ್ತು ಎಂದು ಶಿವಸೇನೆ ಪ್ರಶ್ನೆ ಮಾಡಿದೆ.

ಸ್ಲಂಗಳ ಸುತ್ತಲೂ 4 ಅಡಿ ಎತ್ತರದ ಗೋಡೆ ನಿರ್ಮಾಣ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಜರಾತ್ ಭೇಟಿಯ ದಿನಾಂಕ ನಿಗದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರವು ಎಚ್ಚೆತ್ತುಕೊಂಡಿತು. ಅಹ್ಮದಾಬಾದ್ ನ ಸ್ಲಂಗಳ ಸುತ್ತಲೂ 4 ಅಡಿ ಎತ್ತರದ ಬೃಹತ್ ಗೋಡೆಯನ್ನು ಅಹ್ಮದಾಬಾದ್ ಮಹಾನಗರ ಪಾಲಿಕೆಯೇ ನಿರ್ಮಾಣ ಮಾಡಿತು. ಇದಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications