ಔರಾಂಗಬಾದ್, ಉಸ್ಮಾನಾಬಾದ್ ಹೆಸರು ಬದಲಾಯಿಸಿ: ಶಿವಸೇನಾ
ಮುಂಬೈ, ನವೆಂಬರ್ 08: ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಅಲ್ಲಿನ ಎರಡು ಜಿಲ್ಲೆಗಳ ಹೆಸರನ್ನು ಬದಲಿಸುತ್ತಿದ್ದಂತೆ, ದೇಶದ ವಿವಿಧ ರಾಜ್ಯಗಳಲ್ಲಿ ಹೆಸರು ಬದಲಿಸುವ ಕಿಚ್ಚು ಹೆಚ್ಚಾಗಿದೆ.
ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರದ ಎರಡು ನಗರಗಳ ಹೆಸರನ್ನು ಬದಲಿಸುವಂತೆ, ಶಿವಸೇನೆ ಆಗ್ರಹಿಸುತ್ತಿದೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ ವಕ್ತಾರ ಸಂಜಯ್ ರಾವತ್, 'ಉತ್ತರ ಪ್ರದೇಶ ಸರ್ಕಾರವು ಅಲಹಾಬಾದ್ ಹಾಗೂ ಫೈಜಾಬಾದ್ ನ್ನು ಪ್ರಜ್ಯಾರಾಜ್ ಹಾಗೂ ಅಯೋಧ್ಯಾ ಎಂದು ಬದಲಿಸಬಹುದಾದರೆ, ಮಹಾರಾಷ್ಟ್ರದಲ್ಲಿ ಏಕೆ ಸಾಧ್ಯವಿಲ್ಲ.
ಮಹಾರಾಷ್ಟ್ರದ ಔರಂಗಾಬಾದ್ ಹಾಗೂ ಉಸ್ಮಾನಾದ್ ನ್ನು ಸಂಭಾಜಿ ನಗರ ಹಾಗೂ ಧರಾಶಿವ ನಗರ ಬದಲಾಯಿಸುವಂತೆ ರಾಜ್ಯದ ಸಿಎಂ ದೇವೇಂದ್ರ ಫಡ್ನಾವಿಸ್ ಗೆ ಆಗ್ರಹಿಸಿದ್ದಾರೆ.

ಈ ಎರಡು ನಗರಗಳ ಹೆಸರನ್ನು ಬದಲಿಸಬೇಕೆಂದು ಶಿವಸೇನೆ ಕಳೆದರೆಡು ದಶಕದಿಂದ ಆಗ್ರಹಿಸುತ್ತಾ ಬಂದಿದೆ. ಆದರೆ, ಅಧಿಕೃತವಾಗಿ ಮನವಿ ಮಾಡಿಲ್ಲ. ಆದರೆ, ಈ ಬಾರಿ ಇದನ್ನು ಸಾಧಿಸಲು ಶಿವಸೇನಾ ಪಣತೊಟ್ಟಿದೆ ಎಂದು ಶಿವಸೇನಾ ನಾಯಕಿ ಮನೀಶಾ ಕಾಯಾಂಡೆ ಹೇಳಿದ್ದಾರೆ.
ಗುಜರಾತಿನ ಅಹಮದಾಬಾದ್ ನಗರವನ್ನು ಕರ್ಣಾವತಿ ಎಂದು, ಮಧ್ಯಪ್ರದೇಶದ ಭೂಪಾಲ್ ನ್ನು ಭೋಜ್ ಪಾಲ್ ಎಂದು ಬದಲಿಸಬೇಕೆಂಬ ಕೂಗು ಕೇಳಿಬಂದಿದೆ.
ಈ ಬಗ್ಗೆ ಗುರುವಾರ ಮಾತನಾಡಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಅಹಮದಾಬಾದ್ ನ್ನು ಕರ್ಣವತಿ ಎಂದು ಬದಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕಾನೂನು ಹಾಗೂ ಇತರೆ ಆಯಾಮದ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಈ ಬಗ್ಗೆ ದೃಡ ನಿರ್ಧಾರಕ್ಕೆ ಬರಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications