ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ದಾವೂದ್!
ನವದೆಹಲಿ, ಅ.27: ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ಪಡೆದುಕೊಂಡಿದ್ದ ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ಛೋಟಾ ರಾಜನ್ ನನ್ನು ಇಂಡೋನೋಷಿಯಾದ ಬಾಲಿಯಲ್ಲಿ ಬಂಧಿಸಲಾಗಿದೆ. ಈಗ ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ದಾವೂದ್ ಇಬ್ರಾಹಿಂ.
ಇಂಡೋನೇಷ್ಯಾದ ಪೊಲೀಸರ ವಶದಲ್ಲಿರುವ ಛೋಟಾ ರಾಜನ್ ನನ್ನು ಭಾರತಕ್ಕೆ ಕರೆ ತರಲು ಸಿಬಿಐ ಸಿದ್ಧತೆ ನಡೆಸಿದೆ. ಅದರೆ, ಆ ದೇಶದ ಕಾನೂನು ಪ್ರಕ್ರಿಯೆ ಮುಗಿಯುವ ತನಕ ನಾವು ಕಾಯಬೇಕಾಗುತ್ತದೆ ಎಂದು ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಕೀರೆನ್ ರಿಜಿಜು ಹೇಳಿದ್ದಾರೆ. [ಭೂಗತ ಪಾತಕಿ ಛೋಟಾ ರಾಜನ್ ಬಂಧನ]

ದಾವೂದ್ ಮುಂದಿನ ಟಾರ್ಗೆಟ್?: ಛೋಟಾ ರಾಜನ್ ನಂತರ 1993ರ ಮುಂಬೈ ಸರಣಿ ಸ್ಫೋಟದ ಆರೋಪಿ ದಾವೂದ್ ಇಬ್ರಾಹಿಂ ನಮ್ಮ ಟಾರ್ಗೆಟ್ ಎಂದು ಸಚಿವ ಕೀರೆನ್ ಹೇಳಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿ ಅಡಗಿ ಕುಳಿತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡ ಛೋಟಾ ರಾಜನ್ ರೀತಿಯಲ್ಲೇ ಬಂಧಿಸಿ ಭಾರತಕ್ಕೆ ಕರೆತರಲಾಗುವುದು ಎಂದಿದ್ದಾರೆ. [ಛೋಟಾ ರಾಜನ್ : ಡಾನ್ ಆಗಿದ್ದು ಹೇಗೆ?]
ಸುಮಾರು 20ಕ್ಕೂ ಅಧಿಕ ಕೊಲೆ ಕೇಸ್, ಗಲಭೆ, ಹಿಂಸಾಚಾರ, ಬೆದರಿಕೆ ಪ್ರಕರಣಗಳನ್ನು ಮೈಮೇಲೆ ಹೊತ್ತುಕೊಂಡಿರುವ 55 ವರ್ಷದ ರಾಜನ್ ಅಲಿಯಾಸ್ ರಾಜೇಂದ್ರ ಸದಾಶಿವ್ ನಿಕ್ಲಾಜೆಯನ್ನು ಭಾರತಕ್ಕೆ ಕರೆ ತರುವ ಪ್ರಕ್ರಿಯೆ ಆರಂಭವಾಗಿದೆ. ಇತ್ತೀಚೆಗೆ ಭಾರತ ಹಾಗೂ ಇಂಡೋನೇಷಿಯಾ ನಡುವೆ ಆಗಿರುವ ಒಪ್ಪಂದದಂತೆ ಕ್ರಿಮಿನಲ್ ಗಳನ್ನು ಕೋರ್ಟ್ ವಾರೆಂಟ್ ಆಧಾರದ ಮೇಲೆ ಹಸ್ತಾಂತರ ಮಾಡಲು ಸಾಧ್ಯವಿದೆ.
ಅದರೆ, ರಾಜನ್ ಬಂಧನ ಮಾಡಿದ್ದೇ ಆತನನ್ನು ರಕ್ಷಿಸಲು ಹಾಗೂ ಆತನ ಬಳಿ ಇರುವ ಮಾಹಿತಿ ಕಲೆ ಹಾಕಿ ದಾವೂದ್ ಇಬ್ರಾಹಿಂನನ್ನು ಹಿಡಿಯಲು ಬಲೆ ಹೆಣೆಯಲಾಗುತ್ತಿದೆ ಎಂದು ಭೂಗತ ಜಗತ್ತಿನಲ್ಲಿ ಸುದ್ದಿ ಹರಿದಾಡುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications