ಅಂಬಾನಿ ಭದ್ರತೆಗೆ ನಿಯುಕ್ತರಾಗಿದ್ದ ಸಿಐಎಸ್ಎಫ್ ಸಿಬ್ಬಂದಿ ಸಾವು
ಮುಂಬೈ, ಜನವರಿ 23: ಉದ್ಯಮಿ ಮುಖೇಶ್ ಅಂಬಾನಿ ಮನೆಯಲ್ಲಿ ದುರಂತ ಸಂಭವಿಸಿದೆ. ಮುಖೇಶ್ ಅವರ ಭದ್ರತಾ ಸಿಬ್ಬಂದಿಯ ಪೈಕಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಖೇಶ್ ಅಂಬಾನಿ ಮನೆಯ ಭದ್ರತೆಗೆ ನಿಯುಕ್ತರಾಗಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಸಿಬ್ಬಂದಿ(ಸಿಐಎಸ್ಎಫ್) ಕರ್ತವ್ಯ ನಿರತರಾಗಿದ್ದಾಗ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರದಂದು ಸಂಭವಿಸಿದೆ.

ಮುಂಬೈನ ದಕ್ಷಿಣ ಭಾಗದಲ್ಲಿರುವ ರಿಲಯನ್ಸ್ ಇಂಡಸ್ಟ್ರೀ ಚೇರ್ಮನ್ ಮುಖೇಶ್ ಅಂಬಾನಿ ಅವರ ನಿವಾಸ ಆಂಟಿಲಾ(Antilia)ದ ಭದ್ರತೆಗಾಗಿ ನಿಯುಕ್ತಿಗೊಳಿಸಲಾಗಿತ್ತು. ಮೃತ ಸಿಐಎಸ್ಎಫ್ ಯೋಧನ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆಯನ್ನು ಗುರುವಾರದಂದು ಜೆಜೆ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.












Click it and Unblock the Notifications