14 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅರೆಸ್ಟ್
ಮುಂಬೈ, ಫೆಬ್ರವರಿ.28: ಗುರುವನ್ನು ದೇವರ ಸಮಾನ ಎನ್ನುತ್ತಾರೆ. ಇಲ್ಲೊಬ್ಬ ಶಿಕ್ಷಕ ಮಾಡಬಾರದ್ದನ್ನು ಮಾಡಿದ ಆರೋಪದ ಮೇಲೆ ಇಂದು ಪೊಲೀಸರ ಅತಿಥಿಯಾಗಿದ್ದಾನೆ. ಕಳೆದ ಎರಡು ತಿಂಗಳಿನಿಂದ 14 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಂಪ್ಯೂಟರ್ ಶಿಕ್ಷಕನನ್ನು ಮಹಾರಾಷ್ಟ್ರ ನವಮುಂಬೈನ ಟರ್ಬೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿ ಲೋಚನ್ ಪರುಲೇಕರ್ ವಿರುದ್ಧ ಮಕ್ಕಳ ರಕ್ಷಣೆ ಹಾಗೂ ಲೈಂಗಿಕ ಅಪರಾಧ ಕಾಯ್ದೆ(ಫೋಕ್ಸೋ) ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ಮುಂದಿನ ಮಾರ್ಚ್.02ರವರೆಗೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನವಮುಂಬೈನಲ್ಲಿ ಮುನ್ಸಿಪಲ್ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕನಾಗಿದ್ದ ಲೋಚನ್ ಪರುಲೇಕರ್, ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕ್ಲಾಸ್ ಗಳನ್ನು ತೆಗೆದುಕೊಳ್ಳುತ್ತಿದ್ದನು. ಈ ವೇಳೆ ವಿದ್ಯಾರ್ಥಿಯರ ಜೊತೆ ಅಸಭ್ಯ ರೀತಿಯಲ್ಲಿ ನಡೆದುಕೊಳ್ಳುತಿದ್ದ ಎಂದು ಆರೋಪಿಸಲಾಗಿದೆ.

14 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:
ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಕಂಪ್ಯೂಟರ್ ಟ್ಯೂಷನ್ ಹೇಳಿಕೊಡುತ್ತಿದ್ದ ಲೋಚನ್, ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾರ್ಕ್ಸ್ ನೀಡುವ ಆಸೆ ತೋರಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಹೀಗೆ 11 ರಿಂದ 14 ವರ್ಷದ ನಡುವಿನ 14 ಮಂದಿ ವಿದ್ಯಾರ್ಥಿಯರಿಗೆ ಈ ಶಿಕ್ಷಕನು ಲೈಂಗಿಕ ಕಿರುಕುಳ ನೀಡಿದ್ದನು ಎಂದು ಹೇಳಲಾಗುತ್ತಿದೆ.
ಕಳೆದ ಫೆಬ್ರವರಿ.25ರಂದು ಶಿಕ್ಷಕನನ್ನು ಬಂಧಿಸಿ ಅಂದೇ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಇದೀಗ ಕೋರ್ಟ್ ಆರೋಪಿಯನ್ನು ಮಾರ್ಚ್.02ರವರೆಗೂ ಪೊಲೀಸ್ ವಶಕ್ಕೆ ಒಪ್ಪಿಸಿದೆ ಎಂದು ಡೆಪ್ಯುಟಿ ಕಮಿಷನರ್ ಪಂಕಜ್ ದಹಾನೆ ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications