ಮಹಾರಾಷ್ಟ್ರದ ಆರ್ ಎಸ್ ಎಸ್ ಗರ್ಭಗುಡಿಯಲ್ಲೇ ಮುಗ್ಗರಿಸಿದ ಬಿಜೆಪಿ
ಮುಂಬೈ, ಜನವರಿ.08: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ಮುಂದಾದ ಭಾರತೀಯ ಜನತಾ ಪಕ್ಷಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳುತ್ತಿದೆ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಇತ್ತೀಚಿಗೆ ನಡೆದ ಎಲ್ಲ ಚುನಾವಣೆಗಳಲ್ಲೂ ತೀವ್ರ ಮುಖಭಂಗ ಅನುಭವಿಸುತ್ತಿದೆ.
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗಳಿಸಿದರೂ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಸೋತಿತು. ಇದರ ಬೆನ್ನಲ್ಲೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.
ಮಹಾರಾಷ್ಟ್ರ ಎಂದರೆ ಆರ್ ಎಸ್ ಎಸ್, ಆರ್ ಎಸ್ ಎಸ್ ಎಂದರೆ ಮಹಾರಾಷ್ಟ್ರ ಎನ್ನುವ ಹಾಗಿತ್ತು. ಅಂಥ ಮಹಾರಾಷ್ಟ್ರದಲ್ಲೇ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲಾ ಪರಿಷತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನೇ ಹಿಂದಿಕ್ಕಿದೆ.

ಆರ್ ಎಸ್ ಎಸ್ ಗರ್ಭಗುಡಿಯಲ್ಲೇ ಬಿಜೆಪಿಗಿಲ್ಲ ಸ್ಥಾನ:
ಕೇಂದ್ರ ಸಚಿವ ನಿತಿನ್ ಗಡ್ಕರಿ ತವರು ಜಿಲ್ಲೆ ನಾಗ್ಪುರದಲ್ಲೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದೆ. 58 ಸ್ಥಾನಗಳ ಪೈಕಿ ಕಾಂಗ್ರೆಸ್ ಅತಿಹೆಚ್ಚು ಎಂದರೆ 31 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಬಿಜೆಪಿ 15 ಸ್ಥಾನಗಳಲ್ಲಿ ಗೆಲುವು ದಾಖಲಿಸಿದರೆ, ಎನ್ ಸಿಪಿ 10, ಶಿವಸೇನೆ 1, ಹಾಗೂ ಇತರೆ 1 ಸ್ಥಾನಗಳಲ್ಲಿ ಜಯ ಸಾಧಿಸಿವೆ. ಆರ್ ಎಸ್ ಎಸ್ ಮೂಲಸ್ಥಾನವಾಗಿರುವ ನಾಗ್ಪುರದಲ್ಲೇ ಬಿಜೆಪಿ ಈ ಬಾರಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications