ಔರಂಗಾಬಾದ್ಗೆ ಸಂಭಾಜಿನಗರ ಎಂದು ಮರುನಾಮಕರಣ: ಶಿವಸೇನಾ-ಕಾಂಗ್ರೆಸ್ ಕಿತ್ತಾಟ
ಮುಂಬೈ, ಜನವರಿ 1: ಔರಂಗಾಬಾದ್ ಹೆಸರನ್ನು ಬದಲಿಸಿ 'ಸಂಭಾಜಿ ನಗರ' ಎಂದು ಬದಲಿಸುವ ವಿಚಾರದಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಪಾಲುದಾರರಾದ ಶಿವಸೇನಾ ಮತ್ತು ಕಾಂಗ್ರೆಸ್ ನಸುವೆ ಭಿನ್ನಾಭಿಪ್ರಾಯ ತಲೆದೋರಿದೆ.
ಮಹಾರಾಷ್ಟ್ರದ ಮರಾಠವಾಡ ವಿಭಾಗೀಯ ಕ್ಷೇತ್ರ ಔರಂಗಾಬಾದ್ ಪ್ರವಾಸೋದ್ಯಮ ರಾಜಧಾನಿ ಎಂದು ಪರಿಗಣಿಸಲಾಗಿದೆ. ಈ ನಗರದ ಹೆಸರನ್ನು 'ಸಂಭಾಜಿನಗರ' ಎಂದು ಬದಲಿಸುವಂತೆ ಶಿವಸೇನಾ ಸುದೀರ್ಘ ಸಮಯದ ಹಿಂದಿನಿಂದಲೂ ಬೇಡಿಕೆ ಇರಿಸಿದೆ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಔರಂಗಾಬಾದ್ ಪಾಲಿಕೆ ಚುನಾವಣೆ (ಎಎಂಸಿ) ನಡೆಯಬೇಕಿರುವುದರಿಂದ ಈ ವಿಚಾರ ಮಹತ್ವದ ಪಡೆದುಕೊಂಡಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಕಟವರ್ತಿ ಮತ್ತು ರಾಜ್ಯ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಅವರು ಕಳೆದ ವಾರ 7,500 ಕೋಟಿ ಹೂಡಿಕೆ ಪ್ರಸ್ತಾವ ಬಂದಾಗ 'ಸೂಪರ್ ಸಂಭಾಜಿ ನಗರ್' ಎಂದು ಟ್ವೀಟ್ ಮಾಡಿದ್ದರು.

ಆದರೆ, ಔರಂಗಾಬಾದ್ ಹೆಸರನ್ನು ಬದಲಿಸುವ ಶಿವಸೇನಾ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಮುಖಂಡ ಮತ್ತು ಕಂದಾಯ ಸಚಿವ ಬಾಳಸಾಹೇಬ್ ಥೋರಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 'ಔರಂಗಾಬಾದ್ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸುವ ಯಾವುದೇ ಪ್ರಸ್ತಾವ ಬಂದರೂ ಕಾಂಗ್ರೆಸ್ ಅದನ್ನು ವಿರೋಧಿಸಲಿದೆ. ಹೆಸರು ಬದಲಿಸುವ ಜನಸಾಮಾನ್ಯನ ಅಭಿವೃದ್ಧಿಗೆ ಯಾವುದೇ ರೀತಿ ನೆರವಾಗುವುದಿಲ್ಲ. ಹೀಗಾಗಿ ಅದರಲ್ಲಿ ನಮ್ಮ ಸರ್ಕಾರಕ್ಕೆ ನಂಬಿಕೆ ಇಲ್ಲ' ಎಂದು ಥೋರಟ್ ಹೇಳಿದ್ದಾರೆ.
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳೆಂದು ಗುರುತಿಸಿರುವ ಅಜಂತಾ, ಎಲ್ಲೋರಾಗಳನ್ನು ಒಳಗೊಂಡಿದೆ. ಬೀಬಿ ಕಾ ಮಕ್ಬರಾ, ಗಿರ್ನೇಶ್ವರ್ ದೇವಸ್ಥಾನ, ದೌಲತಾಬಾದ್ ಕೋಟೆಯಂತಹ ಪ್ರವಾಸಿ ತಾಣಗಳಿವೆ.
ಮೊಘಲರ ದೊರೆ ಔರಂಗಜೇಬ್ ಈ ನಗರಕ್ಕೆ 1653ರಲ್ಲಿ ಔರಂಗಾಬಾದ್ ಎಂದು ಮರುನಾಮಕರಣ ಮಾಡಿದ್ದ. ಔರಂಗಜೇಬನ ಆದೇಶದಂತೆ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜನನ್ನು ಚಿತ್ರಹಿಂಸೆಗೆ ಒಳಗಾಗಿ ಸಾವಿಗೀಡಾದ ಬಳಿಕ ಈ ನಗರದ ಹೆಸರು ಬದಲಿಸಬೇಕು ಎಂಬ ಬೇಡಿಕೆ ಶುರುವಾಗಿತ್ತು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications