ಸೋನಿಯಾ, ರಾಹುಲ್ ವಿರುದ್ಧ ಹೇಳಿಕೆ: ಶಿವಸೇನೆಗೆ ಕಾಂಗ್ರೆಸ್ ಎಚ್ಚರಿಕೆ
ಮುಂಬೈ, ಡಿಸೆಂಬರ್ 29: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿರುವ ಶಿವಸೇನೆಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.
ಈ ಹಿಂದೆ ಯುಪಿಎನ್ನು ಎನ್ ಜಿಒ ಎಂದು ಕರೆದಿದ್ದ ಸಂಜಯ್ ರಾವತ್, ಸೋನಿಯಾ ಗಾಂಧಿ ಬದಲಿಗೆ ಶರದ್ ಪವಾರ್ ಅವರನ್ನು ಯುಪಿಎ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು.
ಅಲ್ಲದೇ, ಯುಪಿಎಗೆ ಅಮಿತ್ ಶಾ ಹಾಗೂ ನರೇಂದ್ರ ಮೋದಿ ಅವರಂತಹ ಪ್ರಭಾವಶಾಲಿ ಮತ್ತು ಸಮರ್ಪಿತ ನಾಯಕರ ಕೊರತೆಯಿದೆ ಎಂದು ರಾವತ್ ಹೇಳಿಕೆ ನೀಡಿದ್ದರು.

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಟೀಕಿಸಿರುವುದರ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಮುನ್ನಡೆಸುವ ಜವಾಬ್ದಾರಿ ಕಾಂಗ್ರೆಸ್ ಮಾತ್ರ ಮೇಲಿಲ್ಲ, ಆದರೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡಾ ಸರ್ಕಾರದ ಭಾಗವಾಗಿ ಎಲ್ಲಾ ಪಕ್ಷಗಳನ್ನು ಪರಿಗಣಿಸಬೇಕೆಂದು ಇನ್ನೊಬ್ಬ ಕಾಂಗ್ರೆಸ್ ಮುಖಂಡ ನಶೀಮ್ ಖಾನ್ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಯಾವುದೇ ನಕಾರಾತ್ಮಕ ಹೇಳಿಕೆಯನ್ನು ಸಹಿಸುವುದಿಲ್ಲ, ಸೋನಿಯಾ ಗಾಂಧಿ ಯುಪಿಎ ಅಧ್ಯಕ್ಷರಾಗಿದ್ದು, ಮುಂದೆಯೂ ಕೂಡಾ ಅವರೇ ಇರಲಿದ್ದಾರೆ. ಸಾಮಾನ್ಯ ಕಾರ್ಯಕ್ರಮ ಸಿದ್ದಾಂತದಡಿಯಲ್ಲಿ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ.
ಶಿವಸೇನೆ ಪ್ರಾದೇಶಿಕ ಪಕ್ಷವಾಗಿದ್ದು, ಅದರೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ. ಮಹಾರಾಷ್ಟ್ರಕ್ಕೆ ಸಿಮೀತವಾಗಿ ಮಾತ್ರ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಅವರು ಟೀಕೆ, ನಮಗೆ ಪಾಠ ಹೇಳುವಂತಹ ಕೆಲಸ ಮಾಡಬಾರದು. ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ನಮಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications