ಹಿರಿಯ ಅಧಿಕಾರಿ ಕೊಂದು ಆತ್ಮಹತ್ಯೆಗೆ ಶರಣಾದ ಎಎಸ್ಐ
ಮುಂಬೈ, ಮೇ 3: ರಜೆ ವಿಷಯವಾಗಿ ನಡೆದ ಮಾತುಕತೆ ಜಗಳಕ್ಕೆ ತಿರುಗಿ ಇಬ್ಬರು ಪೊಲೀಸ್ ಅಧಿಕಾರಿಗಳ ಸಾವಿಗೆ ಕಾರಣವಾಗಿದೆ. ಸಾಂತಾಕ್ರೂಜ್ ಪ್ರದೇಶದ ವಕೋಲಾ ಪೊಲೀಸ್ ಠಾಣೆಯಲ್ಲಿ ಮೇಲಧಿಕಾರಿಯನ್ನು ಕೊಂದ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಅಸಿಸ್ಟೆಂಟ್ ಸಬ್ಇನ್ಸ್ಪೆಕ್ಟರ್ ದಿಲೀಪ್ ಶಿರ್ಕೆ ಅವರು ಸಿನೀಯರ್ ಇನ್ಸ್ ಪೆಕ್ಟರ್ ವಿಲಾಸ್ ಝೋಶಿ ಅವರನ್ನು ರಜೆ ಕ್ಯಾನ್ಸಲ್ ಮಾಡಿದ್ದರ ಬಗ್ಗೆ ಪ್ರಶ್ನಿಸಲು ಹೋಗಿದ್ದಾರೆ. ರಜೆ ನೀಡಿದ್ದು, ಕ್ಯಾನ್ಸಲ್ ಎಂದು ದಾಖಲಾಗಿದ್ದು ಈ ಬಗ್ಗೆ ಇಲಾಖಾ ಮಟ್ಟದ ತನಿಖೆ ಎಂದೆಲ್ಲ ಸುದ್ದಿ ಹಬ್ಬಿತ್ತು ಶಿರ್ಕೆ ನಿದ್ದೆಗೆಡಿಸಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಎಸ್ ಐ ಜೋಶಿ ಸರಿಯಾದ ಉತ್ತರ ನೀಡಲಿಲ್ಲ. ಸಿಟ್ಟಿಗೆದ್ದ ಶಿರ್ಕೆ ಜೋಶಿ ಹಾಗೂ ವೈರಲೆಸ್ ಆಪರೇಟರ್ ಬಾಳಾ ಸಾಹೇಬ್ ಅಹರ್ ಅವರ ಮೇಲೆ ಮೂರು ಸುತ್ತಿನ ಗುಂಡು ಹಾರಿಸಿದ್ದಾರೆ.

ಎಎಸ್ಐ ಶಿರ್ಕೆ ತುಂಬ ಖಿನ್ನತೆಗೊಳಗಾಗಿದ್ದರು ನಿಜ ಆದರೆ, ಇದಕ್ಕೆಲ್ಲ ಪೊಲೀಸ್ ಆಯುಕ್ತರೇ ಕಾರಣ ಎಂದು ಶಿರ್ಕೆ ಪುತ್ರ ಆಪಾದಿಸಿದ್ದಾರೆ.
ಈ ಘಟನೆ ಕುರಿತಂತೆ ವಿವರ ನೀಡಿರುವ ಆಯುಕ್ತ ರಾಕೇಶ್ ಮರಿಯಾ, ವಕೋಲಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಿಲಾಸ್ ಜೋಷಿ ಅವರ ಚೇಂಬರ್ಗೆ ಹೋದ ಎಎಸ್ಐ ದಿಲೀಪ್ ಶಿರ್ಕೆ ಅಲ್ಲಿ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಚೇಂಬರ್ ನಿಂದ ಮನೆಗೆ ತೆರಳಲು ಹೊರಟ ಜೋಶಿ ಅವರ ಮೇಲೆ ಗುಂಡು ಹಾರಿಸಿದ್ದಾರೆ.
ಮೂರು ಸುತ್ತು ಗುಂಡು ಹಾರಿಸಿದ ಶಿರ್ಕೆ ತಾನೂ ಶೂಟ್ ಮಾಡಿಕೊಂಡು ಮೃತಪಟ್ಟಿದ್ದಾರೆ. ವಿಲಾಸ್ ಜೋಶಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಇಲ್ಲಿನ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದರು.
ಶಿರ್ಕೆ ಆತ್ಮಹತ್ಯೆ, ಜೋಶಿ ಸಾವಿನ ಪ್ರಕರಣವನ್ನು ಧನಂಜಯ್ ಕುಲಕರ್ಣಿ ಹಾಗೂ ತಂಡ ಕೈಗೆತ್ತಿಕೊಂಡಿದೆ. ಶಾರ್ಟ್ ಟೆಂಪರ್ಡ್ ಶಿರ್ಕೆ ಎಂದು ಇಲಾಖೆಯ ಇತರೆ ಸಹದ್ಯೋಗಿಗಳು ಮಾತನಾಡಿಕೊಳ್ಳುವುದರಿಂದ ಹಿಡಿದು ನೈಟ್ ಶಿಫ್ಟ್, ರಜೆ ಸಮಸ್ಯೆಗಳತ್ತ ಕೂಡಾ ಈ ಪ್ರಕರಣ ಬೆಳಕು ಚೆಲ್ಲುವ ನಿರೀಕ್ಷೆಯಿದೆ. (ಪಿಟಿಐ)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications