ಮಹಾರಾಷ್ಟ್ರದಲ್ಲಿ 11,000 ಖೈದಿಗಳ ಬಿಡುಗಡೆ: ಮಹಾ ವಿಪತ್ತು ಕಾದಿದೆ ಜೋಕೆ!
ಮುಂಬೈ, ಮಾರ್ಚ್ 27: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಕೋವಿಡ್-19 ನಿಂದಾಗಿ ಮಹಾರಾಷ್ಟ್ರದಲ್ಲೂ ತಲ್ಲಣ ಸೃಷ್ಟಿಯಾಗಿದ್ದು, 11 ಸಾವಿರ ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಮಹಾಮಾರಿ ಕೊರೊನಾ ವೈರಸ್ ನ ತಡೆಗಟ್ಟಲು ಏಪ್ರಿಲ್ 14 ರವರೆಗೆ ಲಾಕ್ ಡೌನ್ ಆದೇಶ ಹೊರಡಿಸಲಾಗಿದೆ. ಹೀಗಾಗಿ, 7 ವರ್ಷಕ್ಕಿಂತ ಕಡಿಮೆ ಜೈಲುಶಿಕ್ಷೆಗೆ ಗುರಿಯಾಗಿರುವ ಸುಮಾರು 11 ಸಾವಿರ ಖೈದಿಗಳನ್ನು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಸೂಚಿಸಿದ್ದಾರೆ.
''ಒಂದು ವೇಳೆ 11 ಸಾವಿರ ಖೈದಿಗಳು ಬಿಡುಗಡೆ ಆದಲ್ಲಿ, ಭವಿಷ್ಯದಲ್ಲಿ ಮಹಾ ವಿಪತ್ತು ಸಂಭವಿಸಲಿದೆ. ಇದು ಲಾಜಿಕಲ್ ನಿರ್ಧಾರ ಅಲ್ಲ'' ಎಂದು ಅನಿಲ್ ದೇಶಮುಖ್ ನಿರ್ಧಾರದ ಬಗ್ಗೆ ಸಾರ್ವಜನಿಕರು ಟ್ವಿಟ್ಟರ್ ನಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.
|
ಅನಿಲ್ ದೇಶಮುಖ್ ಮಾಡಿರುವ ಟ್ವೀಟ್ ಏನು.?
''ಕೋವಿಡ್-19 ತಡೆಗಟ್ಟುವ ಸಲುವಾಗಿ, ಜೈಲಿನಲ್ಲಿ ಖೈದಿಗಳ ಸಂಖ್ಯೆ ಕಡಿಮೆ ಮಾಡುವ ಸಲುವಾಗಿ, 7 ವರ್ಷ ಅಥವಾ ಅದಕ್ಕಿಂತ ಕಡಿಮೆ ಶಿಕ್ಷೆಗೆ ಗುರಿಯಾಗಿರುವವರನ್ನು ತುರ್ತು ಪೆರೋಲ್ ಮೂಲಕ ಬಿಡುಗಡೆ ಮಾಡಲು ಸೂಚಿಸಿದ್ದೇನೆ'' ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಟ್ವೀಟ್ ಮಾಡಿದ್ದಾರೆ.
|
ಟ್ವೀಟಿಗರ ಅಸಮಾಧಾನ
''ಇದು ಲಾಜಿಕಲ್ ನಿರ್ಧಾರ ಅಲ್ಲ. ಈ ನಿಮ್ಮ ನಿರ್ಧಾರದಿಂದ ಭವಿಷ್ಯದಲ್ಲಿ ಮಹಾ ವಿಪತ್ತು ಉಂಟಾಗಬಹುದು. ಖೈದಿಗಳು ಜೈಲಿನಲ್ಲೇ ಇರಲಿ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ'' ಎಂದು ಟ್ವೀಟಿಗರೊಬ್ಬರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
|
ಸಮಾಜಕ್ಕೆ ಸಮಸ್ಯೆ ಆಗಲ್ವಾ.?
''ಒಂದಲ್ಲಾ ಒಂದು ಕ್ರೈಂ ಮಾಡಿ ಜೈಲು ಪಾಲಾಗಿರುವವರನ್ನು ಬಿಡುಗಡೆ ಮಾಡಿದರೆ, ಸಮಾಜಕ್ಕೆ ಮತ್ತೆ ತೊಂದರೆ ಉಂಟಾಗುವುದಿಲ್ಲವೇ.? ಕೊರೊನಾ ಸೋಂಕಿತ ವ್ಯಕ್ತಿ ಜೈಲಿನ ಒಳಗೆ ಹೋಗದ ಹೊರತು ಅಲ್ಲಿನ ಎಲ್ಲಾ ಖೈದಿಗಳು ಸೇಫ್ ಆಗಿ ಇರುತ್ತಾರೆ. ಕೊರೊನಾ ನೆಪವಾಗಿದ್ದರೂ, ಬಹುಶಃ ಬಿಡುಗಡೆ ಮಾಡುತ್ತಿರುವುದರ ಹಿಂದೆ ಬೇರೆಯದ್ದೇ ಕಾರಣ ಇದೆ'' ಎಂದು ವಿಜಯ್ ಕುಮಾರ್ ಎಂಬುವರು ಟ್ವೀಟ್ ಮಾಡಿದ್ದಾರೆ.
|
ಮತ್ತೊಮ್ಮೆ ಯೋಚಿಸಿ..
''ಸದ್ಯಕ್ಕೆ ಎಲ್ಲಾ ಖೈದಿಗಳು ಜೈಲಿನಲ್ಲೇ ಸೇಫ್ ಆಗಿದ್ದಾರೆ. ಯಾಕಂದ್ರೆ, ಅವರಿಗೆ ಹೊರಗಿನಿಂದ ಯಾವುದೇ ಹಸ್ತಕ್ಷೇಪ ಇಲ್ಲ. ಹೀಗಾಗಿ, ನಿರ್ಧಾರ ಕೈಗೊಳ್ಳುವ ಮುನ್ನ ಮತ್ತೊಮ್ಮೆ ಯೋಚಿಸಿ'' ಎಂದು ಟ್ವೀಟಿಗರೊಬ್ಬರು ಸಲಹೆ ನೀಡಿದ್ದಾರೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications