ಮುಂಬೈ ಸ್ಲಂಗೂ ಕಾಲಿಟ್ಟ ಕೊರೊನಾ: ಮಾರಿ ಕಟ್ಟಿಹಾಕೋದಿನ್ನು ಅಸಾಧ್ಯನಾ?
ಮುಂಬೈ, ಮಾರ್ಚ್ 28: ವಿಶ್ವದಲ್ಲಿ ಭಯ ಭೀತಿ ಹುಟ್ಟಿಸಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕು ಭಾರತದಲ್ಲಿ 900ಕ್ಕೂ ಅಧಿಕ ಮಂದಿಗೆ ತಗುಲಿದೆ. ವಿದೇಶಗಳಿಂದ ಭಾರತಕ್ಕೆ ವಾಪಸ್ ಆದ ಟೆಕ್ಕಿ, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಲ್ಲಿ ಇಲ್ಲಿಯವರೆಗೂ ಕೋವಿಡ್-19 ಪಾಸಿಟೀವ್ ಕಂಡು ಬಂದಿತ್ತು.
ಆದ್ರೀಗ, ಮುಂಬೈನ ಕೊಳಗೇರಿಯೊಳಗೂ ಕೊರೊನಾ ರೌದ್ರನರ್ತನ ಆರಂಭಿಸುವ ಲಕ್ಷಣಗಳು ಗೋಚರಿಸಿವೆ. ಮುಂಬೈನ ನಾಲ್ವರು ಸ್ಲಂ ನಿವಾಸಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ಭಾರತದಲ್ಲಿ ಕೋವಿಡ್-19 ಮೂರನೇ ಹಂತ ತಲುಪಿದೆ ಎಂಬ ವರದಿ ಬಂದ ಬೆನ್ನಲ್ಲೇ ಸ್ಲಂನಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕು ಭಾರತೀಯರ ನಿದ್ದೆಗೆಡಿಸುವಂತೆ ಮಾಡಿದೆ.

ನಾಲ್ವರು ಸ್ಲಂ ನಿವಾಸಿಗಳಿಗೆ ಕೊರೊನಾ
ಪರೇಲ್ ಸ್ಲಂನಲ್ಲಿರುವ 65 ವರ್ಷದ ವ್ಯಕ್ತಿ, ಕಲೀನದ 37 ವರ್ಷದ ಕೊಳಗೇರಿ ನಿವಾಸಿ, ಘಾಟ್ಕೋಪರ್ ಸ್ಲಂನಲ್ಲಿ ವಾಸಿಸುತ್ತಿರುವ 25 ವರ್ಷದ ಓರ್ವ ಮತ್ತು 68 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ವರದಿಗಳ ಪ್ರಕಾರ, ಪರೇಲ್ ನ 65 ವರ್ಷದ ವ್ಯಕ್ತಿ ಪ್ರಭಾದೇವಿ ಪ್ರದೇಶದಲ್ಲಿ ಫುಡ್ ಮೆಸ್ ನಡೆಸುದ್ದವರು. ಕಲೀನದ ಕೊಳಗೇರಿ ನಿವಾಸಿ ಇಟಲಿಯಲ್ಲಿ ವೇಯ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದವರು. ಇನ್ನು, 68 ವರ್ಷದ ಘಾಟ್ಕೋಪರ್ ಸ್ಲಂ ನಿವಾಸಿ ನಗರದೊಳಗೆ ಮನೆಗೆಲಸ ಮಾಡುತ್ತಿದ್ದವರು. ಸೋಂಕಿತರನ್ನು ಮುಂಬೈ ಆಸ್ಪತ್ರೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಾಂಟ್ಯಾಕ್ಟ್ ಟ್ರೇಸಿಂಗ್ ಕಾರ್ಯ
ಸದ್ಯ ಈ ನಾಲ್ವರ ಸಂಪರ್ಕಕ್ಕೆ ಬಂದವರು ಮತ್ತು ಕುಟುಂಬದವರನ್ನು ಪತ್ತೆ ಹಾಚ್ಚುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಆದ್ರೆ, ಜನಸಾಂದ್ರತೆ ಹೆಚ್ಚಿರುವ ಸ್ಲಂನಲ್ಲಿ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡುವುದೇ ಆರೋಗ್ಯ ಇಲಾಖೆಗಿರುವ ದೊಡ್ಡ ಚಾಲೆಂಜ್.

ಸ್ಲಂಗಳಲ್ಲಿ ಕೊರೊನಾ ಹಬ್ಬಿದರೆ.?
ಅತಿ ದೊಡ್ಡ ಕೊಳಗೇರಿ ಪ್ರದೇಶ ಹೊಂದಿರುವ ಮುಂಬೈನ ಸ್ಲಂಗಳು ಹೇಗಿರುತ್ತವೆ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ವಠಾರಕ್ಕೊಂದು ಶೌಚಾಲಯ, ಬೆಂಕಿಪಟ್ಟಣದಂತಹ ಮನೆಯೊಳಗೆ ಹತ್ತಾರು ಜನ, ಕಿಷ್ಕಿಂದೆಯಂತಹ ಓಣಿ.. ಹೀಗೆ ಹಲವು ಮೂಲಭೂತ ಸಮಸ್ಯೆಗಳಿರುವ, ಜನಜಂಗುಳಿಯಿಂದ ತುಂಬಿರುವ ಸ್ಲಂನಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ್ದೇ ಆದರೆ.. ಅದೆಷ್ಟು ಜನ ಬಲಿಯಾಗಬಹುದು ನೀವೇ ಊಹಿಸಿ..

ಅಸಾಧ್ಯದ ಮಾತು
ಕೊರೊನಾ ವೈರಸ್ ತಡೆಗಟ್ಟಬೇಕು ಅಂದ್ರೆ, ಸಾಮಾಜಿಕ ಅಂತರ ಬಹುದೊಡ್ಡ ಉಪಾಯ ಅಂತ ಎಲ್ಲರೂ ಹೇಳುತ್ತಲೇ ಇದ್ದಾರೆ. ಆದರೆ, ಒಂದಕ್ಕೊಂದು ಅಂಟಿರುವ ಪುಟ್ಟ ಪುಟ್ಟ ಮನೆಗಳನ್ನು ಹೊಂದಿರುವ ಸ್ಲಂಗಳಲ್ಲಿ ಸಾಮಾಜಿಕ ಅಂತರ ಸಾಧ್ಯವೇ.? ಕೆಲ ಸ್ಲಂಗಳಲ್ಲಿ ಒಳಚರಂಡಿ ವ್ಯವಸ್ಥೆ ಕೂಡ ಸರಿಯಾಗಿರುವುದಿಲ್ಲ. ನೀರಿನ ಸಮಸ್ಯೆಯಿಂದ ಎಷ್ಟೋ ಕೊಳಗೇರಿ ನಿವಾಸಿಗಳು ಪ್ರತಿ ದಿನ ಸ್ನಾನ ಮಾಡುವುದೂ ಅನುಮಾನ. ಅಂಥದ್ರಲ್ಲಿ ಕೊರೊನಾ ಸೋಂಕು ತಗುಲದಂತೆ, ಸೋಪಿನಲ್ಲಿ ಕೈತೊಳೆದುಕೊಳ್ಳುವುದು.. ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಸಾಧ್ಯವೇ.? ಹಾಗೇ, ಕೊರೊನಾ ಶಂಕಿತರನ್ನು ಸ್ಲಂಗಳಲ್ಲಿ ಕ್ವಾರಂಟೈನ್ ಮಾಡುವುದು ಅಸಾಧ್ಯದ ಮಾತು.

ವಲಸೆ ಆತಂಕ
ಬದುಕನ್ನರಸಿ ಮುಂಬೈ ಮಹಾನಗರಕ್ಕೆ ಬಂದ ಸಾಗರೋಪಾದಿಯ ಜನ ನೆಲೆನಿಂತಿರುವುದು ಇದೇ ಸ್ಲಂಗಳಲ್ಲಿ. ಅಪ್ಪಿತಪ್ಪಿ ಮಹಾಮಾರಿ ಕೊರೊನಾ ಏನಾದರೂ, ಸ್ಲಂಗಳಲ್ಲಿ ವ್ಯಾಪಕವಾಗಿ ಹಬ್ಬಿಬಿಟ್ಟರೆ, ಸ್ಲಂ ನಿವಾಸಿಗಳ ಗುಳೇ ಆರಂಭವಾಗುತ್ತದೆ. ಹೀಗಾದಲ್ಲಿ, ಇತರೆ ಪ್ರದೇಶಗಳಲ್ಲಿ ವಲಸೆ ಆತಂಕ ಸೃಷ್ಟಿಯಾಗುವ ಸಾಧ್ಯತೆಯೂ ಇದೆ.

ಸಮರೋಪಾದಿಯ ಕ್ರಮ ಅನಿವಾರ್ಯ
ಸರ್ಕಾರ ಮತ್ತು ಆರೋಗ್ಯ ಇಲಾಖೆ ಕೂಡಲೆ ಕಠಿಣ ಕ್ರಮಗಳನ್ನು ಕೈಗೊಂಡು ಸ್ಲಂ ನಿವಾಸಿಗಳ ಮೇಲೆ ನಿಗಾ ಇಟ್ಟರೆ ಸೂಕ್ತ. ಇಲ್ಲದಿದ್ದರೆ, ದೊಡ್ಡ ಅಪಾಯ ಕಟ್ಟಿಟ್ಟಬುತ್ತಿ. ಕೊಳಗೇರಿ ಪ್ರದೇಶದೊಳಗೆ ಕೊರೊನಾ ನುಗ್ಗಿಬಿಟ್ಟರೆ, ಮಹಾಮಾರಿಯನ್ನು ಕಟ್ಟಿಹಾಕುವುದು ಬಹಳ ಕಷ್ಟ.!
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications