ಭ್ರಷ್ಟಾಚಾರ ಪ್ರಕರಣ: ಸಿಬಿಐನಿಂದ ಅನಿಲ್ ದೇಶ್ಮುಖ್ ಆಪ್ತ ಸಹಾಯಕರ ವಿಚಾರಣೆ
ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಆದೇಶದಂತೆ ಪ್ರಾಥಮಿಕ ತನಿಖೆ ಆರಂಭಿಸಿರುವ ಸಿಬಿಐ, ಅನಿಲ್ ದೇಶ್ಮುಖ್ ಅವರ ಇಬ್ಬರು ಆಪ್ತ ಸಹಾಯಕರನ್ನು ವಿಚಾರಣೆಗೆ ಒಳಪಡಿಸಿದೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದಿದ್ದ ಪತ್ರದಲ್ಲಿ, ಪ್ರತಿ ತಿಂಗಳೂ ಅಕ್ರಮ ಮಾರ್ಗಗಳಿಂದ 100 ಕೋಟಿ ರೂಪಾಯಿ ವಸೂಲಿ ಮಾಡಿ ನೀಡುವಂತೆ ಅಮಾನತಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಇತರರಿಗೆ ಅನಿಲ್ ದೇಶ್ಮುಖ್ ಸೂಚನೆ ನೀಡಿದ್ದರು ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್, 15 ದಿನಗಳ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಸಿಬಿಐಗೆ ಸೂಚನೆ ನೀಡಿತ್ತು.
ಈ ಸಂಬಂಧ ಮುಂಬೈಗೆ ಆಗಮಿಸಿರುವ ಸಿಬಿಐ ತಂಡ, ಅನಿಲ್ ದೇಶ್ಮುಖ್ ಅವರ ಆಪ್ತ ಸಹಾಯಕರಾದ ಸಂಜೀವ್ ಪಾಲಂಡೆ ಮತ್ತು ಎಸ್ ಕುಂದನ್ ಅವರನ್ನು ಡಿಆರ್ಡಿಒದ ಅತಿಥಿ ಗೃಹಕ್ಕೆ ಕರೆಸಿಕೊಂಡು ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಂಟುಗಂಟೆಗಳ ವಿಚಾರಣೆ ಬಳಿಕ ಅವರನ್ನು ಕಳುಹಿಸಿದೆ. ಅಲ್ಲದೆ ಎನ್ಐಎದಿಂದ ಬಂಧನಕ್ಕೆ ಒಳಗಾಗಿರುವ ಸಚಿನ್ ವಾಜೆಯ ಚಾಲಕರನ್ನು ಕೂಡ ಸಿಬಿಐ ಪ್ರಶ್ನಿಸಿದೆ. ಸಚಿನ್ ವಾಜೆ ಭೇಟಿ ನೀಡಿದ ಸ್ಥಳಗಳು, ಅವರು ಅನಿಲ್ ದೇಶ್ಮುಖ್ ಅವರನ್ನು ಭೇಟಿಯಾಗಿದ್ದರೇ, ಆಗಿದ್ದರೆ ಎಷ್ಟು ಬಾರಿ ಮಾತುಕತೆ ನಡೆಸಿದ್ದರು ಮುಂತಾದವುಗಳನ್ನು ತಿಳಿಯಲು ತನಿಖಾಧಿಕಾರಿಗಳು ಬಯಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ವಾಜೆ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಕೂಡ ಸಿಬಿಐ ವಿಚಾರಣೆ ನಡೆಸಲಿದೆ.
ಈ ನಡುವೆ ಮುಕೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಮತ್ತು ಮನ್ಸುಖ್ ಹಿರೇನ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ, ಮುಂಬೈ ಅಪರಾಧ ಗುಪ್ತಚರ ಘಟಕದ ಮಾಜಿ ಅಧಿಕಾರಿ ಮತ್ತು ಸಚಿನ್ ವಾಜೆಯ ಆಪ್ತ ರಿಯಾಜ್ ಖಾಜಿಯನ್ನು ಬಂಧಿದೆ. ಅವರನ್ನು ಏ. 16ರವರೆಗೂ ಎನ್ಐಎ ವಶಕ್ಕೆ ಒಪ್ಪಿಸಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications