ಭ್ರಷ್ಟಾಚಾರ ಪ್ರಕರಣ: ಸಿಬಿಐನಿಂದ ಅನಿಲ್ ದೇಶ್ಮುಖ್ ಆಪ್ತ ಸಹಾಯಕರ ವಿಚಾರಣೆ
ಮುಂಬೈ, ಏಪ್ರಿಲ್ 12: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಆದೇಶದಂತೆ ಪ್ರಾಥಮಿಕ ತನಿಖೆ ಆರಂಭಿಸಿರುವ ಸಿಬಿಐ, ಅನಿಲ್ ದೇಶ್ಮುಖ್ ಅವರ ಇಬ್ಬರು ಆಪ್ತ ಸಹಾಯಕರನ್ನು ವಿಚಾರಣೆಗೆ ಒಳಪಡಿಸಿದೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದಿದ್ದ ಪತ್ರದಲ್ಲಿ, ಪ್ರತಿ ತಿಂಗಳೂ ಅಕ್ರಮ ಮಾರ್ಗಗಳಿಂದ 100 ಕೋಟಿ ರೂಪಾಯಿ ವಸೂಲಿ ಮಾಡಿ ನೀಡುವಂತೆ ಅಮಾನತಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಗೂ ಇತರರಿಗೆ ಅನಿಲ್ ದೇಶ್ಮುಖ್ ಸೂಚನೆ ನೀಡಿದ್ದರು ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್, 15 ದಿನಗಳ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಸಿಬಿಐಗೆ ಸೂಚನೆ ನೀಡಿತ್ತು.
ಈ ಸಂಬಂಧ ಮುಂಬೈಗೆ ಆಗಮಿಸಿರುವ ಸಿಬಿಐ ತಂಡ, ಅನಿಲ್ ದೇಶ್ಮುಖ್ ಅವರ ಆಪ್ತ ಸಹಾಯಕರಾದ ಸಂಜೀವ್ ಪಾಲಂಡೆ ಮತ್ತು ಎಸ್ ಕುಂದನ್ ಅವರನ್ನು ಡಿಆರ್ಡಿಒದ ಅತಿಥಿ ಗೃಹಕ್ಕೆ ಕರೆಸಿಕೊಂಡು ಕೆಲವು ಪ್ರಶ್ನೆಗಳನ್ನು ಕೇಳಿದೆ. ಎಂಟುಗಂಟೆಗಳ ವಿಚಾರಣೆ ಬಳಿಕ ಅವರನ್ನು ಕಳುಹಿಸಿದೆ. ಅಲ್ಲದೆ ಎನ್ಐಎದಿಂದ ಬಂಧನಕ್ಕೆ ಒಳಗಾಗಿರುವ ಸಚಿನ್ ವಾಜೆಯ ಚಾಲಕರನ್ನು ಕೂಡ ಸಿಬಿಐ ಪ್ರಶ್ನಿಸಿದೆ. ಸಚಿನ್ ವಾಜೆ ಭೇಟಿ ನೀಡಿದ ಸ್ಥಳಗಳು, ಅವರು ಅನಿಲ್ ದೇಶ್ಮುಖ್ ಅವರನ್ನು ಭೇಟಿಯಾಗಿದ್ದರೇ, ಆಗಿದ್ದರೆ ಎಷ್ಟು ಬಾರಿ ಮಾತುಕತೆ ನಡೆಸಿದ್ದರು ಮುಂತಾದವುಗಳನ್ನು ತಿಳಿಯಲು ತನಿಖಾಧಿಕಾರಿಗಳು ಬಯಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ವಾಜೆ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಕೂಡ ಸಿಬಿಐ ವಿಚಾರಣೆ ನಡೆಸಲಿದೆ.
ಈ ನಡುವೆ ಮುಕೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಮತ್ತು ಮನ್ಸುಖ್ ಹಿರೇನ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ, ಮುಂಬೈ ಅಪರಾಧ ಗುಪ್ತಚರ ಘಟಕದ ಮಾಜಿ ಅಧಿಕಾರಿ ಮತ್ತು ಸಚಿನ್ ವಾಜೆಯ ಆಪ್ತ ರಿಯಾಜ್ ಖಾಜಿಯನ್ನು ಬಂಧಿದೆ. ಅವರನ್ನು ಏ. 16ರವರೆಗೂ ಎನ್ಐಎ ವಶಕ್ಕೆ ಒಪ್ಪಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications