ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣ: NCB ಎದುರು ವಿಚಾರಣೆಗೆ ಹಾಜರಾದ ಆರ್ಯನ್
ಮುಂಬೈ, ನವೆಂಬರ್ 05: ಮುಂಬೈ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಬಿ ವಿಚಾರಣೆಗೆ ಬಾಲಿವುಡ್ ನಟ ಶಾರೂಖ್ ಖಾನ್ ಮಗ ಆರ್ಯನ್ ಖಾನ್ ಹಾಜರಾಗಿದ್ದಾರೆ.
ಬೆ ಹೈಕೋರ್ಟ್ ಜಾಮೀನು ನೀಡಿದ ನಂತರ ಅಕ್ಟೋಬರ್ 30 ರಂದು ಅರ್ತೂರ್ ರಸ್ತೆಯ ಕಾರಾಗೃಹದಿಂದ ಅಕ್ಟೋಬರ್ 30 ರಂದು ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಆರ್ಯನ್ ಖಾನ್ ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾದರು.
ಹೈಕೋರ್ಟ್ ವಿಧಿಸಿರುವ ಷರತ್ತಿನ ಅನ್ವಯ ಇಂದು ಮಧ್ಯಾಹ್ನ ಸುಮಾರು 12-15ಕ್ಕೆ ದಕ್ಷಿಣ ಮುಂಬೈಯ ಬಲ್ಲಾರ್ಡ್ ನಲ್ಲಿರುವ ಎನ್ ಸಿಬಿ ಕಚೇರಿಗೆ ಆರ್ಯನ್ ಖಾನ್ ತಲುಪಿದರು ಎಂದು ಮೂಲಗಳು ಹೇಳಿವೆ. ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ಅಕ್ಟೋಬರ್ 3 ರಂದು ಎನ್ ಸಿಬಿ ದಾಳಿ ನಡೆಸಿದ ನಂತರ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.

ಅಕ್ಟೋಬರ್ 28 ರಂದು ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದಾಗ್ಯೂ, ಆತನ ಬಿಡುಗಡೆಗೆ ಸಂಬಂಧಿಸಿದ ದಾಖಲಾತಿಗಳು ಜೈಲಿಗೆ ತಲುಪದ ಕಾರಣ ಅಕ್ಟೋಬರ್ 30 ರವರೆಗೂ ಜೈಲಿನಿಂದ ಬಿಡುಗಡೆಯಾಗಿರಲಿಲ್ಲ.
1 ಲಕ್ಷ ವೈಯಕ್ತಿಕ ಬಾಂಡ್ , ಒಬ್ಬರು ಅಥವಾ ಇಬ್ಬರು ಶ್ಯೂರಿಟಿಯೊಂದಿಗೆ 14 ಷರತ್ತುಗಳೊಂದಿಗೆ ಕಳೆದ ಶುಕ್ರವಾರ ಹೈಕೋರ್ಟ್ ಆರ್ಯನ್ ಹಾಗೂ ಆತನ ಇಬ್ಬರು ಸ್ನೇಹಿತರಿಗೆ ಜಾಮೀನು ಮಂಜೂರು ಮಾಡಿತ್ತು. ಪ್ರತಿ ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ಒಳಗಡೆ ಎನ್ಸಿಬಿ ಮುಂದೆ ಹಾಜರಾಗಬೇಕೆಂದು ಷರತ್ತು ವಿಧಿಸಲಾಗಿತ್ತು.
ಆರ್ಯನ್ ಖಾನ್ ಮುಂಬೈ ಬಿಟ್ಟು ಹೋಗುವಂತಿಲ್ಲ. ಆರ್ಯನ್ ಖಾನ್ ತನ್ನ ಪಾಸ್ಪೋರ್ಟ್ ದಾಖಲೆಗಳನ್ನು ಮುಂಬೈ ಕೋರ್ಟ್ಗೆ ಸಲ್ಲಿಸಬೇಕು. ಇನ್ನು ಪ್ರತಿ ಶುಕ್ರವಾರ ಆರ್ಯನ್ ಖಾನ್ NCB ಅಧಿಕಾರಿಗಳ ಮುಂದೆ ಹಾಜರಾಗಬೇಕು.
ಇದರ ನಡುವೆ NCB ಅಧಿಕಾರಿಗಳು ಕರೆದಾಗ ಕಚೇರಿಗೆ ತೆರಳಿ ಅಧಿಕಾರಿಗಳ ಮುಂದೆ ಹಾಜರಾಗಬೇಕು. ಇನ್ನುಅನಿವಾರ್ಯ ಹಾಗೂ ತುರ್ತು ಕಾರಣಗಳನ್ನು ಹೊರತು ಪಡಿಸಿ ಕೋರ್ಟ್ ವಿಚಾರಣೆಗೆ ತಪ್ಪದೆ ಹಾಜರಾಗಬೇಕು.
ಇವಿಷ್ಟು ಷರತ್ತುಗಳು ಆರ್ಯನ್ ಖಾನ್ ಮುಂದಿದೆ. ಅಂದರೆ ಜಾಮೀನು ಸಿಕ್ಕರೂ ಆರ್ಯನ್ ಖಾನ್ಗೆ ಸಂಕಷ್ಟ ತಪ್ಪಿಲ್ಲ. ಷರತ್ತು ಇಲ್ಲಿಗೆ ಮುಗಿದಿಲ್ಲ. ಆರ್ಯನ್ ಖಾನ್ ಹಾಗೂ ಮತ್ತಿಬ್ಬರು ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಹಾಗೂ ಮುನ್ಮುನ್ ಧಮೇಚಾ ಮಾಧ್ಯಮದ ಮುಂದೆ ಯಾವುದೇ ಹೇಳಿಕೆ ನೀಡುವಂತಿಲ್ಲ. ಸದ್ಯದ ವಿಚಾರಣೆ ಕುರಿತು ಯಾವುದೇ ಮಾಹಿತಿಯನ್ನು ಬಾಯ್ಬಿಡುವಂತಿಲ್ಲ ಎಂದು ಸೂಚಿಸಲಾಗಿದೆ.
ಆರ್ಯನ್ ಖಾನ್ ಈ ಷರತ್ತುಗಳನ್ನು ಉಲ್ಲಂಘನೆ ಮಾಡಿದರೆ ಜಾಮೀನು ರದ್ದು ಮಾಡಿ ಮತ್ತೆ ಬಂಧನ ಮಾಡಲು ಅವಕಾಶ ಕೋರಿ NCBಗೆ ಕೋರ್ಟ್ ಬಳಿ ಮನವಿ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ತನ್ನ ಜಾಮೀನು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಆರ್ಯನ್ ಖಾನ್ ಸೇರಿ ಮೂವರಿಗೆ 1 ಲಕ್ಷ PR ಬಾಂಡ್ ಹಾಗೂ ಶ್ಯುರಿಟಿ ಆಧಾರದಲ್ಲಿ ಬೇಲ್ ನೀಡಲಾಗಿದೆ.
ಅಕ್ಟೋಬರ್ 3 ರಂದು ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಮುಂಬೈ ಕರಾಳವಳಿ ತೀರದಲ್ಲಿ ಕ್ರ್ಯೂಸ್ ಹಡಗಿನಲ್ಲಿ ನಡೆಯುತ್ತಿದ್ದ ಪಾರ್ಟಿ ಮೇಲೆ NCB ಅಧಿಕಾರಿಗಳು ಮುಫ್ತಿಯಲ್ಲಿ ದಾಳಿ ಮಾಡಿದ್ದರು. ಈ ವೇಳೆ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿತ್ತು. ಇಷ್ಟೇ ಅಲ್ಲ ಆರ್ಯನ್ ಖಾನ್ ಬಂಧನಕ್ಕೊಳಗಾಗಿದ್ದರು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications