ಭೀಮಾ ಕೋರೆಗಾಂವ್: ದೆಹಲಿ ವಿವಿ ಪ್ರಾಧ್ಯಾಪಕ ಸೇರಿ 8 ಮಂದಿ ವಿರುದ್ಧ ಚಾರ್ಜ್ಶೀಟ್
ಮುಂಬೈ, ಅಕ್ಟೋಬರ್ 09: ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಎಂಟು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ ಗೆ ಇಂದು ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಎನ್ಐಎ ವಕ್ತಾರೆ ಮತ್ತು ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಸೋನಿಯಾ ನಾರಂಗ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
2018ರ ಜನವರಿ 1ರಂದು ಭೀಮಾ-ಕೋರೆಗಾಂವ್ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದರು.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಹನಿ ಬಾಬು, ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ, ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ, ಗೋವಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕ ಆನಂದ್ ತೇಲ್ತುಂಬ್ಡೆ, ಜ್ಯೋತಿ ಜಗ್ತಾಪ್, ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
ಭಾರತದ ಒಳಗೆ ಮತ್ತು ಹೊರಗೆ ನಿಷೇಧಿತವಾಗಿರುವ ಮಾವೋವಾದಿ ಮತ್ತಿತರ ಸಂಘಟನೆಗಳ ಜೊತೆ ಸಂಪರ್ಕ ಇದ್ದು ಮದ್ದುಗುಂಡು, ಶಸ್ತ್ರಾಸ್ತ್ರಗಳ ಸರಬರಾಜು ಮಾಡುತ್ತಿದ್ದ ಮಾವೋವಾದಿಗಳ ವ್ಯವಸ್ಥಿತ ಜಾಲ ಇರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ತಮ್ಮ ಮುನ್ನೆಲೆಯ ಸಂಘಟನೆಗಳ ನೆರವಿನಿಂದ ನಗರ ಕ್ರಾಂತಿ ಮಾಡಲು ಮಾವೋವಾದಿಗಳು ಅಳವಡಿಸಿಕೊಂಡಿರುವ ರಣತಂತ್ರವೂ ಬೆಳಕಿಗೆ ಬಂದಿದೆ. ಇದರ ಜೊತೆಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಾವೋವಾದಿ ಚಟುವಟಿಕೆಗಳನ್ನ ನಡೆಸಲು ಮಾವೋವಾದಿ ಕಾರ್ಯಕರ್ತರ ಪಡೆ ಹಾಗೂ ಬೆಂಬಲಿಗರ ಮಧ್ಯೆ ಇರುವ ಹಣಕಾಸು ವ್ಯವಸ್ಥೆ ಕೂಡ ಅನಾವರಣಗೊಂಡಿದೆ" ಎಂದು ತನ್ನ ಚಾರ್ಜ್ಶೀಟ್ನಲ್ಲಿ ಎನ್ಐಎ ಆರೋಪಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications