ಭೀಮಾ ಕೋರೆಗಾಂವ್: ದೆಹಲಿ ವಿವಿ ಪ್ರಾಧ್ಯಾಪಕ ಸೇರಿ 8 ಮಂದಿ ವಿರುದ್ಧ ಚಾರ್ಜ್ಶೀಟ್
ಮುಂಬೈ, ಅಕ್ಟೋಬರ್ 09: ಎರಡು ವರ್ಷದ ಹಿಂದೆ ನಡೆದ ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಎಂಟು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ ಗೆ ಇಂದು ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಎನ್ಐಎ ವಕ್ತಾರೆ ಮತ್ತು ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಸೋನಿಯಾ ನಾರಂಗ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
2018ರ ಜನವರಿ 1ರಂದು ಭೀಮಾ-ಕೋರೆಗಾಂವ್ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದರು.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಹನಿ ಬಾಬು, ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ, ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ, ಗೋವಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕ ಆನಂದ್ ತೇಲ್ತುಂಬ್ಡೆ, ಜ್ಯೋತಿ ಜಗ್ತಾಪ್, ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.
ಭಾರತದ ಒಳಗೆ ಮತ್ತು ಹೊರಗೆ ನಿಷೇಧಿತವಾಗಿರುವ ಮಾವೋವಾದಿ ಮತ್ತಿತರ ಸಂಘಟನೆಗಳ ಜೊತೆ ಸಂಪರ್ಕ ಇದ್ದು ಮದ್ದುಗುಂಡು, ಶಸ್ತ್ರಾಸ್ತ್ರಗಳ ಸರಬರಾಜು ಮಾಡುತ್ತಿದ್ದ ಮಾವೋವಾದಿಗಳ ವ್ಯವಸ್ಥಿತ ಜಾಲ ಇರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ತಮ್ಮ ಮುನ್ನೆಲೆಯ ಸಂಘಟನೆಗಳ ನೆರವಿನಿಂದ ನಗರ ಕ್ರಾಂತಿ ಮಾಡಲು ಮಾವೋವಾದಿಗಳು ಅಳವಡಿಸಿಕೊಂಡಿರುವ ರಣತಂತ್ರವೂ ಬೆಳಕಿಗೆ ಬಂದಿದೆ. ಇದರ ಜೊತೆಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಾವೋವಾದಿ ಚಟುವಟಿಕೆಗಳನ್ನ ನಡೆಸಲು ಮಾವೋವಾದಿ ಕಾರ್ಯಕರ್ತರ ಪಡೆ ಹಾಗೂ ಬೆಂಬಲಿಗರ ಮಧ್ಯೆ ಇರುವ ಹಣಕಾಸು ವ್ಯವಸ್ಥೆ ಕೂಡ ಅನಾವರಣಗೊಂಡಿದೆ" ಎಂದು ತನ್ನ ಚಾರ್ಜ್ಶೀಟ್ನಲ್ಲಿ ಎನ್ಐಎ ಆರೋಪಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications